ಸಿದ್ದರಾಮಯ್ಯ ಪುತ್ರ ಕುರಿತು ರೆಡ್ಡಿ ಹೇಳಿಕೆಗೆ ಸರ್ವ ಪಕ್ಷಗಳ ನಾಯಕರ ಛೀಮಾರಿ
ಬೆಂಗಳೂರು, ಅಕ್ಟೋಬರ್ 31: ಜನಾರ್ದನ ರೆಡ್ಡಿಯವರಿಗೆ ಸಂಸ್ಕೃತಿ ಮನುಷ್ಯತ್ವ ಎರಡೂ ಇಲ್ಲ ಹಾಗಾಗಿ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಯಾವ ಅಗತ್ಯವೂ ನನಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗನ ಸಾವಿಗೆ ನಾನು ಮಾಡಿರುವ ಪಾಪಗಳೇ ಕಾರಣ ಎಂದು ಹೇಳುವ ಮೂಲಕ ಜನಾರ್ದನ ರೆಡ್ಡಿ ಅವರ ಸ್ಥಾನ ಅವರ ಗುಣ ಏನೆಂದು ತೋರಿಸಿಕೊಟ್ಟಿದ್ದಾರೆ. ಅವರು ಯಾವಾಗಲೂ ಕ್ರಿಮಿನಲ್ ರೀತಿಯಲ್ಲೇ ಆಲೋಚಿಸುತ್ತಾರೆ ಆದರೆ ಕ್ಷಮಿಸುವುದು ನಮ್ಮ ಸಂಸ್ಕೃತಿ, ರಾಜಕಾರಣದಲ್ಲಿ ಟೀಕೆ ಮಾಡುವುದು ಸಾಮಾನ್ಯ ಆದರೆ ಕುಟುಂಬದ ಬಗ್ಗೆ ಮಾತನಾಡುವುದನ್ನು ನಾನು ಎಂದಿಗೂ ಒಪ್ಪುವುದಿಲ್ಲ ಎಂದು ಹೇಳಿದರು.
ಜನಾರ್ದನ ರೆಡ್ಡಿಯವರೇನು ರಾಜಮನೆತನದಿಂದ ಬಂದವರಾ, ನಾನು ಮೈಸೂರಿನಲ್ಲಿ ಇರುತ್ತಾ 40 ವರ್ಷಚಾದರೂ ಒಂದು ಸ್ವಂತ ಮನೆಯನ್ನು ಕಟ್ಟುಕೊಳ್ಳಲು ಸಾಧ್ಯವಾಗಿಲ್ಲ ಆದರೆ ಜನಾರ್ದನ ರೆಡ್ಡಿ ಐಷಾರಾಮಿಯಾಗಿ ಜೀವನ ನಡೆಸುತ್ತಿದ್ದಾರೆ ಹಾಗಾದರೆ ಅವರಿಗೆ ಹಣ ಎಲ್ಲಿಂದ ಬಂತು, ಅವರ ಮಗಳ ಮದುವೆಗೆ ಅಷ್ಟೆಲ್ಲಾ ಹಣವನ್ನು ಖರ್ಚು ಮಾಡಿದ್ದಾರೆ ಆದರೆ ಅದನ್ನೆಲ್ಲಾ ಹೇಳುವ ಅಗತ್ಯ ನಮಗಿಲ್ಲ ಎಂದರು.
ಜನಾರ್ದನ ರೆಡ್ಡಿ ಸಿದ್ದರಾಮಯ್ಯ ಅವರ ಪುತ್ರ ಸಾವಿಗೆ ಸಿದ್ದರಾಮಯ್ಯ ಮಾಡಿದ ಪಾಪಕೃತ್ಯಗಳೇ ಕಾರಣ ಎಂದು ಲೇವಡಿ ಮಾಡಿದ್ದರು. ಜನಾರ್ದನ ರೆಡ್ಡಿ ಹೇಳಿಕೆಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ನಾಯಕರು ಛೀಮಾರಿ ಹಾಕಿದ್ದಾರೆ.

ಜನಾರ್ದನ ರೆಡ್ಡಿ ಕ್ಷಮೆ ಯಾಚಿಸಬೇಕು
ಸಿದ್ದರಾಮಯ್ಯ ಕುಟುಂಬದ ವಿಚಾರದ ಬಗ್ಗೆ ಜನಾರ್ದನ ರೆಡ್ಡಿ ಮಾತನಾಡಿರುವುದು ತಪ್ಪು, ಇದು ಅವರಿಗೆ ಶೋಭೆ ತರುವಂತದ್ದಲ್ಲ ಕೂಡಲೇ ಸಿದ್ದರಾಮಯ್ಯ ಅವರ ಬಳಿ ಕ್ಷಮೆ ಯಾಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಜಕೀಯದಲ್ಲಿ ಮೌಲ್ಯಯುತ ಚರ್ಚೆ ನಡೆಯಬೇಕು
ರಾಜಕೀಯದಲ್ಲಿ ಮೌಲ್ಯಯುತ ಚರ್ಚೆ ನಡೆಯಬೇಕೇ ಹೊರತು ವೈಯಕ್ತಿಕ ವಿಚಾರವನ್ನು ಚರ್ಚೆಗೆ ತೆಗೆದುಕೊಳ್ಳಬಾರದು, ಜನಾರ್ದನ ರೆಡ್ಡಿ ಸಿದ್ದರಾಮಯ್ಯ ಅವರ ಬಗ್ಗೆ ಹೇಳಿಕೆ ನೀಡಿರುವುದು ತಪ್ಪು ಎಂದು ಆರ್ ಅಶೋಕ್ ಹೇಳಿದ್ದಾರೆ.

ರಾಜಕಾರಣದ ಗಣಿಮಿತಿಯಲ್ಲಿ ಟೀಕೆ ಟಿಪ್ಪಣಿ ಇರಬೇಕು
ರಾಜಕಾರಣದ ಗಣಿಮಿತಿಯಲ್ಲಿ ಟೀಕೆ ಟಿಪ್ಪಣಿಗಳು ಇರಬೇಕು, ರಾಜಕಾರಣ ಎಂದಮೇಲೆ ಟೀಕೆ ಟಿಪ್ಪಣಿಗಳು ಸಾಮಾನ್ಯ ಆದರೆ ರಾಜಕಾರಣದಲ್ಲಿ ವೈಯಕ್ತಿಕ ವಿಚಾರಗಳನ್ನು ಎಳೆದು ತರುವುದು ಸೂಕ್ತವಲ್ಲ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ರಾಜಕಾರಣದಲ್ಲಿ ಯಾರೂ ಕೆಳಮಟ್ಟದ ರಾಜಕಾರಣ ಮಾಡಬಾರದು
ಪುತ್ರ ಶೋಕ ಎನ್ನುವುದು ದೊಡ್ಡ ಶೋಕ, ರಾಜಕಾರಣ ಮಾಡಬೇಕು ಆದರೆ ಕೆಳಮಟ್ಟದ ರಾಜಕಾರಣ ಮಾಡಬಾರದ, ಕಾರ್ಯಕ್ರಮಗಳಲ್ಲಿ ಬೇಕಾದರೆ ರಾಜಕಾರಣಿಗಳ ಬಗ್ಗೆ ಮಾತನಾಡಲಿ ಲೋಪದೋಷಗಳನ್ನು ತಿಳಿಸಲಿ ಆದರೆ ವ್ಯಕ್ತಿಗಳ ಚಾರಿತ್ರ್ಯ ಹರಣ ಮಾಡುವುದು, ಕೆಳಮಟ್ಟದ ರಾಜಕಾರಣ ಮಾಡುವುದು ತಪ್ಪು ಎಂದು ಆರ್ವಿ ದೇಶಪಾಂಡೆ ಪ್ರತಿಕ್ರಿಯೆ ನೀಡಿದ್ದಾರೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications