Republic Day 2024: ಬೆಂಗಳೂರಲ್ಲಿ ಸಂಚಾರ ಮಾರ್ಗ ಬದಲಾವಣೆ ವಿವರ
ಬೆಂಗಳೂರು, ಜನವರಿ 24: ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಆರಂಭವಾಗಿದೆ. ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಣಿಕ್ ಷಾ ಪರೇಡ್ ಮೈದಾನದ ಒಳಗಡೆ ಹಾಗೂ ಸುತ್ತಮುತ್ತಲು ಸಂಚಾರ ಬದಲಾವಣೆ ಮಾಡಿದ್ದಾರೆ.
ಜನವರಿ 26ರಂದು ಗಣರಾಜ್ಯೋತ್ಸವ ವೀಕ್ಷಿಸಲು ಮಾಣಿಕ್ ಷಾ ಪರೇಡ್ ಮೈದಾನಕ್ಕೆ ಆಗಮಿಸುವವರು ಹಾಗೂ ಮಾಣಿಕ್ ಷಾ ಮೈದಾನದ ಸುತ್ತ ಸಂಚರಿಸುವವ ವಾಹನ ಚಾಲಕರು ತಿಳಿದುಕೊಳ್ಳಬೇಕಾದ ಮುಖ್ಯವಾದ ಮಾಹಿತಿ ಇಲ್ಲಿದೆ.

ಈ ಬಗ್ಗೆ ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದು, ಗಣರಾಜ್ಯೋತ್ಸವ ಅಂಗವಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗಡೆ ಮತ್ತು ಸುತ್ತ ಮುತ್ತಲಿನ ರಸ್ತೆಗಳಲ್ಲಿ ಈ ಕೆಳಕಂಡಂತೆ ಸಂಚಾರ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
1. ಕಾರ್ ಪಾಸ್ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳ ಪಾಸ್ಗಳಲ್ಲಿ ನಿಗದಿಪಡಿಸಿದ ಗೇಟ್ ಗಳಲ್ಲಿ ಇಳಿದುಕೊಳ್ಳುವುದು ಹಾಗೂ ಪಾಸ್ನಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡುವಂತೆ ಸಂಚಾರಿ ಪೊಲೀಸರು ಕೋರಿದ್ದಾರೆ.
2. ತುರ್ತು ಸೇವಾ ವಾಹನಗಳಾದ ಆಂಬುಲೆನ್ಸ್, ಅಗ್ನಿ ಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ., ಸಿ.ಆರ್.ಟಿ., ಬಿ.ಬಿ.ಎಂ.ಪಿ. ಹಾಗೂ ಪಿ.ಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
3. ಕಾರ್ಯಕ್ರಮಕ್ಕೆ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ 3 ರ ಮೂಲಕ ಒಳಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗದಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.
4. ದಿನಾಂಕ 26/01/2024ರ ಬೆಳಗ್ಗೆ 8:30 ಗಂಟೆಯಿಂದ ಬೆಳಗ್ಗೆ 10:30ರವರೆಗೆ ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ಜಂಕ್ಷನ್ನಿಂದ ಕಾಮರಾಜ ರಸ್ತೆ ಜಂಕ್ಷನ್ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಿ ಈ ಕೆಳಕಂಡಂತೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

* ಇನ್ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್ಫೆಂಟ್ರಿ ರಸ್ತೆ - ಸಫೀನಾ ಪ್ಲಾಜಾ ಎಡ ತಿರುವು ಪಡೆದು ಮೈನ್ ಗಾರ್ಡ್ ರಸ್ತೆ- ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
*ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಭಂಧಿಸಿದ್ದು, ಸದರಿ ವಾಹನಗಳು ವೆಬ್ ಜಂಕ್ಷನ್ ಬಳಿ ಬಲ ತಿರುವು ಪಡೆದು ಎಂ.ಜಿ.ರಸ್ತೆಯ ಮುಖಾಂತರ ಮೆಯೋಹಾಲ್, ಕಾವೇರಿ ಎಂಪೋರಿಯಂ, ಅನಿಲ್ ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬಹುದಾಗಿದೆ.
*ಅನಿಲ್ ಕುಂಬ್ಳೆ ವೃತ್ತದಿಂದ ಕಬ್ಬನ್ ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು-ಇನ್ ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾ- ಎಡಕ್ಕೆ ತಿರುವು ಪಡೆದು ಮೈನ್ಗಾರ್ಡ್ ರಸ್ತೆ- ಆಲಿ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ - ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
5. ಭದ್ರತಾ ದೃಷ್ಟಿಯಿಂದ ಪೆರೇಡ್ ಗೆ ಬರುವ ಎಲ್ಲಾ ಆಹ್ವಾನಿತರು ಮೊಬೈಲ್ ಫೋನ್, ಹೆರೆಟ್, ಕ್ಯಾಮೆರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗದಂತೆ ಕೋರಲಾಗಿದೆ. ಇಂತಹ ವಸ್ತುಗಳನ್ನು ಹೊಂದಿರುವವರನ್ನು ಒಳಗೆ ಬಿಡಲಾಗುವುದಿಲ್ಲ. ಎಲ್ಲರೂ ಬೆಳಗ್ಗೆ 08-00 ಗಂಟೆಯ ಒಳಗೆ ಮೈದಾನದಲ್ಲಿ ಆಸೀನರಾಗುವಂತೆ ಕೋರಲಾಗಿದೆ.
ವಾಹನ ನಿಲುಗಡೆ ನಿಷಿದ್ದ ರಸ್ತೆಗಳು
1. ಸೆಂಟ್ರಲ್ ಸ್ಪೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ
2. ಕಬ್ಬನ್ ರಸ್ತೆ, ಸಿ.ಟಿ.ಪಿ ವೃತ್ತದಿಂದ ಕೆ.ಆರ್ ರಸ್ತೆ & ಕಬ್ಬನ್ ರಸ್ತೆ ಜಂಕ್ಸನ್ ವರೆಗೆ
3. ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ಲೀನ್ಸ್ ವೃತ್ತದ ವರೆಗೆ
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್











Click it and Unblock the Notifications