ಬೆಂಗಳೂರಿನಲ್ಲಿ ಕೊರೊನಾವೈರಸ್ ನಿರ್ವಹಣೆಗೆ ವಲಯವಾರು ಸಭೆ

ಬೆಂಗಳೂರು, ಜುಲೈ.21: ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊಸ ಆದೇಶವನ್ನು ನೀಡಿದ್ದಾರೆ. ಈ ಹಿನ್ನೆಲೆ ವಲಯವಾರು ಕೊವಿಡ್-19 ಸಭೆ ನಡೆಸಲಾಗುವುದು ಎಂದು ಬೆಂಗಳೂರು ಪೂರ್ವ ವಲಯದ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

Recommended Video

      Drone Prathap in Police Custody, what next..? | Oneindia Kannada

      ಬಿಬಿಎಂಪಿ ಪೂರ್ವ ವಲಯದ ವ್ಯಾಪ್ತಿಯಲ್ಲಿ‌ ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ವಸತಿ ಸಚಿವ ವಿ.ಸೋಮಣ್ಣ ಪೂರ್ವ ವಲಯದ ವ್ಯಾಪ್ತಿಯ‌ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

      Regional Meeting On Coronavirus Management In Bengaluru

      ಬೌರಿಂಗ್ ಆಸ್ಪತ್ರೆ ಪರಿಶೀಲನೆ ಬಳಿಕ ಮಾತನಾಡಿದ ಸಚಿವ ವಿ.ಸೋಮಣ್ಣ, ಬುಧವಾರದಿಂದ ಬೆಂಗಳೂರಿನಲ್ಲಿ ವಲಯವಾರು ಕೊವಿಡ್-19 ಸಭೆಯನ್ನು ನಡೆಸಲಾಗುತ್ತದೆ ಎಂದರು. ಶಾಸಕರು, ಸಂಸದರು, ಜಂಟಿ ಆಯುಕ್ತರ ಜೊತೆಗೆ ಕೊರೊನಾವೈರಸ್ ಹರಡುವಿಕೆಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಚರ್ಚಿಸಲಾಗುತ್ತದೆ ಎಂದು ತಿಳಿಸಿದರು.

      Regional Meeting On Coronavirus Management In Bengaluru


      250 ಬೆಡ್ ಕೊವಿಡ್-19 ಸೋಂಕಿತರ ಚಿಕಿತ್ಸೆಗೆ ಮೀಸಲು:

      ಬೌರಿಂಗ್ ಆಸ್ಪತ್ರೆಯಲ್ಲಿ ಒಟ್ಟು 650ಕ್ಕೂ ಹೆಚ್ಚು ಹಾಸಿಗೆಗಳನ್ನು ಹೊಂದಿದ್ದು, ಈ ಪೈಕಿ 250 ಹಾಸಿಗೆಗಳನ್ನು ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಮೀಸಲು ಇರಿಸಲಾಗಿದೆ. ಈ 250 ಬೆಡ್ ಗಳಲ್ಲಿ 150 ಆಕ್ಸಿಜನ್ ಸಹಿತ ಬೆಡ್ ಗಳು ಸೇರಿವೆ. ಶಿವಾಜಿನಗರ, ಶಾಂತಿನಗರ, ಪುಲಕೇಶಿನಗರ ಮತ್ತು ಸರ್ವಜ್ಞನಗರಗಳು ಹೆಚ್ಚು ಜನನಿಬಿಡ ಪ್ರದೇಶಗಳಾಗಿದ್ದು, ಈ ನಾಲ್ಕು ಕ್ಷೇತ್ರಗಳ ಕೊವಿಡ್ ಕೇರ್ ಮೇಲೆ ಹೆಚ್ಚಿನ ಗಮನ ಹರಿಸಲಾಗುತ್ತದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+