Get Updates
Get notified of breaking news, exclusive insights, and must-see stories!

Darshan: ರೇಣುಕಾಸ್ವಾಮಿ ಹತ್ಯೆಗೆ ಟ್ವಿಸ್ಟ್, ನಾಲ್ವರು ಆರೋಪಿಗಳು ನಾಪತ್ತೆ

ಬೆಂಗಳೂರು, ಜೂನ್ 12; ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪೊಲೀಸರು ಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿದ್ದು, ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಎಲ್ಲಾ 13 ಆರೋಪಿಗಳನ್ನು ಹತ್ಯೆ ನಡೆದ ಶೆಡ್‌ಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು 13 ಆರೋಪಿಗಳನ್ನು ಬಂಧಿಸಿದ್ದಾರೆ. ಎಲ್ಲಾ ಆರೋಪಿಗಳನ್ನು ಕೋರ್ಟ್‌ 6 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ. ಈ ನಡುವೆ ಪ್ರಕರಣದಲ್ಲಿ ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಬೇಕಿದೆ.

Renuka Swamy Murder Case Police To Find 4 More Accused

ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳ ಜೊತೆ ಹೊಸದಾಗಿ ಜಗದೀಶ್ ಅಲಿಯಾಸ್ ಜಗ್ಗ, ಅನು, ರವಿ, ರಾಜು ಎಂಬ ನಾಲ್ಕು ಜನರ ಹೆಸರಗಳು ಕೇಳಿಬಂದಿವೆ. ಇವರೆಲ್ಲರೂ ಸದ್ಯಕ್ಕೆ ನಾಪತ್ತೆ ಆಗಿದ್ದಾರೆ.

ಯಾರು ಆರೋಪಿಗಳು?; ಜಗ್ಗ, ಅನು, ರವಿ, ರಾಜು ಎಂಬ ನಾಲ್ವರು ಆರೋಪಿಗಳು ಯಾರು?, ಯಾರ ಸ್ನೇಹಿತರು? ಎಂಬುದು ಇನ್ನೂ ಖಚಿತವಾಗಿಲ್ಲ. ಈ ಮಾಹಿತಿ ಅನ್ವಯ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಜೊತೆಗೆ ಅನು ಎಂಬ ಮಹಿಳೆಯ ಕೈವಾಡವೂ ಇದೆ. ಪೊಲೀಸರು ಆರೋಪಿಗಳ ಪತ್ತೆಗಾಗಿ ಹುಡುಕಾಟವನ್ನು ನಡೆಸುತ್ತಿದ್ದಾರೆ.

ಜೂನ್ 8ರ ಶನಿವಾರ ಮಧ್ಯಾಹ್ನ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆಸಿ, ಕೂಡಿ ಹಾಕಿ ಹಲ್ಲೆ, ಹತ್ಯೆ ಮಾಡಿದ ಕಾಮಾಕ್ಷಿಪಾಳ್ಯದ ಶೆಡ್‌ನಲ್ಲಿ ಬುಧವಾರ ಸ್ಥಳ ಮಹಜರು ಮಾಡಲಾಗಿದೆ. ಈ ಶೆಡ್‌ ಮಾಲೀಕ ಪಟ್ಟಣಗೆರೆ ವಿನಯ್‌ ಆರೋಪಿಯಾಗಿದ್ದು, ಪೊಲೀಸರ ವಶದಲ್ಲಿದ್ದಾನೆ.

ದರ್ಶನ್ ಸೇರಿ ಎಲ್ಲಾ 13 ಆರೋಪಿಗಳನ್ನು ಕರೆದುಕೊಂಡು ಬಂದು, ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರ ಸಮ್ಮುಖದಲ್ಲಿ ಕಾಮಾಕ್ಷಿಪಾಳ್ಯದ ಶೆಡ್‌ನಲ್ಲಿ ಒಂದೂವರೆ ಗಂಟೆ ಬುಧವಾರ ಸ್ಥಳ ಮಹಜರು ಮಾಡಲಾಗಿದೆ. ಬಳಿಕ ಎಲ್ಲರನ್ನೂ ಪುನಃ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ.

ಬಂಧನದಲ್ಲಿರುವ ಆರೋಪಿಗಳು

* ನಟ ದರ್ಶನ್
* ಪವಿತ್ರಾ ಗೌಡ
* ದರ್ಶನ್ ಸ್ನೇಹಿತ ವಿ. ವಿನಯ್
* ದರ್ಶನ್ ಮ್ಯಾನೇಜರ್ ಆರ್. ನಾಗರಾಜು
* ಎಂ. ಲಕ್ಷ್ಮಣ್
* ಎಸ್. ಪ್ರದೋಶ್
* ಕೆ. ಪವನ್
* ದೀಪಕ್ ಕುಮಾರ್
* ನಂದೀಶ್
* ಕಾರ್ತಿಕ್
* ನಿಖಿಲ್ ನಾಯಕ್
* ಕೇಶವಮೂರ್ತಿ
* ರಾಘವೇಂದ್ರ

ಆರೋಪಿ ರಾಘವೇಂದ್ರ ಚಿತ್ರದುರ್ಗದಲ್ಲಿ ದರ್ಶನ್ ಅಭಿಮಾನಿಗಳ ಸಂಘ ಕಟ್ಟಿಕೊಂಡಿದ್ದ. ರಾಘವೇಂದ್ರ ಮೂಲಕವೇ ನಟ ದರ್ಶನ್ ರೇಣುಕಾಸ್ವಾಮಿಯನ್ನು ಬೆಂಗಳೂರು ನಗರಕ್ಕೆ ಕರೆಸಿದ್ದಾರೆ.

ಚಿತ್ರದುರ್ಗದಿಂದ ರೇಣುಕಾಸ್ವಾಮಿ ಅಪಹರಿಸಿಕೊಂಡು ಬಂದು ಕಾಮಾಕ್ಷಿಪಾಳ್ಯದ ಶೆಡ್‌ವೊಂದರಲ್ಲಿ ಕೂಡಿ ಹಾಕಿ, ಹಲ್ಲೆ ಮಾಡಿ ಹತ್ಯೆ ಮಾಡಿ, ಬಳಿಕ ಶವವನ್ನು ಮೋರಿಗೆ ಎಸೆಯಲಾಗಿದೆ ಎಂಬುದು ಆರೋಪ. ರೇಣುಕಾಸ್ವಾಮಿ ಶವವನ್ನು ಸಾಗಣೆ ಮಾಡಲು ಬಳಕೆ ಮಾಡಿದ ಎರಡು ಕಾರುಗಳನ್ನು ಬುಧವಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ಮಂಗಳವಾರ ನಡೆದಿತ್ತು. ಗುರುವಾರ ಇದರ ವರದಿ ಪೊಲೀಸರ ಕೈ ಸೇರುವ ನಿರೀಕ್ಷೆ ಇದೆ. ಅಲ್ಲದೇ ಚಿತ್ರದುರ್ಗದಲ್ಲಿ ಅಪಹರಣ ಮಾಡಿದ ಕಾರಣಕ್ಕೆ ಆರೋಪಿಗಳನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಸಹ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ.

ಭಾನುವಾರ ರೇಣುಕಾಸ್ವಾಮಿ ಶವ ಸಿಕ್ಕ ಬಳಿಕ ನಾಲ್ವರು ಪೊಲೀಸರ ಮುಂದೆ ಶರಣಾಗಿದ್ದರು. ಅವರನ್ನು ವಿಚಾರಣೆ ನಡೆಸಿದ ಬಳಿಕ ಈ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಕೇಳಿ ಬಂದಿತ್ತು. ಮಂಗಳವಾರ ಬೆಳಗ್ಗೆ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಅವರನ್ನು ಬಂಧಿಸಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+