ಬಡ್ತಿ ಮೀಸಲಾತಿಗೆ ಹಿಂಜರಿಕೆ: ಸರ್ಕಾರದ ವಿರುದ್ಧ ಹೋರಾಟ
ಬೆಂಗಳೂರು, ಸೆಪ್ಟೆಂಬರ್ 7: ಬಡ್ತಿ ಮೀಸಲಾತಿ ಮಸೂದೆ ಅನುಷ್ಠಾನಗೊಳಿಸುವಲ್ಲಿ ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಸಮ್ಮಿಶ್ರ ಸರಕಾರದ ವಿರುದ್ಧ ಜನಾಂದೋಲನ ರೂಪಿಸಲಾಗುವುದು ಎಂದು ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಎಚ್ಚರಿಕೆ ನೀಡಿದರು.
ಬಡ್ತಿ ಮೀಸಲು ಮಸೂದೆ ಅನುಷ್ಠಾನಗೊಳಿಸದ ಸಮ್ಮಿಶ್ರ ಸರ್ಕಾರದ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ. ಈಗಾಗಲೇ ಹಿಂಬಡ್ತಿ ಪಡೆದಿರುವ ನೌಕರರು ಮಾನಸಿಕವಾಗಿ ನೊಂದಿದ್ದಾರೆ.
ಮೂವರು ನೌಕರರು ಈ ಅಪಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಕೆಲವು ಹಿಂಬಡ್ತಿ ಹೊಂದಿರುವ ನೌಕರರು ಕೆಲಸಕ್ಕೆ ಹೋಗಲು ಮುಜುಗರಪಟ್ಟು ಕೊಳ್ಳುತ್ತಿದ್ದಾರೆ. ಈ ಬಗ್ಗೆ ಸರಕಾರದ ಮೇಲೆ ಒತ್ತಡ ಹಾಕಲು ಸೆ.19 ರಂದು ಬೆಂಗಳೂರಿನ ಟೌನ್ ಹಾಲ್ ಸಭಾಂಗಣದಲ್ಲಿ ಹೋರಾಟಗಾರರ ರಾಜ್ಯಮಟ್ಟದ ಸಮಾವೇಶ ಆಯೋಜಿಸಲಾಗುವುದು ಎಂದರು.

ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ, ಸಚಿವ ಎಚ್ .ಡಿ.ರೇವಣ್ಣ ಹಾಗೂ ಅಹಿಂಸ ಸಂಘಟನೆ ಒತ್ತಡಕ್ಕೆ ಮಣಿದು ಬಡ್ತಿ ಮೀಸಲಾತಿ ಕಾಯಿದೆ ಜಾರಿಗೊಳಿಸಲು ಸರಕಾರ ಹಿಂದೇಟು ಹಾಕುತ್ತಿದೆ. ಸದನದ ನಿಂದನೆ ಆಗುತ್ತದೆ ಎಂಬುದರ ಅರಿವಿದ್ದರೂ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳ ದಲಿತ ವಿರೋಧಿ ವರ್ತನೆಯನ್ನು ದಲಿತ ಮಂತ್ರಿಗಳು ಸಹಿಸಿಕೊಂಡೇ ಸಚಿವ ಸಂಪುಟದಲ್ಲಿ ಮುಂದುವರಿದಿದ್ದಾರೆ. ಕಾಯಿದೆಯ ಅನುಷ್ಠಾನ ಕೇವಲ ಇಂದಿನ ಎಸ್ಸಿ ಎಸ್ಟಿ ನೌಕರರ, ಅಧಿಕಾರಿಗಳ ಬದುಕಿನ ಪ್ರಶ್ನೆಯಷ್ಟೆ ಆಗಿರದೆ ದಲಿತ ಜನಾಂಗದ ಮುಂದಿನ ಎಲ್ಲಾ ಪೀಳಿಗೆಗಳ ಅಸ್ತಿತ್ವದ ಪ್ರಶ್ನೆಯಾಗಿದೆ. ಕೋರ್ಟ್ ವಿಚಾರಣೆಗಳೆಂಬ ಕುಂಟು ನೆಪಗಳನ್ನು ಹೇಳಿ ಅನುಷ್ಠಾನದ ಮುಂದೂಡಿಕೆ ನಾಟಕವಾಡುತ್ತಿದ್ದಾರೆ ಎಂದು ಟೀಕಿಸಿದರು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications