ವರ್ತೂರು ಕೆರೆಯಲ್ಲಿ ತ್ಯಾಜ್ಯ ಸುರಿದ ಬಿಬಿಎಂಪಿ: ಸ್ಥಳೀಯರ ಆಕ್ರೋಶ
ಬೆಂಗಳೂರು, ಫೆಬ್ರವರಿ23: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎನ್ನುವ ಹಾಗೆ ವರ್ತೂರು ಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಬಿಎಂಪಿಯೇ ತ್ಯಾಜ್ಯವನ್ನು ತಂದು ಸುರಿಯುತ್ತಿದೆ.
ಅಲ್ಲಿನ ಸ್ಥಳೀಯರು ಅಲ್ಲಿ ತ್ಯಾಜ್ಯ ತಂದು ಸುರಿಯುತ್ತಿರುವ ಕುರಿತು ಹಲವು ಬಾರಿ ಬಿಬಿಎಂಪಿಗೆ ದೂರು ನೀಡದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಸ್ವಲ್ಪ ದಿನಗಳ ನಂತರ ಅಲ್ಲಿ ಪ್ಲಾಸ್ಟಿಕ್ ವಸ್ತುಗಳು ಹಾಗೂ ತ್ಯಾಜ್ಯವನ್ನು ತಂದು ಸುರಿಯುತ್ತಿರುವುದು ಬಿಬಿಎಂಪಿ ಪೌರಕಾರ್ಮಿಕರು ಎಂದು ತಿಳಿದು ಬಂದಿದ್ದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಣ್ಣ ಟಿಪ್ಪರ್ ಗಳು, ಬಿಬಿಎಂಪಿ ಚಿಹ್ನೆ ಅಳವಡಿಸಿರುವ ವಾಹನಗಳಲ್ಲಿಯೇ ಬಂದು ಕಸವನ್ನು ಸುರಿಯಲಾಗುತ್ತಿದೆ. ವರ್ತೂರಿನಲ್ಲಿ ಎರಡು ಪ್ರದೇಶಗಳಿವೆ ಒಂದು ವರ್ತೂರು ಕೋಡಿ ಮತ್ತೊಂದು ವರ್ತೂರು ಹಳ್ಳಿ ಪ್ರದೇಶ ಇವೆರಡೂ ಜಾಗವೂ ಪ್ಲಾಸ್ಟಿಕ್ ವಸ್ತುಗಳು ಹಾಗೂ ತ್ಯಾಜ್ಯದಿಂದ ತುಂಬಿಕೊಂಡಿದೆ. ಕರಗದ ವಸ್ತುಗಳನ್ನು ಎಲ್ಲೆಂದರಲ್ಲಿ ಹಾಕುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಈಗಾಗಲೇ ಬೆಳ್ಳಂದೂರು ಕೆರೆಯನ್ನು ಅತ್ಯಂತ ಮಲಿನವಾದ ಕೆರೆ ಎಂದು ಘೋಷಿಸಲಾಗಿದೆ. ಇದೇ ಮೊದಲ ಬಾರಿಯಲ್ಲಿ ಸಾಕಷ್ಟು ಬಾರಿ ಕೆರೆ ಪ್ರದೇಶದಲ್ಲಿ ತ್ಯಾಜ್ಯವನ್ನು ತಂದು ಹಾಕಲಾಗುತ್ತಿದೆ. ಆದರೆ ಆಶ್ಚರ್ಯವೆಂದರೆ ತ್ಯಾಜ್ಯವನ್ನು ಇಂತಹ ಪ್ರದೇಶಗಳಿಂದ ಸಾಗಿಸುವ ಹೊಣೆ ಹೊತ್ತಿರುವ ಬಿಬಿಎಂಪಿಯೇ ತ್ಯಾಜ್ಯವನ್ನು ಸುರಿದಾಗ ಯಾರ ಬಳಿ ದೂರು ನೀಡಬೇಕು ಎನ್ನುವುದು ಪ್ರಸ್ನೆಯಾಗಿದೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.
-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications