ಯಶವಂತಪುರ ಸೇರಿದಂತೆ ಇತರೆ ಕಸ ವಿಲೇವಾರಿ ಘಟಕಗಳ ಸ್ಥಳಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು ಅಕ್ಟೋಬರ್ 10: ಜನ ಸಾಮಾನ್ಯರ ತೊಂದರೆ ನಿವಾರಣೆಗೆ ಯಶವಂತಪುರ ವಿಧಾನಸಭೆ ಕ್ಷೇತ್ರ 5, ಬ್ಯಾಟರಾಯನಪುರದ 2, ದಾಸರಹಳ್ಳಿ, ಆನೇಕಲ್, ಮಹದೇವಪುರ ಕ್ಷೇತ್ರದಲ್ಲಿನ ಕಸ ವಿಲೇವಾರಿ ಘಟಕಗಳನ್ನು ಬೆಂಗಳೂರಿನ ಹೊರಭಾಗದಲ್ಲಿ ಜನರಹಿತ ಬೆಟ್ಟ ಗುಡ್ಡ ಪ್ರದೇಶಕ್ಕೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಜಲಸಂಪನ್ಮೂಲ, ಅರಣ್ಯ ಇಲಾಖೆ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಸಮನ್ವಯ ಸಭೆ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರು, ಕಂದಾಯ ಹಾಗೂ ಅರಣ್ಯ ಇಲಾಖೆಗಳ ಜತೆ ಚರ್ಚಿಸಿ, ಪರ್ಯಾಯ ಜಾಗಗಳನ್ನು ಗುರುತಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

"ಬೆಂಗಳೂರು ಅಪಾರವಾಗಿ ಬೆಳೆದ ಪರಿಣಾಮ ಕಸವಿಲೇವಾರಿ ಘಟಕಗಳು ನಗರದ ಹೃದಯ ಭಾಗಕ್ಕೆ ಬಂದಿವೆ. ಈ ಘಟಕಗಳ ಸುತ್ತಮುತ್ತ ನಾಲ್ಕೈದು ಕಿ.ಮೀ. ವರೆಗೆ ನಾಗರಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಬ್ಯಾಟರಾಯಣಪುರ ಶಾಸಕ, ಸಚಿವ ಕೃಷ್ಣಬೈರೇಗೌಡ, ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತಿತರರು ಅವರು ಕಸ ವಿಲೇವಾರಿ ಘಟಕ ಸ್ಥಳಾಂತರದ ವಿಚಾರವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ನಾನು ಕೂಡ ಖುದ್ದು ಸ್ಥಳ ಪರಿಶೀಲನೆ ನಡೆಸಿದ್ದೆ. ಮುಂದಿನ ದಿನಗಳಲ್ಲಿ ಜನರಿಗೆ ಕಸದ ವಾಸನೆ ಬರಬಾರದು ಎಂಬ ಉದ್ದೇಶದಿಂದ ನಗರದ ಹೊರವಲಯಕ್ಕೆ ಈ ಘಟಕಗಳ ಸ್ಥಳಾಂತರಕ್ಕೆ ನಿರ್ಧರಿಸಿದ್ದೇವೆ" ಎಂದು ತಿಳಿಸಿದರು.
"ಇದಕ್ಕಾಗಿ ನಗರದ ನಾಲ್ಕೂ ಮೂಲೆಗಳಲ್ಲಿ ಅರಣ್ಯ ಪ್ರದೇಶದ ಗಡಿ ಭಾಗಗಳಲ್ಲಿ 100 ಎಕರೆ ಜಾಗ ನೀಡಿ ಎಂದು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಮನವಿ ಮಾಡಿದ್ದು, ಸರ್ವೇ ಮಾಡಿದ ಬಳಿಕ ಜಾಗ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ನಾವು ಅರಣ್ಯ ಇಲಾಖೆಗೆ ಪರ್ಯಾಯ ಜಾಗ ನೀಡುತ್ತೇವೆ. ಅಥವಾ ಖರೀದಿ ಮಾಡುತ್ತೇವೆ ಎಂದು ತಿಳಿಸಿದರು.
ತಿಪ್ಪಗೊಂಡನಹಳ್ಳಿ ಬಫರ್ ಜೋನ್ ಪುನರ್ ನಿಗದಿ:
"ತಿಪ್ಪಗೊಂಡನಹಳ್ಳಿ ನೀರು ಸ್ವಚ್ಛತೆ ಕಾಪಾಡಲು ನಾವು ಆ ಭಾಗದ ಶಾಸಕರ ಜೊತೆ ಚರ್ಚೆ ಮಾಡಿದ್ದೇವೆ. ಮುಂದಿನ ಒಂದೂವರೆ ವರ್ಷಗಳಲ್ಲಿ ನೀರನ್ನು ತರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಈ ನೀರಿಗೆ ಯಾವುದೇ ಕೊಳಚೆ ನೀರು ಸೇರದಂತೆ ನೋಡಿಕೊಳ್ಳಬೇಕು. ಇಲ್ಲಿನ ಬಫರ್ ಜೋನ್ ಅಂತರ ಕಡಿಮೆ ವಿಚಾರವಾಗಿ 2017ರಲ್ಲಿ ಹಾಗೂ 2021ರಲ್ಲಿ ಸರ್ಕಾರ ಆದೇಶವಾಗಿದ್ದರೂ ನಗರಾಭಿವೃದ್ಧಿ ಇಲಾಖೆ ಮೂಲಕ ಜಾರಿ ಆಗದೆ ಯಾರಿಗೂ ಪ್ಲಾನ್ ಸ್ಯಾಂಕ್ಷನ್ ಮಾಡುತ್ತಿಲ್ಲ. ಇದರಿಂದಾಗಿ ಕಾನೂನು ಬಾಹೀರವಾಗಿ ಮನೆ, ಕಟ್ಟಡಗಳ ನಿರ್ಮಾಣವಾಗಿದೆ. ಈ ಭಾಗದಲ್ಲಿ ಕಟ್ಟುನಿಟ್ಟಾಗಿ ಕಾನೂನು ಜಾರಿ ಮೂಲಕ ನಿರ್ಮಾಣಕ್ಕೆ ಅವಕಾಶ ನೀಡಲಾಗುವುದು" ಎಂದು ತಿಳಿಸಿದರು.
"ನೆಲಮಂಗಲ, ಡಾಬಸ್ ಪೇಟೆ, ಶಿವಗಂಗೆ ಸೇರಿದಂತೆ ಅನೇಕ ಕಡೆಗಳಲ್ಲಿ ಪ್ಲಾನ್ ಗಳಿಗೆ ಅನುಮತಿ ನೀಡುತ್ತಿಲ್ಲ ಎಂದು ಜನ ಗಲಾಟೆ ಮಾಡುತ್ತಿದ್ದಾರೆ. ಕಳೆದ ಸರ್ಕಾರ ತಂದಿರುವ ಕಾನೂನನ್ನೇ ಜಾರಿ ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿದ್ದು, ನಗರಾಭಿವೃದ್ಧಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕಾನೂನು ತಂಡ ಒಟ್ಟಾಗಿ ಕೂತು ಚರ್ಚೆ ಮಾಡಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲಾಗುವುದು" ಎಂದರು.
"ತಿಪ್ಪಗೊಂಡನಹಳ್ಳಿಯಲ್ಲಿ 300 ಎಕರೆ ಹಾಗೂ ಹೆಸರಘಟ್ಟದಲ್ಲಿ 100 ಎಕರೆ ಜಮೀನು ಇದ್ದು, ಇಲ್ಲಿ ಬಿಡಬ್ಲ್ಯೂಎಸ್ಎಸ್ ಬಿಗೆ ಸ್ವಂತ ಸೌರ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣಕ್ಕೆ ಚಿಂತನೆ ನಡೆಸಿದ್ದೇವೆ. ಇವರು ಈಗ ಯುನಿಟ್ ಗೆ 6 ರೂ.ನಂತೆ ಸಾವಿರ ಕೋಟಿಯಷ್ಟು ಬಿಲ್ ಕಟ್ಟುತ್ತಿದ್ದಾರೆ. ಸೌರ ವಿದ್ಯುತ್ ಘಟಕದಿಂದ ಯುನಿಟ್ ಗೆ 4 ರೂ.ನಂತೆ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಬಹುದು. ಇದರಿಂದ ನಮ್ಮ ಜಮೀನನ್ನು ಒತ್ತುವರಿಯಿಂದ ಕಾಪಾಡಿಕೊಳ್ಳಬಹುದು, ಸೌರ ವಿದ್ಯುತ್ ಕೂಡ ಉತ್ಪಾದಿಸಬಹುದು. ಈ ವಿಷಯವನ್ನು ಮಾಲೀನ್ಯ ನಿಯಂತ್ರಣ ಮಂಡಳಿಗೆ ತಿಳಿಸಿದ್ದು, ಪರಿಶೀಲನೆ ಮಾಡಲಿದೆ" ಎಂದು ತಿಳಿಸಿದರು.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications