ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ: ಉದ್ಯಮಿ ಕಿರಣ್ ಮಜುಂದಾರ್ ಶಾ ಹೇಳಿದ್ದೇನು
ಉದ್ಯೋಗದಲ್ಲಿ ಕನ್ನಡ ಹಾಗೂ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರವು ಮತ್ತೊಮ್ಮೆ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಈಚೆಗೆ ಆಂಧ್ರಪ್ರದೇಶ ಸರ್ಕಾರವು ಅಲ್ಲಿನ ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ 75% ಮೀಸಲಾತಿಯನ್ನು ಅಧಿಕೃತವಾಗಿ ಕಡ್ಡಾಯಗೊಳಿಸಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲೂ ಜಾರಿ ಮಾಡಬೇಕು ಎಂದು ಕನ್ನಡಿಗರು ಆಗ್ರಹಿಸಿದ್ದಾರೆ. ಆದರೆ ಇದಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ಮಹೇಶ್ ಬಿ.ಆರ್ ಎನ್ನುವವರು ಆಂಧ್ರಪ್ರದೇಶ ಸರ್ಕಾರವು ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ 75% ಮೀಸಲಾತಿಯನ್ನು ಅಧಿಕೃತವಾಗಿ ಕಡ್ಡಾಯಗೊಳಿಸಿದೆ. ಇದು ತೆಲುಗು ಮಾತನಾಡುವ ಸ್ಥಳೀಯರು ಎನ್ನುವುದು ಸ್ಪಷ್ಟಪಡಿಸುತ್ತದೆ. ಕರ್ನಾಟಕ ಮತ್ತು ಇತರ ರಾಜ್ಯಗಳು ಇದನ್ನು ಅನುಸರಿಸಬೇಕೇ ಎಂದು ಪ್ರಶ್ನಿಸಿದ್ದರು. ಅಲ್ಲದೇ ಕೆಲವರು ಉದ್ಯಮಿ ಮೋಹನ್ ದಾಸ್ ಪೈ ಹಾಗೂ ಕಿರಣ್ ಮಜುಂದಾರ್ ಶಾ ಅವರು ಮೌನವಾಗಿದ್ದಾರೆ ಎಂದು ಕೆಲವರು ಪ್ರಶ್ನೆ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಕಿರಣ್ ಮಜುಂದಾರ್ ಶಾ ಅವರು, ಈ ಆದೇಶವನ್ನು ನಾನು ಒಪ್ಪುವುದಿಲ್ಲ. ಕಂಪನಿಗಳು ಅಗತ್ಯವಿರುವ ಕೌಶಲ್ಯ ಇರುವ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ನಾನು ಯಾವಾಗಲೂ ನಂಬುತ್ತೇನೆ. ಇಲ್ಲದಿದ್ದರೆ, ಅಂತಹ ನೀತಿಗಳು ವ್ಯವಹಾರಗಳಿಗೆ ಹಾನಿಕಾರಕ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದು ಕನ್ನಡಿಗರ ಅಸಮಾಧಾನಕ್ಕೆ ಕಾರಣವಾಗಿದೆ.
ಕರ್ನಾಟಕದ ದೃಷ್ಟಿಕೋನದಿಂದ ಈ ನಿಲುವು ತಪ್ಪಾಗಿದೆ. ಕರ್ನಾಟಕವು ಸ್ಥಳೀಯ ಪ್ರತಿಭೆಗಳ ಕೊರತೆಯಿಂದ ಬಳಲುತ್ತಿಲ್ಲ. ಸಣ್ಣ ಕಾರ್ಯಕ್ರಮಗಳಿಂದ ಹಿಡಿದು HR ಶಾರ್ಟ್ಲಿಸ್ಟ್ವರೆಗಿನ ಕಾರ್ಪೊರೇಟ್ ಐಟಿ ನೇಮಕಾತಿ ಪದ್ಧತಿಗಳಲ್ಲಿನ ಪಕ್ಷಪಾತದಲ್ಲಿ ನಿಜವಾದ ಸಮಸ್ಯೆ ಇದೆ. ಎಚ್ಆರ್ ಅವರ ಶಾರ್ಟ್ಲಿಸ್ಟ್ಗಳು ಹೆಚ್ಚಾಗಿ ಅದೇ ಪಕ್ಷಪಾತವನ್ನು ಪ್ರತಿಬಿಂಬಿಸುತ್ತವೆ.
ನಾನು ಬೆಂಗಳೂರಿನಲ್ಲಿ ಸುಮಾರು 25 ವರ್ಷಗಳ ಕಾಲ ಐಟಿ ಉದ್ಯಮದಲ್ಲಿ ಕೆಲಸ ಮಾಡಿದ್ದೇನೆ ಮತ್ತು ಅಂತಹ ಪ್ರಾದೇಶಿಕ ಪಕ್ಷಪಾತಗಳ ಪರಿಣಾಮವನ್ನು ವೈಯಕ್ತಿಕವಾಗಿ ಅನುಭವಿಸಿದ್ದೇನೆ. ಯುಎಸ್ ಮೂಲದ ಬಹುರಾಷ್ಟ್ರೀಯ ಕಂಪನಿಯಲ್ಲಿ ನೇಮಕಾತಿ ಅಕ್ರಮಗಳನ್ನು ಎತ್ತಿ ತೋರಿಸಿದ ನಂತರ ನಾನು ಕಾರ್ಪೊರೇಟ್ ರಾಜಕೀಯದ ಗುರಿಯಾಗಿದ್ದೆ ಎಂದು ನೆಟ್ಟಿಗರೊಬ್ಬರು ರಿಯಾಕ್ಟ್ ಮಾಡಿದ್ದಾರೆ.
ಇಲ್ಲಿನ ಯುವಕರಿಗೆ ಕೌಶಲ್ಯ ಕೊಡಿ!
ಡಾ. ರಂಜನ್ ಎನ್ನುವವರು ಮೇಡಂ, ಸ್ಥಳೀಯರ ಕೌಶಲ್ಯವರ್ಧನೆಗೆ ಏಕೆ ನೀವು ಹೂಡಿಕೆ ಮಾಡಬಾರದು. ನೀವು ನಿಮ್ಮ ಸಾಮಾಜಿಕ ಜವಾಬ್ದಾರಿಯ ಬಗ್ಗೆ ನಿಮ್ಮ ಬದ್ಧತೆಯನ್ನು ಹಲವು ವಿಧಗಳಲ್ಲಿ ತೋರಿಸಿದ್ದೀರಿ; ನೀವು ಈ ವಿಷಯದಲ್ಲೂ ಅದನ್ನೇ ಮಾಡಿ ಎಂದಿದ್ದಾರೆ.
I do not agree with this mandate. I always believe that companies will give preference to locals if they have the required skills. If not, then such policies are detrimental to businesses https://t.co/zXRz3IMDB0
— Kiran Mazumdar-Shaw (@kiranshaw) January 7, 2026
ಹೊಸ ಕೈಗಾರಿಕಾ ಘಟಕಗಳು ಬಂದಾಗ, ಸ್ಥಳೀಯರು ತಮ್ಮ ಭೂಮಿಯನ್ನು ಕಳೆದುಕೊಳ್ಳುತ್ತಾರೆ ಮತ್ತು ಮಾಲಿನ್ಯವನ್ನು ಎದುರಿಸುತ್ತಾರೆ. ಅವರು ಜೀವನೋಪಾಯಕ್ಕೆ ಅರ್ಹರಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಪ್ರಶಾಂತ್ ಎನ್ನುವವರು, ಸಂಪೂರ್ಣವಾಗಿ ತಪ್ಪು! ವಾಸ್ತವವಾಗಿ, ಸ್ಥಳೀಯ ಜನರಿಗೆ ಮೀಸಲಾತಿ ನೀಡಬೇಕು ಇಲ್ಲದಿದ್ದರೆ ವಲಸಿಗರು ತಮ್ಮ ರಾಜ್ಯದಿಂದ ನೇಮಕಾತಿ ಮಾಡಿಕೊಳ್ಳಬಹುದು. ಕೌಶಲ್ಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಕೌಶಲ್ಯಪೂರ್ಣ ಕನ್ನಡಿಗರು ಹೇರಳವಾಗಿದ್ದಾರೆ ಆದರೆ ಎಚ್ಆರ್ ಹಾಗೂ ಇತರರು ತಮ್ಮ ರಾಜ್ಯದಿಂದ ನೇಮಕ ಮಾಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
-
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Rashmika Mandanna: ರಶ್ಮಿಕಾ ಮಂದಣ್ಣ - ವಿಜಯ್ ದೇವರಕೊಂಡ ಕನಸಿನ ಹನಿಮೂನ್: ವಿಶೇಷ ವಿಡಿಯೋ ಹಂಚಿಕೊಂಡ ಜೋಡಿ -
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Tejasvi Surya: ಕೆಎಸ್ಸಿಎನಿಂದ ಐಪಿಎಲ್ ಫ್ರೀ ಟಿಕೆಟ್ ಚರ್ಚೆ: ಕಾಂಗ್ರೆಸ್ ಶಾಸಕರಿಗೆ ಸಂಸದ ತೇಜಸ್ವಿ ಸೂರ್ಯ ಕ್ಲಾಸ್ -
ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ರಾಜಾರಾಂ ತಲ್ಲೂರು ಬರಹ -
ಯುಗಾದಿ ಹಬ್ಬ - ಶಿವರಾತ್ರಿಯಂದು ನಾನು ಮಾಂಸ ತಿಂತಿನಿ, ಅದು ನನ್ನಿಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications