ಅರಣ್ಯ ಅತಿಕ್ರಮಣ ಮೂರೇ ಎಕರೆಯೇ..? ನಿರಾಳವಾಗಿರಿ
ಬೆಂಗಳೂರು, ಡಿ. 2: ರಾಜ್ಯದಲ್ಲಿ ಅರಣ್ಯ ಅತಿಕ್ರಮಣ ತೆರವು ಕಾರ್ಯಾಚರಣೆ ತೀವ್ರಗೊಂಡಿದೆ. ಆದರೆ, ಸಣ್ಣ ಅತಿಕ್ರಮಣಕಾರರ ಕುರಿತು ರಾಜ್ಯ ಸರ್ಕಾರ ಕರುಣೆ ತೋರಿಸಿದೆ.
ಮೂರು ಎಕರೆಗಿಂತ ಕಡಿಮೆ ವ್ಯಾಪ್ತಿಯ ಭೂಮಿ ಅತಿಕ್ರಮಣ ಮಾಡಿದ್ದು, ಜೀವನಕ್ಕೆ ಅದೇ ಆಧಾರವಾಗಿದ್ದರೆ ಅದನ್ನು ವಶಪಡಿಸಿಕೊಳ್ಳುವುದಿಲ್ಲ ಎಂದು ರಾಜ್ಯ ಅರಣ್ಯ ಇಲಾಖೆ ಸಚಿವ ರಮಾನಾಥ ರೈ ಭರವಸೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಪತ್ರಕರ್ತರಿಗೆ ಮಂಗಳವಾರ ಸಚಿವರು ಮಾಹಿತಿ ನೀಡಿದರು. ರಾಜ್ಯದಲ್ಲಿ 2.80 ಲಕ್ಷ ಎಕರೆಯಷ್ಟು ಜಮೀನು ಅತಿಕ್ರಮಣಗೊಂಡಿತ್ತು. ಇದರಲ್ಲಿ 75,885 ಎಕರೆಗಳಷ್ಟು ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. [ಅನಿಲ್ ಲಾಡ್ ರೆಸಾರ್ಟ್ ಶೀಘ್ರ ನೆಲಸಮ]
ಇನ್ನೂ 2.04 ಎಕರೆಗಳಷ್ಟು ಭೂಮಿಯನ್ನು ವಶಪಡಿಸಿಕೊಳ್ಳಬೇಕಾಗಿದೆ. ಇವರಲ್ಲಿ ಮೂರು ಎಕರೆಗಿಂತ ಕಡಿಮೆ ಅತಿಕ್ರಮಣಗೊಂಡ ಭೂಮಿಗಳ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ರಮಾನಾಥ ರೈ ತಿಳಿಸಿದ್ದಾರೆ.

ಕಸ್ತೂರಿರಂಗನ್ ವರದಿ ಕುರಿತು ಪ್ರತಿಕ್ರಿಯೆ
ಕೆ. ಕಸ್ತೂರಿರಂಗನ್ ನೀಡಿರುವ ವರದಿ ಕುರಿತು ರಾಜ್ಯ ಸರ್ಕಾರ ಡಿಸೆಂಬರ್ ಅಂತ್ಯದೊಳಗೆ ಕೇಂದ್ರ ಸರ್ಕಾರಕ್ಕೆ ಅಭಿಪ್ರಾಯ ಸಲ್ಲಿಸಬೇಕಾಗಿದೆ. ಪಶ್ಚಿಮ ಘಟ್ಟದ ಗ್ರಾಮಗಳಲ್ಲಿರುವ ವಸಾಹತು, ತೋಟ ಹಾಗೂ ಕೃಷಿ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯಿಂದ ಕೈಬಿಡಲು ರಾಜ್ಯ ಮನವಿ ಸಲ್ಲಿಸಲಿದೆ ಎಂದು ರಮಾನಾಥ ರೈ ಭರವಸೆ ನೀಡಿದ್ದಾರೆ. [ಅರಣ್ಯದಲ್ಲಿ ಗಣಿಗಾರಿಕೆ, ವಿದ್ಯುತ್ ಯೋಜನೆಗೆ ಬ್ರೇಕ್]
ವರದಿ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳನ್ನು ಒಳಗೊಳ್ಳುವ ಆರು ರಾಜ್ಯಗಳಿಗೆ ಇದೇ ವರ್ಷ ಜನವರಿ ತಿಂಗಳಲ್ಲಿ ಪತ್ರ ಬರೆದಿತ್ತು. ಕೇರಳ ಈಗಾಗಲೇ ಪ್ರತಿಕ್ರಿಯೆ ಸಲ್ಲಿಸಿದೆ.
-
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications