PhD ವಿದ್ಯಾರ್ಥಿಗಳ ಫೆಲೋಶಿಫ್ ಮತ್ತೆ 25,000 ರೂ.ಗೆ ಏರಿಕೆ
ಬೆಂಗಳೂರು, ಜೂನ್ 8: ಮುಸ್ಲಿಂ, ಕ್ರೈಸ್ತ, ಜೈನ್, ಸಿಖ್ ಸೇರಿದಂತೆ ವಿವಿಧ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ PhD ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳಿಗೆ ನೀಡಲಾಗುತ್ತಿದ್ದ ಫೆಲೋಶಿಫ್ಅನ್ನು 25,000ದಿಂದ ಏಕಾಏಕಿ 8,000 ರೂಪಾಯಿಗೆ ಕಡಿತಗೊಳಿಸಲಾಗಿತ್ತು.
ಈ ಕುರಿತು ಜಾತ್ಯಾತೀತ ಜನತಾದಳ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಪತ್ರ ಬರೆದು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗಾಗುತ್ತಿರುವ ಅನ್ಯಾಯದ ಕುರಿತು ಸರ್ಕಾರದ ಗಮನಕ್ಕೆ ತಂದಿದ್ದರು.

ಅದೇ ರೀತಿ ಜೆಡಿಎಸ್ ಪಕ್ಷದ ನಾಯಕರಾದ ವೈ.ಎಸ್.ವಿ ದತ್ತ, ಇಮ್ರಾನ್ ಪಾಷ, ನಜ್ಮಾ ನಜೀರ್ರವರ ನಿರಂತರ ಹೋರಾಟದ ಪ್ರತಿಫಲವಾಗಿ ಸರ್ಕಾರ ಧಾರ್ಮಿಕ ಅಲ್ಪಸಂಖ್ಯಾತ PhD ವಿದ್ಯಾರ್ಥಿಗಳಿಗೆ ಹಿಂದಿನಂತೆ ಪ್ರತಿ ತಿಂಗಳು 25,000 ರೂಪಾಯಿಗಳನ್ನು ನೀಡುವುದಾಗಿ ತಿದ್ದುಪಡಿ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.

ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಛ್ ಇಲಾಖೆಯ ತಿದ್ದುಪಡಿ ಆದೇಶದಲ್ಲಿ, "ಪಿಎಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ 3 ವರ್ಷ ಮತ್ತು ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆಆರ್ಎಫ್ ಮಾದರಿಯಲ್ಲಿ 2 ವರ್ಷಗಳ ಅವಧಿಗೆ ಮಾತ್ರ ಪ್ರತಿ ವಾರ್ಷಿಕ 1 ಲಕ್ಷ ರೂ.ಗಳನ್ನು ನೀಡಲು ತಿದ್ದುಪಡಿ ಮಾಡಿ ಆದೇಶಿಸಿದೆ.

Recommended Video
ಅದೇ ರೀತಿ ವಿದ್ಯಾರ್ಥಿಗಳಿಂದ ಮತ್ತು ಜನಪ್ರತಿನಿಧಿಗಳಿಂದ ಫೆಲೋಶಿಫ್ ಮೊತ್ತವನ್ನು ಮೊದಲಿನ ಆದೇಶದಲ್ಲಿರುವಂತೆ ನೀಡಬೇಕೆಂದು ಕೋರಿಕೆಗಳು ಮತ್ತು ಪ್ರತಿಭಟನೆಗಳು ನಡೆಯುತ್ತಿರುವ ಕಾರಣದಿಂದ ಪಿಎಚ್ಡಿ (3 ವರ್ಷ) ಮತ್ತು ಎಂ.ಫಿಲ್ (2 ವರ್ಷ) ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಹಿಂದಿನ ಆದೇಶದಂತೆ ಪ್ರತಿ ತಿಂಗಳು 25,000 ರೂ. ಮತ್ತು ಪ್ರತಿ ವರ್ಷಕ್ಕೆ ಒಂದು ಬಾರಿಗೆ 1 ಲಕ್ಷ ರೂ. (ನಿರ್ವಹಣಾ ವೆಚ್ಚ) ಹೀಗೆ ಒಟ್ಟು 3.10 ಲಕ್ಷ ರೂ.ಗಳನ್ನು 2021-22 ಸಾಲಿನಿಂದ ಜಾರಿಗೆ ಬರುವಂತೆ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications