GBA: ಒತ್ತುವರಿ ತೆರವು ಸಹಿತ ಕಾರ್ಯಾಚರಣೆಗೆ ಇಳಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರ
ಬೆಂಗಳೂರು, ಸೆಪ್ಟಂಬರ್ 07: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗದಲ್ಲಿ ಅನಧಿಕೃತವಾಗಿ ಅಳವಡಿಸಿರುವ ಶಾಶ್ವತ ಪೆಟ್ಟಿಗೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಆಯುಕ್ತ ರಮೇಶ್ ಡಿ.ಎಸ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಪಾಲಿಕೆ ವ್ಯಾಪ್ತಿಯ ಪ್ರದೇಶಗಳು, ಪಾದಾಚಾರಿ ಮಾರ್ಗಗಳ ಒತ್ತುವರಿ ವಿರುದ್ಧ ಪಾಲಿಕೆ ಅಧಿಕಾರಿಗಳು ಸಮರ ಸಾರಿದ್ದಾರೆ.
ಭಾನುವಾರ ಬೆಳಗ್ಗೆ ಬೆಳ್ಳಂದೂರು ವಾರ್ಡ್ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆಯುಕ್ತ ರಮೇಶ್ ಡಿ.ಎಸ್. ಅವರು ವಿಪ್ರೋ ಬಳಿಯ ಪಾದಚಾರಿ ಮಾರ್ಗದಲ್ಲಿ ಶಾಶ್ವತವಾಗಿ ಅಳವಡಿಸಿಕೊಂಡಿರುವ ಪೆಟ್ಟಿಗೆಗಳನ್ನು ಗಮನಿಸಿದರು. ಸ್ಥಳದಲ್ಲಿಯೇ ಜೆಸಿಬಿ ಮೂಲಕ ತೆರವುಗೊಳಿಸಲಾಯಿತು. ಮತ್ತೆ ಈ ರೀತಿ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡರೆ ಕಾನೂನು ಕ್ರಮ ಜರುಗಿಸುವುದುದಾಗಿ ಅವರು ಎಚ್ಚರಿಸಿದರು.

ಆಟೋ ಟಿಪ್ಪರ್ ಮಸ್ಟರಿಂಗ್ ಕೇಂದ್ರಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಅನಂತರ ಅಪಾರ್ಟ್ ಮೆಂಟ್ ಗಳಿಂದ ಸಂಗ್ರಹಿಸುವ ಬಲ್ಕ್ ವೇಸ್ಟ್ ಪ್ರಕ್ರಿಯೆ ಸಹ ವೀಕ್ಷಿಸಿದರು. ಪಾಕಶಾಲ ಹೋಟೆಲ್ ನಲ್ಲಿರುವ ಅಡುಗೆ ಕೋಣೆಗೆ ಭೇಟಿ ನೀಡಿ ಶುಚಿತ್ವ ಕಾಪಾಡಿಕೊಂಡಿರುವುದನ್ನು ಪರಿಶೀಲಿಸಿದರು. ಶುಚಿತ್ವ ಇಲ್ಲದಿರುವುದನ್ನು ಗಮನಿಸಿ ಹೋಟೆಲ್ ಮಾಲೀಕರಿಗೆ ರೂ.25,000/- ದಂಡ ವಿಧಿಸಿ ಮತ್ತೆ ಈ ರೀತಿ ಆಗದಂತೆ ತಿಳಿ ಹೇಳಿದರು.
ಪ್ರವಾಹ ಪೀಡಿತ ಪ್ರದೇಶಗಳು
ಬೆಂಗಳೂರು ಪೂರ್ವ ನಗರ ಪಾಲಿಕೆಯ ಅಪರ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್ ರವರು ಇಂದು ಕೆ.ಆರ್ ಪುರಂ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳಲ್ಲಿ ಹೂಳೆತ್ತುವ, ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿ ತ್ವರಿತಗತಿಯಲ್ಲಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪೈ ಲೇಔಟ್ ನಲ್ಲಿ ರಾಜಕಾಲುವೆ ಪರಿಶೀಲಿಸಿ, ಸ್ಥಳದಲ್ಲಾಗುವ ಪ್ರವಾಹವನ್ನು ತಪ್ಪಿಸಲು ಸಿ.ವಿ. ರಾಮನ್ ನಗರದ ಕಡೆಯಿಂದ ಬರುವ ಮಳೆ ನೀರುಗಾಲುವೆಯ ಗೋಡೆ ಎತ್ತರಿಸಬೇಕು. ಜೊತೆಗೆ ರೈಲ್ವೆ ಹಳಿ ಕೆಳಭಾಗದ ವೆಂಟ್ ಅಗಲೀಕರಣ ಮಾಡಬೇಕು ಎಂದರು.
ಇನ್ನೂ ವಾರ್ಡ್ ಗಳಲ್ಲಿ ರಸ್ತೆಗಳ ಸ್ವಚ್ಛತೆ ಕಾಪಾಡುವ ಜೊತೆಗೆ ರಸ್ತೆಗುಂಡಿಗಳನ್ನು ಗುರುತಿಸಿ ತ್ವರಿತಗತಿಯಲ್ಲಿ ಮುಚ್ಚುಬೇಕು. ಹಳೇ ಮದ್ರಾಸ್ ರಸ್ತೆ ಯಲ್ಲಿ ಮಳೆ ಸಂದರ್ಭದಲ್ಲಿ ಜಲಾವೃತವಾಗುವುದನ್ನು ತಪ್ಪಿಸಲು, ಪೈಪ್ ಕಲ್ವರ್ಟ್ ಅನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು.
ರಾಮಮೂರ್ತಿ ನಗರ ಹಾಗೂ ಯರಣ್ಣ ಪಾಳ್ಯದಲ್ಲಿ ರಾಜಕಾಲುವೆ ಕಾಮಗಾರಿ ನಡೆಯುತ್ತಿದ್ದು, ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಟಿನ್ ಫ್ಯಾಕ್ಟರಿ ಬಳಿ ಹಾಳಾಗಿರುವ ರಸ್ತೆ ದುರಸ್ಥಿಪಡಿಸಲು ಹಾಗೂ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು. ವೆಂಗಯ್ಯನ ಕೆರೆ ಬಳಿ ಜಲಾವೃತವಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರೊಂದಿಗೆ ಮಾತನಾಡಿ ಸಮಸ್ಯೆ ಬಗೆರಹಿಸಬೇಕು ಎಂದು ಹೇಳಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications