ಯುವಕನ ಬೆತ್ತಲೆಗೊಳಿಸಿ ಅಟ್ಟಾಡಿಸಿದ ಗ್ಯಾಂಗ್: ರೇಣುಕಾಸ್ವಾಮಿ ಕೇಸ್ ತರ ಎಂದು ವಿಡಿಯೋ ರೆಕಾರ್ಡ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎಂದು ರೇಣುಕಾಸ್ವಾಮಿಯನ್ನ ನಟ ದರ್ಶನ್ ತೂಗುದೀಪ ಹಾಗೂ ಅವರ ಗ್ಯಾಂಗ್ ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿತ್ತು ಎನ್ನುವ ಆರೋಪ ಇದೆ. ಥೇಟ್ ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಗುಂಪೊಂದು ಯುವಕನನ್ನು ಕಿಡ್ನ್ಯಾಪ್ ಮಾಡಿ ಆತನ ಬಟ್ಟೆ ಬಿಚ್ಚಿಸಿ ಮಾರಣಾಂತಿಕ ಹ*ಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ವಿಡಿಯೋ ಮಾಡಿಕೊಂಡಿರುವ ಕಿರಾತಕರು ಇದು ರೇಣುಕಾಸ್ವಾಮಿ ಕೇಸ್ ತರ ಎಂದು ಅಟ್ಟಹಾಸ ಮೆರೆದಿದ್ದಾರೆ.
ಪವಿತ್ರಾ ಗೌಡ ಅವರ ವಿಚಾರವಾಗಿ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ, ಬೆಂಗಳೂರಿಗೆ ಕರೆತಂದು ಪಟ್ಟಣಗೆರೆ ಶೆಡ್ನಲ್ಲಿ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ರೇಣುಕಾಸ್ವಾಮಿಯ ಮರ್ಮಾಂಗಕ್ಕೆ ಹಾನಿ ಮಾಡಿ ಭೀಕರವಾಗಿ ಅಟ್ಯಾಕ್ ಮಾಡಲಾಗಿತ್ತು ಎಂಬ ಆರೋಪ ದರ್ಶನ್ ಮತ್ತವರ ಗ್ಯಾಂಗ್ ಮೇಲೆ ಇದೆ. ಈ ಕೇಸ್ ವಿಚಾರಣೆ ಇನ್ನೂ ನಡೆಯುತ್ತಿರುವಾಗಲೇ ಇಂತದ್ದೇ ಮತ್ತೊಂದು ಘಟನೆ ನಡೆದಿದೆ. ಹುಡುಗಿ ವಿಚಾರಕ್ಕೆ ಕಿರಿಕ್ ಆಗಿದ್ದು, ಗ್ಯಾಂಗ್ವೊಂದು ಯುವಕನನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?
ಕುಶಾಲ್ ಎಂಬ ಯುವಕನಿಗೆ ಕಾಲೇಜಿನಲ್ಲಿ ಯುವತಿ ಮೇಲೆ ಲವ್ ಆಗಿತ್ತು. ಎರಡು ವರ್ಷಗಳ ಕಾಲ ಇಬ್ಬರೂ ಪ್ರೀತಿಸಿದ್ದರು. ಕೆಲ ತಿಂಗಳ ಹಿಂದಷ್ಟೇ ಇವರ ಪ್ರೀತಿ ಮುರಿದುಬಿದ್ದಿತ್ತು. ಇದೇ ಸಮಯದಲ್ಲಿ ಆ ಯುವತಿಗೆ ಬೇರೆ ಹುಡುಗನೊಂದಿಗೆ ಪರಿಚಯವಾಗಿತ್ತು. ಇದರಿಂದ ಕೋಪಗೊಂಡಿದ್ದ ಕುಶಾಲ್ ಆ ಯುವತಿಗೆ ಅಶ್ಲೀಲ ಮೆಸೇಜ್ ಕಳಿಸಿದ್ದ ಎನ್ನಲಾಗಿದೆ. ಈ ವಿಚಾರ ಗೊತ್ತಾಗಿ ಯುವತಿಯ ಹೊಸ ಗೆಳೆಯ ಹಾಗೂ ಆತನ ಸ್ನೇಹಿತರು ಕುಶಾಲ್ಗೆ ಸ್ಕೆಚ್ ಹಾಕಿದ್ದರು. ಮಾತುಕತೆ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳೋಣ ಎಂದು ಕುಶಾಲ್ನನ್ನ ಬಾಗಲಗುಂಟೆಯ ಲೇಔಟ್ವೊಂದಕ್ಕೆ ಕರೆಸಿಕೊಂಡಿದ್ದರು.
ಕುಶಾಲ್ ಅಲ್ಲಿಗೆ ಬಂದ ನಂತರ ಆತನನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ್ದರು. ಬಳಿಕ ಕುಶಾಲ್ನನ್ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಯುವಕನ ಬಟ್ಟೆ ಬಿಚ್ಚಿಸಿ ವಿಕೃತಿ ಮೆರೆದಿರುವ ಕಿರಾತಕರು ಆತನ ಖಾಸಗಿ ಭಾಗವನ್ನು ತುಳಿದು ಹಿಂಸೆ ನೀಡಿದ್ದಾರೆ. ಇನ್ನು ಕುಶಾಲ್ ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡುತ್ತಿರುವುದನ್ನು ಈ ಕಿರಾತಕರು ಫೋನ್ನಲ್ಲಿ ವಿಡಿಯೋ ಕೂಡ ರೆಕಾರ್ಡ್ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಕುಶಾಲ್ ಬೇಡ, ಬೇಡ, ನನ್ನ ಬಿಟ್ಟುಬಿಡಿ ಎಂದು ಬೇಡಿಕೊಂಡಿದ್ದಾನೆ. ವಿಡಿಯೋ ಮಾಡುತ್ತಿರುವ ಪುಂಡನೊಬ್ಬ, ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರವನ್ನು ಪ್ರಸ್ತಾಪ ಮಾಡಿದ್ದಾನೆ. ಇದು ಕೂಡ ರೇಣುಕಾಸ್ವಾಮಿ ಕೊಲೆ ಕೇಸ್ನಂತೆ ಆಗುತ್ತೆ. ಎ1 ಆರೋಪಿ ಹೇಮಂತ, ಎ2 ನಾನು ಎಂದು ವಿಡಿಯೋದಲ್ಲಿ ಹೇಳಿದ್ದಾನೆ.
ಅಲ್ಲದೆ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವುದಾಗಿಯೂ ಕುಶಾಲ್ಗೆ ಬೆದರಿಕೆ ಕೂಡ ಹಾಕಿದ್ದಾರೆ. ಈ ವಿಚಾರ ತಿಳಿದು ಸೋಲದೇವನಹಳ್ಳಿ ಠಾಣೆ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೇಮಂತ್, ಯಶವಂತ್, ಶಿವಶಂಕರ್, ಶಶಾಂಕ್ ಗೌಡ ಬಂಧಿತರು ಎಂದು ತಿಳಿದುಬಂದಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿದೆ.
-
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications