Murder Case: ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯ: ಇಂದು ಪರಪ್ಪನ ಜೈಲಿಗೆ ದರ್ಶನ್ ಗ್ಯಾಂಗ್?
ಬೆಂಗಳೂರು ಜೂನ್ 20: ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಗ್ಯಾಂಗ್ ಪೊಲೀಸ್ ಬಂಧನದಲ್ಲಿದ್ದು ಇಂದಿಗೆ ಗ್ಯಾಂಗ್ನ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಅವರೆಲ್ಲರೂ ಇಂದು ಪರಪ್ಪನ ಜೈಲಿಗೆ ವರ್ಗಾವಣೆಯಾಗುವ ಸಾಧ್ಯತೆ ಇದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಸ್ಟಡಿ ಅಂತ್ಯ ಹಿನ್ನಲೆಯಲ್ಲಿ ನಟ ದರ್ಶನ್ ಗ್ಯಾಂಗ್ನ ಸದಸ್ಯರನ್ನು ಪೊಲೀಸರು ಗುರುವಾರ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಈ ಕೊಲೆ ಪ್ರಕರಣದ ತನಿಖೆ ಸಲುವಾಗಿ ಎರಡು ಬಾರಿ ವಶಕ್ಕೆ ಪಡೆದಿರುವ ಕಾರಣ ಮತ್ತೆ ಆರೋಪಿಗಳನ್ನು ಸುಪರ್ದಿಗೆ ನೀಡುವಂತೆ ನ್ಯಾಯಾಲಯಕ್ಕೆ ಪೊಲೀಸರು ಮನವಿ ಸಲ್ಲಿಸುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಅವರ ಸಹಚರರು ಬಂಧಿತರಾಗಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು, ಹತ್ತು ದಿನಗಳು ಕಸ್ಟಡಿಗೆ ಪಡೆದು ಸುದೀರ್ಘ ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸ್ ಕಸ್ಟಡಿ ಗುರುವಾರ ಅಂತ್ಯವಾಗಲಿದ್ದು, ನಟ ದರ್ಶನ್ ಸೇರಿದಂತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಲಿದ್ದಾರೆ.
ಮುಖಾಮುಖಿ ವಿಚಾರಣೆ?
ಪೊಲೀಸ್ ಕಸ್ಟಡಿ ಅಂತ್ಯವಾದ ಕೊನೆ ದಿನ ಕೊಲೆ ಪ್ರಕರಣ ಸಂಬಂಧ ಬಂಧಿತ ಎಲ್ಲ 17 ಆರೋಪಿಗಳನ್ನು ಒಟ್ಟಾಗಿ ಕೂರಿಸಿ ಪೊಲೀಸರು ವಿಚಾರಣೆ ನಡೆಸಿ ಹೇಳಿಕೆ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ. ಒಂದು ವೇಳೆ ನಾಳೆ ಪರಪ್ಪನ ಅಗ್ರಹಾರಕ್ಕೆ ಹೋದರೆ ದರ್ಶನ್ ೨ನೇ ಬಾರಿಗೆ ಅಲ್ಲಿ ತಮ್ಮ ದಿನಗಳನ್ನು ಕಳೆಯಲಿದ್ದಾರೆ.
ಆರೋಪಿಗಳು ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಂತೆ ಪ್ರಬಲ ಸಾಕ್ಷ್ಯಾಧಾರಗಳನ್ನು ಜಪ್ತಿ ಮಾಡಿದ್ದು, ಆರೋಪಿಗಳ ಡಿಎನ್ಎ ಪರೀಕ್ಷೆಗೆ ಮುಂದಡಿ ಇಟ್ಟಿದ್ದಾರೆ. ಜೂನ್ 8ರಂದು ರೇಣುಕಾಸ್ವಾಮಿ ಮೇಲೆ ಅಮಾನುಷ ಕ್ರೌರ್ಯ ಎಸಗಿ ಕೊಲೆಗೈದ ಪಟ್ಟಣಗೆರೆ ಶೆಡ್ನಲ್ಲಿ ದೊರೆತ ರಕ್ತದ ಕಲೆಗಳು, ತಲೆಗೂದಲು ಮತ್ತಿತರ ಸೂಕ್ಷ್ಮ ವಸ್ತುಗಳನ್ನು ಸಂಗ್ರಹಿಸಿದ್ದಾರೆ.

ಈ ವಸ್ತುಗಳಿಗೂ ಆರೋಪಿಗಳಿಗೂ ಸಂಬಂಧವಿದೆ ಎಂಬುದನ್ನು ವೈಜ್ಞಾನಿಕವಾಗಿ ಸಾಬೀತುಪಡಿಸುವ ಸಲುವಾಗಿ ಡಿಎನ್ಎ ಪರೀಕ್ಷೆಗೆ ಮುಂದಾಗಿದ್ದಾರೆ.
ಬುಧವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿಆರೋಪಿ ದರ್ಶನ್, ಪವಿತ್ರಾಗೌಡ, ವಿನಯ್, ಪವನ್, ವಿನಯ್, ರಾಘವೇಂದ್ರ ಸೇರಿದಂತೆ 10 ಮಂದಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರೋಪಿಗಳ ರಕ್ತದ ಮಾದರಿ, ತಲೆಗೂದಲು ಸಂಗ್ರಹಿಸಲಾಗಿದೆ.
ಕೃತ್ಯ ನಡೆದ ಸ್ಥಳ, ಆರೋಪಿಗಳ ಬಟ್ಟೆಗಳ ಮೇಲಿನ ರಕ್ತದ ಕಲೆ ಇನ್ನಿತರೆ ಸ್ಥಳಗಳಲ್ಲಿ ದೊರೆತ ರಕ್ತ, ಕೂದಲಿಗೆ ಮ್ಯಾಚ್ ಆಗುವುದನ್ನು ಸಾಬೀತುಪಡಿಸಲು ಡಿಎನ್ಎ ಪರೀಕ್ಷೆ ನಡೆಸಲಾಗುತ್ತದೆ. ಈ ಪ್ರಕ್ರಿಯೆ ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿದ್ದರು ಎಂಬುದನ್ನು ರುಜುವಾತುಪಡಿಸಲು ಸಹಕಾರಿಯಾಗಲಿದೆ ಎಂದು ತನಿಖಾ ಮೂಲಗಳು ತಿಳಿಸಿವೆ.

ಈ ನಡುವೆ ರೇಣುಕಾಸ್ವಾಮಿ ಹತ್ಯೆ ವೇಳೆ ನಟ ದರ್ಶನ್ ಧರಿಸಿದ್ದ ದುಬಾರಿ ಬೆಲೆಯ ಪ್ಯಾಂಟ್, ಟಿ-ಶರ್ಟ್ ಮತ್ತು ಶೂವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ದರ್ಶನ್ ಧರಿಸಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ಗೆ 35 ಸಾವಿರ ರೂ. ಆದರೆ, ಶೂ ಬೆಲೆ 12 ಸಾವಿರ ರೂ. ಮತ್ತು 6,500 ರೂ. ಬೆಲೆಯ ಕಪ್ಪು ಬಣ್ಣದ ಟಿ-ಶರ್ಟ್ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ










Click it and Unblock the Notifications