ಒಣಮೆಣಸಿನಕಾಯಿ ಹಂಚಿ 'ಆಕ್ರೋಶ್' ವ್ಯಕ್ತಪಡಿಸಿದ ವಾಟಾಳ್
ಬೆಂಗಳೂರು,ನವೆಂಬರ್ 28: ಕೇಂದ್ರದ ಅವ್ಯವಸ್ಥಿತ ಅಪನಗದೀಕರಣ ವಿರೋಧಿಸಿ ನವೆಂಬರ್ 28ರಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಒಣಮೆಣಸಿನಕಾಯಿ ಹಂಚಿದರು.[ಕಪ್ಪುಹಣ ಇರುವವರಿಗೆ ಮಾತ್ರವಲ್ಲ, ತೆರಿಗೆ ಅಧಿಕಾರಿಗಳಿಗೂ ನಿದ್ದೆಯಿಲ್ಲ!]

ಮೆಜೆಸ್ಟಿಕ್ ನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ವಾಟಾಳ್, ಕೇಂದ್ರ ಸರ್ಕಾರ ಅಪನಗದೀಕರಣ ಮಾಡಿರುವುದೇನೋ ಒಳ್ಳೆಯದು ಅದರೆ ಅಪನಗದೀಕರಣಕ್ಕೆ ತೆಗೆದುಕೊಂಡ ನಿಲುವುಗಳು ವ್ಯವಸ್ಥಿತವಾಗಿಲ್ಲ. ಹೀಗಾಗಿ ದೇಶದ ಕೋಟಿ ಕೋಟಿ ಜನರಿಗೆ ತೊಂದರೆಯಾಗಿದೆ. ಅರಾಜಕತೆ ತಾಂಡವವಾಡುತ್ತಿದೆ. ನವೆಂಬರ್ 8 ರಿಂದ ಬ್ಯಾಂಕ್, ಪೋಸ್ಟ್ ಆಫೀಸಿನ ಮುಂದೆ ಜನರು ಕುಳಿತು ಆನ್ನಾಹಾರ ವಿಲ್ಲದೆ ಶೌಚಾಲಯದ ವ್ಯವಸ್ಥೆಯಿಲ್ಲದೆ ಗಂಭೀರ ಪರಿಸ್ಥಿತಿ ಅನುಭವಿಸಿದ್ದಾರೆ. ಜನರು ತಮ್ಮ ಹಣವನ್ನು ತಾವೇ ತೆಗೆಯಲಾರದ ಸ್ಥಿತಿಯನ್ನು ತಲುಪಿದ್ದಾರೆ. ಎಷ್ಟೋ ಜನ ಮೃತರಾಗಿದ್ದಾರೆ ಎಂದರು.
ಕೇಂದ್ರ ಸರ್ಕಾರದ ಅಪನಗದೀಕರಣದಿಂದ ಸರ್ಕಾರಿ ಮತ್ತು ಖಾಸಗೀ ಬ್ಯಾಂಕುಗಳು ಹೆಚ್ಚು ಹೆಚ್ಚು ದುಡ್ಡು ಮಾಡಿಕೊಳ್ಳುತ್ತಿವೆ. ಸಾಮಾನ್ಯವರ್ಗ ಮತ್ತೆ ಬಡತನದ ಕಡೆ ಜಾರುತ್ತಿದೆ ಹೀಗಾಗಿ ಕನ್ನಡದ ವಾಟಾಳ್ ಪಕ್ಷ ಅಸಹನೀಯ ಸ್ಥಿತಿಯನ್ನು ತಲುಪಿರುವ ಜನರಿಗೆ ಒಣಮೆಣಸಿನಕಾಯಿಯನ್ನು ಹಂಚಿ ಖಾರವಾದ ಆಕ್ರೋಶ ವ್ಯಕ್ತಪಡಿಸುತ್ತಿದೆ ಎಂದು ತಿಳಿಸಿದರು.[ಕಾವೇರಿಗಾಗಿ ಜಮಖಾನೆ ಮೇಲೆ ವಾಟಾಳ್ ಉರುಳುಸೇವೆ]

ವೈವಿಧ್ಯಮಯವಾದ ಪ್ರತಿಭಟನೆಗಳನ್ನು ಮಾಡುವ ವಾಟಾಳ್ ನಾಗರಾಜ್ ಅವರು ಕೇಂದ್ರದ ಅವ್ಯವಸ್ಥಿತ ನಿರ್ಧಾರದ ವಿರುದ್ಧ ಒಣಮೆಣಸಿನಕಾಯಿ ಹಂಚಿ ಆಕ್ರೋಶ ವ್ಯಕ್ತ ಪಡಿಸಿರುವುದು ವಿಶೇಷವಾಗಿತ್ತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications