ರೈಲು ಬೋಗಿ ಮೇಲಿಂದ ಕಾಣೆಯಾಗಲಿದೆ ಕಾಗದದ ಪಟ್ಟಿ!
ಬೆಂಗಳೂರು, ಸೆಪ್ಟೆಂಬರ್ 18 : ರೈಲು ಬೋಗಿಗಳ ಮೇಲೆ ಅಂಟಿಸುವ ಟಿಕೆಟ್ ಕಾಯ್ದಿರಿಸಿದವರ ಸೀಟ್, ಬರ್ತ್ ನಂಬರ್ ತಿಳಿಸುವ ಪಟ್ಟಿ ಶೀಘ್ರವೇ ಕಾಣೆಯಾಗಲಿದೆ. ಹೌದು, ಪಟ್ಟಿ ಅಂಟಿಸುವುದನ್ನು ಸ್ಥಗಿತಗೊಳಿಸಲು ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗ ತೆಗೆದುಕೊಂಡ ಕ್ರಮಗಳೇ ಇಲಾಖೆಗೆ ಮಾದರಿಯಾಗಿವೆ.
ಭಾರತೀಯ ರೈಲ್ವೆ ಪಟ್ಟಿ ಅಂಟಿಸುವುದನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಪ್ರಾಯೋಗಿಕವಾಗಿ ದೇಶದ 5 ನಿಲ್ದಾಣಗಳಲ್ಲಿ ಇದನ್ನು ಜಾರಿಗೆ ತರಲಾಗುತ್ತದೆ. ನಂತರ ಪ್ರಯಾಣಿಕರಿಂದ ಬರುವ ಪ್ರತಿಕ್ರಿಯೆ ನೋಡಿಕೊಂಡು ಎಲ್ಲಾ ನಿಲ್ದಾಣಗಳಲ್ಲಿ ಇದನ್ನು ಜಾರಿಗೊಳಿಸಲಾಗುತ್ತದೆ.

ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗ ಕಾಗದಕ್ಕಾಗಿ ಖರ್ಚು ಮಾಡುತ್ತಿದ್ದ 60 ಲಕ್ಷ ರೂ.ಗಳನ್ನು ಉಳಿತಾಯ ಮಾಡುತ್ತಿದೆ. ಬೆಂಗಳೂರು ವಿಭಾಗ ನವೆಂಬರ್ 8, 2016ರಿಂದ ಬೆಂಗಳೂರಿನ ಸೆಂಟ್ರಲ್ ಮತ್ತು ಯಶವಂತಪುರ ನಿಲ್ದಾಣದಿಂದ ಹೊರಡುವ ಎಲ್ಲಾ ರೈಲುಗಳಿಗೆ ಪಟ್ಟಿ ಅಂಟಿಸುವುದನ್ನು ಸ್ಥಗಿತಗೊಳಿಸಿದೆ.
ಪಟ್ಟಿ ಅಂಟಿಸುವುದನ್ನು ಸ್ಥಗಿತಗೊಳಿಸಿದ ಬಳಿಕ ಬರ್ತ್ ಮತ್ತು ಸೀಟು ನಂಬರ್ ತಿಳಿಸುವುದು ಹೇಗೆ? ಎಂಬುದು ಸವಾಲಾಗಿತ್ತು. ಸೀಟು ಖಚಿತವಾಗಿದ್ದರೆ ಅವರಿಗೆ ಟಿಕೆಟ್ನಲ್ಲಿಯೇ ಬರ್ತ್ ನಂಬರ್ ಕೊಡಲಾಗುತ್ತದೆ. ವೈಟಿಂಗ್ ಲಿಸ್ಟ್ನಲ್ಲಿರುವ ಪ್ರಯಾಣಿಕರಿಗೆ ಸೀಟು ಸಿಕ್ಕರೆ ಎಸ್ಎಂಎಸ್ ಮೂಲಕ ಬರ್ತ್, ಸೀಟ್ ನಂಬರ್ ಕಳಿಸಲಾಗುತ್ತಿದೆ.
ಪಿಎನ್ಆರ್ ನಂಬರ್ ನೀಡಿ ಸೀಟಿನ ಲಭ್ಯತೆ ಬಗ್ಗೆ ಮಾಹಿತಿ ಪಡೆಯುವ ವ್ಯವಸ್ಥೆ ಈಗಾಗಲೇ ಜಾರಿಯಲ್ಲಿದೆ. ಸೀಟು ಖಚಿತವಾದವರ ಪಟ್ಟಿಯನ್ನು ಈಗಾಗಲೇ ನಿಲ್ದಾಣದ ಡಿಟಿಟಲ್ ಬೋರ್ಡ್ನಲ್ಲಿ ಪ್ರಕಟಿಸಲಾಗುತ್ತಿದೆ. ಆದ್ದರಿಂದ, ಪ್ರಯಾಣಿಕರಿಗೆ ತೊಂದರೆ ಆಗುವುದಿಲ್ಲ ಎಂಬುದು ರೈಲ್ವೆ ಅಧಿಕಾರಿಗಳ ಅಭಿಪ್ರಾಯವಾಗಿದೆ. ಬೆಂಗಳೂರಿನಲ್ಲಿ ಯಶಸ್ವಿಯಾದ ಈ ಯೋಜನೆಯನ್ನು ಇತರ ನಿಲ್ದಾಣಗಳಿಗೆ ವಿಸ್ತರಿಸಲು ರೈಲ್ವೆ ಇಲಾಖೆ ಸಿದ್ಧತೆ ನಡೆಸುತ್ತಿದೆ.
-
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Railway Alert: ಚನ್ನಸಂದ್ರ ನಿಲ್ದಾಣದಲ್ಲಿ ಕಾಮಗಾರಿ, ವಿವಿಧ ರೈಲುಗಳ ಮಾರ್ಗ ಬದಲಾವಣೆ, ಸಂಚಾರ ರದ್ದು -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ











Click it and Unblock the Notifications