ವರ್ತೂರು ಕೆರೆಯಲ್ಲಿ ಮತ್ತೆ ಭುಗಿಲೆದ್ದ ನೊರೆ: ಸುತ್ತಲಿನ ನಿವಾಸಿಗಳಿಗೆ ಆತಂಕ
ಬೆಂಗಳೂರು, ಅಕ್ಟೋಬರ್ 6: ಬೆಳ್ಳಂದೂರು ಕೆರೆ ಆಯ್ತು ಇದೀಗ ಮತ್ತೆ ವರ್ತೂರು ಕೆರೆ ಸರದಿ, ಬೆಂಗಳೂರಲ್ಲಿ ಸುರಿಯುತ್ತಿರುವ ಮಳೆಗೆ ವರ್ತೂರು ಕೆರೆಯಲ್ಲಿ ನೊರೆ ಬರಲಾರಂಭಿಸಿದೆ.
ಹೀಗೆ ಹೋದರೆ ಒಂದು ದಿನ ನಗರದಲ್ಲಿರುವ ಎಲ್ಲಾ ಕೆರೆಗಳಲ್ಲಿ ನೊರೆ ಉತ್ಪತ್ತಿಯಾಗುವುದರಲ್ಲಿ ಸಂಶಯವಿಲ್ಲ, ಕೆರೆಯ ಕೋಡಿಗಳಲಲ್ಇ ನೊರೆಯ ಬುಗ್ಗೆಗಳು ಹಾರುತ್ತಿದ್ದು, ಅಕ್ಕಪಕ್ಕದ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರಿಗೂ ತೊಂದರೆ ಉಂಟಾಗಿದೆ.
460 ಎಕರೆ ಪ್ರದೇಶದಲ್ಲಿರುವ ಕೆರೆ, ಒತ್ತುವರಿ ಸೇರಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಇದೀಗ ಬೆಳ್ಳಂದೂರು ಕೆರೆಗೆ ಹೊಂದಿಕೊಂಡಂತಿರುವ ಈ ಕೆರೆ ಆಗಾಗ ನೊರೆ ಸಮಸ್ಯೆ ಮೂಲಕ ನಗರಾದ್ಯಂತ ಸುದ್ದಿಯಾಗುತ್ತಿತ್ತು. ರಾಸಾಯನಿಕ ತ್ಯಾಜ್ಯ ಸೇರ್ಪಡೆಯಿಂದಾಗಿ ಕೆರೆಯ ಒಡಲು ವಿಷವಾಗುತ್ತಿದ್ದರೂ, ಸ್ಥಳೀಯ ಪ್ರಾಧಿಕಾರಗಳು ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿಲ್ಲ ಎನ್ನುವುದು ಬೇಸರದ ಸಂಗತಿ.

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಹರಿಸುವುದಕ್ಕೆ ವರ್ತೂರು ಕೆರೆ ಮೂಲಕವೇ ಸಣ್ಣ ನೀರಾವರಿ ಇಲಾಖೆ ಪೈಪ್ ಲೈನ್ ಅಳವಡಿಸಿದೆ. ಇಲ್ಲಿಂದ ಸಾಗುವ ನೀರು ಕೆಸಿ ವ್ಯಾಲಿಯ ಎಸ್ಟಿಪಿಗಳಲ್ಲಿ ಸಂಸ್ಕರಣೆ ಆಗಲಿದೆ. ಕೈಗಾರಿಕೆಗಳಿಂದ ಹರಿಯುವ ತ್ಯಾಜ್ಯ ತಡೆದಲ್ಲಿ ಸ್ವಲ್ಪ ಮಟ್ಟಿಗೆ ನೊರೆ ಸಮಸ್ಯೆ ನಿಯಂತ್ರಿಸಬಹುದು ಎಂದು ತಜ್ಞರು ಹೇಳಿದ್ದಾರೆ.
ಮಳೆ ಬರುತ್ತಿರುವುದರಿಂದ ನೊರೆ ಪ್ರಮಾಣ ಹೆಚ್ಚಿದೆ, ಕಾರ್ಖಾನೆಗಳಿಂದ ಬರುವ ವಿಷಕಾರಕ ಅಂಶಗಳು ಎಲ್ಲಿಯವರೆಗೆ ಕರೆಯನ್ನು ಸೇರುತ್ತವೆಯೋ ಅಲ್ಲಿಯವರೆಗೂ ಈ ನೊರೆ ಹೀಗೆಯೇ ಮುಂದುವರೆಯಲಿದೆ. ಆದರೆ ಇದರಿಂದ ಸುತ್ತಮುತ್ತಲು ವಾಸಿಸುವ ಜನರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಲಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications