ಅರಣ್ಯ ಅತಿಕ್ರಮಣ ಮೂರೇ ಎಕರೆಯೇ..? ನಿರಾಳವಾಗಿರಿ
ಬೆಂಗಳೂರು, ಡಿ. 2: ರಾಜ್ಯದಲ್ಲಿ ಅರಣ್ಯ ಅತಿಕ್ರಮಣ ತೆರವು ಕಾರ್ಯಾಚರಣೆ ತೀವ್ರಗೊಂಡಿದೆ. ಆದರೆ, ಸಣ್ಣ ಅತಿಕ್ರಮಣಕಾರರ ಕುರಿತು ರಾಜ್ಯ ಸರ್ಕಾರ ಕರುಣೆ ತೋರಿಸಿದೆ.
ಮೂರು ಎಕರೆಗಿಂತ ಕಡಿಮೆ ವ್ಯಾಪ್ತಿಯ ಭೂಮಿ ಅತಿಕ್ರಮಣ ಮಾಡಿದ್ದು, ಜೀವನಕ್ಕೆ ಅದೇ ಆಧಾರವಾಗಿದ್ದರೆ ಅದನ್ನು ವಶಪಡಿಸಿಕೊಳ್ಳುವುದಿಲ್ಲ ಎಂದು ರಾಜ್ಯ ಅರಣ್ಯ ಇಲಾಖೆ ಸಚಿವ ರಮಾನಾಥ ರೈ ಭರವಸೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಪತ್ರಕರ್ತರಿಗೆ ಮಂಗಳವಾರ ಸಚಿವರು ಮಾಹಿತಿ ನೀಡಿದರು. ರಾಜ್ಯದಲ್ಲಿ 2.80 ಲಕ್ಷ ಎಕರೆಯಷ್ಟು ಜಮೀನು ಅತಿಕ್ರಮಣಗೊಂಡಿತ್ತು. ಇದರಲ್ಲಿ 75,885 ಎಕರೆಗಳಷ್ಟು ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. [ಅನಿಲ್ ಲಾಡ್ ರೆಸಾರ್ಟ್ ಶೀಘ್ರ ನೆಲಸಮ]
ಇನ್ನೂ 2.04 ಎಕರೆಗಳಷ್ಟು ಭೂಮಿಯನ್ನು ವಶಪಡಿಸಿಕೊಳ್ಳಬೇಕಾಗಿದೆ. ಇವರಲ್ಲಿ ಮೂರು ಎಕರೆಗಿಂತ ಕಡಿಮೆ ಅತಿಕ್ರಮಣಗೊಂಡ ಭೂಮಿಗಳ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ರಮಾನಾಥ ರೈ ತಿಳಿಸಿದ್ದಾರೆ.

ಕಸ್ತೂರಿರಂಗನ್ ವರದಿ ಕುರಿತು ಪ್ರತಿಕ್ರಿಯೆ
ಕೆ. ಕಸ್ತೂರಿರಂಗನ್ ನೀಡಿರುವ ವರದಿ ಕುರಿತು ರಾಜ್ಯ ಸರ್ಕಾರ ಡಿಸೆಂಬರ್ ಅಂತ್ಯದೊಳಗೆ ಕೇಂದ್ರ ಸರ್ಕಾರಕ್ಕೆ ಅಭಿಪ್ರಾಯ ಸಲ್ಲಿಸಬೇಕಾಗಿದೆ. ಪಶ್ಚಿಮ ಘಟ್ಟದ ಗ್ರಾಮಗಳಲ್ಲಿರುವ ವಸಾಹತು, ತೋಟ ಹಾಗೂ ಕೃಷಿ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯಿಂದ ಕೈಬಿಡಲು ರಾಜ್ಯ ಮನವಿ ಸಲ್ಲಿಸಲಿದೆ ಎಂದು ರಮಾನಾಥ ರೈ ಭರವಸೆ ನೀಡಿದ್ದಾರೆ. [ಅರಣ್ಯದಲ್ಲಿ ಗಣಿಗಾರಿಕೆ, ವಿದ್ಯುತ್ ಯೋಜನೆಗೆ ಬ್ರೇಕ್]
ವರದಿ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳನ್ನು ಒಳಗೊಳ್ಳುವ ಆರು ರಾಜ್ಯಗಳಿಗೆ ಇದೇ ವರ್ಷ ಜನವರಿ ತಿಂಗಳಲ್ಲಿ ಪತ್ರ ಬರೆದಿತ್ತು. ಕೇರಳ ಈಗಾಗಲೇ ಪ್ರತಿಕ್ರಿಯೆ ಸಲ್ಲಿಸಿದೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications