Breaking news:24 ಗಂಟೆಯೊಳಗೆ ರೇಖಾ ಹಂತಕರ ಬಂಧನ
ಬೆಂಗಳೂರು, ಜೂನ್ 25: ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 24 ಗಂಟೆಯೊಳಗೆ ಎಲ್ಲಾ ಆರೋಪಿಗಳನ್ನು ಬಂಧನವಾಗಿದೆ. ಕೊಲೆ ಸಂಚಿನಲ್ಲಿ ಪಾಲ್ಗೊಂಡಿದ್ದ ನಾಲ್ವರು ಆರೋಪಿಗಳನ್ನು ಶುಕ್ರವಾರ ಬೆಳಗ್ಗೆ ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಗಳಾದ ಪೀಟರ್, ಸೂರ್ಯನನ್ನು ರೋಚಕವಾಗಿ ಸೆರೆ ಹಿಡಿಯಲಾಗಿದೆ.
ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದ ಸಂಚು ರೂಪಿಸುವಲ್ಲಿ ಮೊದಲಿಗೆ ಮೂವರು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ, ಪ್ರಾಥಮಿಕ ತನಿಖೆ ನಂತರ ಮೂವರಲ್ಲ, ಆರು ಮಂದಿ ಎಂದು ತಿಳಿದು ಬಂದಿದೆ. ಪೀಟರ್, ಸೂರ್ಯ, ಸ್ಟೀಫನ್ ಮತ್ತು ಇನ್ನೂ 3 ಮಂದಿ ಭಾಗಿಯಾಗಿರುವ ಮಾಹಿತಿಯಿದ್ದು, ಆರು ಮಂದಿ ಬಗ್ಗೆ ಮಾಹಿತಿ ಕಲೆಹಾಕಲಾಗಿತ್ತು.
ಬಂಧಿತ ನಾಲ್ವರು ನೀಡಿದ ಮಾಹಿತಿ ಮೇರೆಗೆ ಪೀಟರ್, ಸೂರ್ಯನಿಗಾಗಿ ಬಲೆ ಬೀಸಿದ ಕಾಟನ್ ಪೇಟೆ ಪೊಲೀಸರು ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದು, ಸೂರ್ಯ, ಪೀಟರ್ ಹೆಡೆಮುರಿ ಕಟ್ಟಿದ್ದಾರೆ.

ಸುಮನಹಳ್ಳಿ ಶನಿ ಮಹಾತ್ಮ ದೇಗುಲ ಬಳಿ ರೇಖಾ ಹಂತಕರಿಗೆ ಶರಣಾಗಲು ಪೊಲೀಸರು ಸೂಚಿಸಿದ್ದಾರೆ. ಆದರೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದರಿಂದ ಸ್ವಯಂರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಇನ್ಸ್ ಪೆಕ್ಟರ್ ಶಿವಸ್ವಾಮಿ ಗುಂಡು ಹಾರಿಸಿ, ನಂತರ ಬಂಧಿಸಿದ್ದಾರೆ.
ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಖಾ ಸಂಬಂಧಿ ಸಂಜಯ್ ನೀಡಿದ ದೂರಿನ ಮೇರೆಗೆ ಕಾಟನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇಂದು ಆರೋಪಿಗಳಾದ ಲಂಬೂ ಪೀಟರ್ ಹಾಗೂ ಸೂರ್ಯನನ್ನು ಬಂಧಿಸಿ, ವೈದ್ಯಕೀಯ ತಪಾಸಣೆಗಾಗಿ ಸುಂಕದಕಟ್ಟೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಈ ಪ್ರಕರಣದಲ್ಲಿ ಸೂರ್ಯ ಎ1 ಆಗಿದ್ದು, ಪೀಟರ್ ಎ2 ಎಂದು ಕಾಟನ್ ಪೇಟೆ ಪೊಲೀಸರು ಹಾಕಿರುವ ಎಫ್ಐಆರ್ ನಿಂದ ತಿಳಿದು ಬಂದಿದೆ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಎಕ್ಷನ್ 34, 302 ಹಾಕಲಾಗಿದೆ.
Recommended Video
ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್ ಅಗಿದ್ದ ರೇಖಾ ಕದಿರೇಶ್ ಫ್ಲವರ್ ಗಾರ್ಡನ್ನಲ್ಲಿ ವಾಸವಾಗಿದ್ದರು. ಕೊರೊನಾಸೋಂಕು ಹಿನ್ನೆಲೆಯಲ್ಲಿ ಬಡವರಿಗೆ ಅನ್ನದಾನ ಮಾಡುತ್ತಿದ್ದರು. ಶುಕ್ರವಾರ ಬೆಳಗ್ಗೆ ಬೆಳಗ್ಗೆ 9.30 ರ ಸುಮಾರಿಗೆ ಛಲವಾದಿ ಪಾಳ್ಯದಲ್ಲಿರುವ ಕಚೇರಿಗೆ ರೇಖಾ ಬಂದಿದ್ದರು. ಕಚೇರಿಯಿಂದ ಹೊರಗೆ ಕರೆಸಿಕೊಳ್ಳುವ ಮುನ್ನ ಕಚೇರಿಯ ಎರಡು ಸಿಸಿಟಿವಿ ಕ್ಯಾಮರಾಗಳನ್ನು ಮೇಲಕ್ಕೆ ತಿರುಗಿಸಿದ್ದಾರೆ. ಹೊರಗೆ ಬಂದ ರೇಖಾ ಕದಿರೇಶ್ ಅವರನ್ನು ಬೆಳಗ್ಗೆ 10.30 ರ ಸುಮಾರಿಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಗಾಯಗೊಂಡ ರೇಖಾ ಅವರನ್ನು ಕೆಂಪೇಗೌಡ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications