ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾಯಿಸುವ ಅಲೋಚನೆ ತಿರಸ್ಕಾರ, ಸಭೆಯ ವಿವರ
ಬೆಂಗಳೂರು, ಅಕ್ಟೋಬರ್ 10: ಬೆಂಗಳೂರಿನ ಶಾಲಾ ಸಮಯವನ್ನು ಬದಲಾವಣೆ ಮಾಡುವ ಕ್ರಮವನ್ನು ಖಾಸಗಿ ಶಾಲೆಗಳು, ಟ್ರಾಫಿಕ್ ಪೊಲೀಸರು, ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್ಪೋರ್ಟ್ ಕಾರ್ಪೊರೇಷನ್ (ಬಿಎಂಟಿಸಿ) ಅಧಿಕಾರಿಗಳು ತಿರಸ್ಕರಿಸಿದ್ದಾರೆ.
ಶಾಲಾ ಸಮಯ ಬದಲಾವಣೆ ಸಂಬಂಧ ಸೋಮವಾರ ನಡೆದ ಸಭೆಯಲ್ಲಿ ಟೈಮಿಂಗ್ಸ್ನಲ್ಲಿ ಯಾವುದೇ ಬದಲಾವಣೆ ಮಾಡದಿರುವ ನಿರ್ಧಾರವನ್ನು ತೆಗೆದುಕೊಂಡಿದ್ದು, ಟ್ರಾಫಿಕ್ ಸಮಸ್ಯೆಗಳನ್ನು ಪರಿಹರಿಸಲು ಶಾಲೆಯ ಸಮಯವನ್ನು ಪರಿಷ್ಕರಿಸುವ ಸಲಹೆಯನ್ನು ಮಾಡಿದ ಹೈಕೋರ್ಟ್ನ ಪೀಠಕ್ಕೆ ತಿಳಿಸಲಾತ್ತದೆ ಎಂದು ತಿಳಿದು ಬಂದಿದೆ.

ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಮಾತನಾಡಿ, "ಶಾಲಾ ಸಮಯವನ್ನು ಪರಿಷ್ಕರಿಸುವ ಸಲಹೆಯನ್ನು ಎಲ್ಲಾ ಸದಸ್ಯರು ಸರ್ವಾನುಮತದಿಂದ ತಳ್ಳಿಹಾಕಿದ್ದಾರೆ. ಬದಲಾಗಿ ಟ್ರಾಫಿಕ್ ಪೊಲೀಸ್ ಇಲಾಖೆ, ಖಾಸಗಿ ಶಾಲಾ ನಿರ್ವಹಣಾ ಅಧಿಕಾರಿಗಳು ಮತ್ತು ಇತರ ಮಧ್ಯಸ್ಥಗಾರರು ಸಾರ್ವಜನಿಕ ಸಾರಿಗೆ ಬಳಕೆ ಮತ್ತು ಟ್ರಾಫಿಕ್ ಹಾಟ್ಸ್ಪಾಟ್ಗಳನ್ನು ಗುರುತಿಸುವುದು ಮತ್ತು ಶಾಲೆಗಳ ಬಳಿ ಟ್ರಾಫಿಕ್ ಕ್ಲಿಯರ್ ಸೇರಿದಂತೆ ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ ಶಾಲೆಗಳ ಬಳಿ ದಟ್ಟಣೆಯನ್ನು ಕಡಿಮೆ ಮಾಡಲು ನಿರ್ಧರಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಲಹೆಗಳ ಪಟ್ಟಿಯನ್ನು ಹೈಕೋರ್ಟ್ಗೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಐದು ಟ್ರಾಫಿಕ್ ಹಾಟ್ಸ್ಪಾಟ್ಗಳ ಗುರುತು
ಬೆಂಗಳೂರು ಸಂಚಾರ ಪೊಲೀಸರು ನಗರದಲ್ಲಿ ಐದು ಹಾಟ್ಸ್ಪಾಟ್ಗಳನ್ನು ಗುರುತಿಸಿದ್ದು, ಖಾಸಗಿ ವಾಹನಗಳು ಭಾರಿ ಸಂಚಾರ ದಟ್ಟಣೆಯನ್ನು ಉಂಟುಮಾಡುತ್ತವೆ. ಅಂತ ಪ್ರಮುಖ ಪ್ರದೇಶಗಳೆಂದರೆ
1. ಹೆಬ್ಬಾಳ
2. ಸರ್ಜಾಪುರ
3. ಆಡುಗೋಡಿ
4. ಸಿಲ್ಕ್ ಬೋರ್ಡ್
5. ಕೇಂದ್ರ ವ್ಯಾಪಾರ ಜಿಲ್ಲೆ (ಸಿಬಿಡಿ)
ಸಂಚಾರ ಪೊಲೀಸರು ಈ ಹಾಟ್ಸ್ಪಾಟ್ಗಳನ್ನು ಮ್ಯಾಪಿಂಗ್ ಮಾಡಲು ಮತ್ತು ಟ್ರಾಫಿಕ್ ಜಾಮ್ಗಳನ್ನು ನಿವಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಈ ಬಗ್ಗೆ ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ಮಾತನಾಡಿ, ಶಾಲಾ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಸಾರಿಗೆ ಮತ್ತು ನಾಗರಿಕ ಪ್ರಜ್ಞೆಯನ್ನು ಕಲಿಸಬೇಕು. ಟ್ರಾಫಿಕ್ ಪೊಲೀಸರು ಹೆಚ್ಚಿನ ಟ್ರಾಫಿಕ್ ವಾರ್ಡನ್ಗಳನ್ನು ನಿಯೋಜಿಸಲು ಮತ್ತು ಶಾಲೆಗಳ ಬಳಿ ದಟ್ಟಣೆಯನ್ನು ನಿವಾರಿಸಲು ಸಹಾಯ ಮಾಡಲು ಪೋಷಕರನ್ನು ಪ್ರೋತ್ಸಾಹಿಸಲು ಯೋಜಿಸುತ್ತಿದ್ದಾರೆ ಎಂದು ತಿಳಿಸಿದರು.
ಶಾಲಾ ಮಕ್ಕಳಿಗಾಗಿ ಬಿಎಂಟಿಸಿ ಬಸ್ ಪೂಲಿಂಗ್ ವ್ಯವಸ್ಥೆ:
ಖಾಸಗಿ ಶಾಲಾ ಆಡಳಿತ ಮಂಡಳಿಯು ಸಾಕಷ್ಟು ಬಸ್ಗಳಿಲ್ಲದ ಶಾಲೆಗಳು ಮತ್ತು ಬಿಎಂಟಿಸಿಯೊಂದಿಗೆ ಸಹಕರಿಸಬೇಕು. ಶಾಲಾ ಮಕ್ಕಳನ್ನು ಕರೆದೊಯ್ಯಲು ಬಸ್ ಪೂಲಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಬೇಕು. ಬಿಎಂಟಿಸಿ ಬಸ್ಗಳನ್ನು ಒಂದೇ ಸುತ್ತಮುತ್ತಲಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಮತ್ತು ಮಧ್ಯಾಹ್ನ ತಲಾ ಒಂದು ಗಂಟೆ ಬಳಸಬೇಕು ಎಂದು ಪ್ರಸ್ತಾಪಿಸಲಾಯಿತು. ಸಲಹೆಗೆ ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿಯ ಕಾರ್ಯದರ್ಶಿ ಡಿ ಶಶಿಕುಮಾರ್ ಮಾತನಾಡಿ, "ಶಾಲಾ ಸಮಯವನ್ನು ಪರಿಷ್ಕರಿಸುವುದು ಸಮಸ್ಯೆಯನ್ನು ಪರಿಹರಿಸುವುದಿಲ್ಲ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಶಾಲೆಗಳು ಕಾರಣವಲ್ಲ. ಸಮಯವು ಮತ್ತಷ್ಟು ಮುಂದುವರಿದರೆ ಈ ಮಕ್ಕಳು, ಅವರ ಪೋಷಕರು ಮತ್ತು ಶಿಕ್ಷಕರು ಏನನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ನಾವು ಪರಿಗಣಿಸಬೇಕು.
ಅವರೆಲ್ಲರೂ ಇನ್ನೂ ಮೊದಲೇ ಎಚ್ಚೆತ್ತುಕೊಳ್ಳಬೇಕು. ಶಾಲಾ ಮಕ್ಕಳಿಗೆ ದೈಹಿಕ ಚಟುವಟಿಕೆಗಳಿಗೆ ಸಮಯವಿಲ್ಲ. ನಗರದ ರಸ್ತೆಗಳಲ್ಲಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ನಾವು ಉತ್ತಮ ಪರಿಹಾರಗಳನ್ನು ಕಂಡುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ವ್ಯಾಪಾರ ಜಿಲ್ಲೆಯಲ್ಲಿ ಶಾಲೆಗಳನ್ನು ಹೊಂದಿರುವ ವಿದ್ಯಾರ್ಥಿಗಳ ಪೋಷಕರು ಪೀಕ್ ಅವರ್ಗಳಲ್ಲಿ ಖಾಸಗಿ ವಾಹನಗಳ ಓವರ್ಫ್ಲೋ ಅನ್ನು ತಪ್ಪಿಸಲು ಸಾರ್ವಜನಿಕ ಸಾರಿಗೆ ಅಥವಾ ಶಾಲಾ ಬಸ್ಗಳನ್ನು ಬಳಸಲು ಮುಂದಾಗಬೇಕು. ಇನ್ನು ಪೀಕ್ ಅವರ್ಸ್ ನಲ್ಲಿ ಬೆಂಗಳೂರಿಗೆ ಬರುವ ಅಂತಾರಾಜ್ಯ ವಾಹನಗಳ ಮೇಲೂ ನಿಯಂತ್ರಣ ಅಗತ್ಯ ಎಂದರು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ












Click it and Unblock the Notifications