ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಣರಾಜ್ಯೋತ್ಸವಕ್ಕೆ ಗೈರು; ಬಿಬಿಎಂಪಿ ಅಧಿಕಾರಿಗಳ ವೇತನ ಕಡಿತ

|
Google Oneindia Kannada News

ಬೆಂಗಳೂರು, ಜನವರಿ 26 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆಲವು ಅಧಿಕಾರಿಗಳು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಗೈರಾದರು. ಮೇಯರ್ ಈ ಕುರಿತು ಅಸಮಾಧಾನಗೊಂಡಿದ್ದು, ವೇತನ ಕಡಿತಗೊಳಿಸಲು ಚಿಂತಿಸಿದ್ದಾರೆ.

ಭಾನುವಾರ ಬಿಬಿಎಂಪಿ ಕಚೇರಿ ಆವರಣದಲ್ಲಿ ಧ್ವಜಾರೋಹಣ ಮಾಡಿ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಮೇಯರ್ ಗೌತಮ್ ಕುಮಾರ್ ಜೈನ್, ಆಯುಕ್ತ ಬಿ. ಎಚ್. ಅನಿಲ್ ಕುಮಾರ್ ಮುಂತಾದವರು ಪಾಲ್ಗೊಂಡಿದ್ದರು.

ಗಣರಾಜ್ಯೋತ್ಸವ ಹಬ್ಬಕ್ಕೆ ಅಣಿಯಾಗಿ ಝಗಮಗಿಸುತ್ತಿರುವ ಸೌಧಗಳು ಗಣರಾಜ್ಯೋತ್ಸವ ಹಬ್ಬಕ್ಕೆ ಅಣಿಯಾಗಿ ಝಗಮಗಿಸುತ್ತಿರುವ ಸೌಧಗಳು

ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ ದಿನಾಚರಣೆಗೆ ಹಲವು ಅಧಿಕಾರಿಗಳು ಗೈರಾಗುತ್ತಿದ್ದರು. ಆದ್ದರಿಂದ, ಇಂದು ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿತ್ತು. ಭಾನುವಾರ ಗಣರಾಜ್ಯೋತ್ಸವ ಬಂದ ಕಾರಣ ಹಲವು ಅಧಿಕಾರಿಗಳು ಗೈರಾಗಿದ್ದರು.

ಲಾಲ್‌ಬಾಗ್‌ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ: ಥೀಮ್ ಏನು? ಲಾಲ್‌ಬಾಗ್‌ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ: ಥೀಮ್ ಏನು?

Republic Day BBMP Mayor Upset With Officials

ಬಿಬಿಎಂಪಿ ಮೇಯರ್ ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗೈರಾದ ಅಧಿಕಾರಿಗಳ ಒಂದು ದಿನದ ವೇತನ ಕಡಿತಗೊಳಿಸಲು ತೀರ್ಮಾನಿಸಿದ್ದಾರೆ. ಶನಿವಾರ ಮೇಯರ್‌ ನೀಡಿದ ಸೂಚನೆಯನ್ನೂ ಅಧಿಕಾರಿಗಳು ಪಾಲಿಸಿಲ್ಲ.

ವಿಡಿಯೋ : ಕನ್ನಡ ಹಾಡಿಗೆ ಹೆಜ್ಜೆಹಾಕಿದ ಮೇಯರ್, ಆಯುಕ್ತರು ವಿಡಿಯೋ : ಕನ್ನಡ ಹಾಡಿಗೆ ಹೆಜ್ಜೆಹಾಕಿದ ಮೇಯರ್, ಆಯುಕ್ತರು

ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, "ಇದೊಂದು ರೀತಿ ಪಾಲಿಕೆ ಅಧಿಕಾರಿಗಳ ನಿರಾಸಕ್ತಿ. ಎಲ್ಲರೂ ಹಾಜರಾಗುವಂತೆ ಸೂಚಿಸಿದ್ದರೂ ಹಾಜರಾಗಿಲ್ಲ. ಗೈರಾದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುತ್ತೇವೆ" ಎಂದು ಹೇಳಿದ್ದಾರೆ.

English summary
Bruhat Bengaluru Mahanagara Palike (BBMP) mayor Gowtham Kumar Jain upset with the officials who absent for Republic day function at BBMP office.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X