ಯುವತಿ ತೊಡೆ ಮೇಲಿದ್ದ ಟ್ಯಾಟೂ ಕ್ಲಿಕ್ಕಿಸಿದ ಮ್ಯಾನೇಜರ್
ಬೆಂಗಳೂರು, ನ. 21 : ಈತನಿಗೂ ಟ್ಯಾಟೋ ಹಾಕಿಸಿಕೊಳ್ಳುವ ಆಸೆಯಂತೆ, ಹಾಗಾಗಿ ಯುವತಿಯ ತೊಡೆಯ ಮೇಲೆ ಸುಂದರವಾಗಿ ಕಂಡ ಟ್ಯಾಟೂ ಚಿತ್ರವನ್ನು ತನ್ನ ಮೊಬೈಲ್ ನಲ್ಲಿ ಕ್ಲಿಕ್ಕಿಸಿದನಂತೆ!
ಕಾಫಿ ಶಾಪ್ ನಲ್ಲಿ ಯುವತಿ ಫೋಟೋ ತೆಗೆದ ಎಡಿಜಿಪಿ ರವೀಂದ್ರನಾಥ್ ಪ್ರಕರಣ ಮತ್ತೆ ಮರುಕಳಿಸಿದೆ. ಆದರೆ ಈ ಬಾರಿ ಫೋಟೋ ಕ್ಲಿಕ್ಕಿಸಿದ್ದು ಕೆಎಫ್ ಸಿಯ ಮ್ಯಾನೇಜರ್. ಯುವತಿಯ ತೊಡೆ ಮೇಲಿದ್ದ ಟ್ಯಾಟೂ ಕ್ಲಿಕ್ಕಿಸಿದ ಆರೋಪದ ಮೇಲೆ ಹುಳಿಮಾವು ಕೆಎಫ್ ಸಿ ಮ್ಯಾನೇಜರ್ ವಿಕಾಸ್(28) ಎಂಬಾತನನ್ನು ಬಂಧಿಸಲಾಗಿದೆ.[ಕೆಫೆಯಲ್ಲಿ ಯುವತಿಯರ ಫೋಟೋ ಕ್ಲಿಕ್ಕಿಸಿದ ಎಡಿಜಿಪಿ]

ನ. 2ರಂದು ಅಸ್ಸಾಂ ಮೂಲದ ಯುವತಿಯೊಬ್ಬಳು ತನ್ನ ಸ್ನೇಹಿತರ ಜತೆ ಮೀನಾಕ್ಷಿ ಮಾಲ್ ನಲ್ಲಿರುವ ಕೆಎಫ್ ಸಿ ರೆಸ್ಟೋರೆಂಟ್ ಗೆ ತೆರಳಿದ್ದರು. ಅವರಿಬ್ಬರು ತಿಂಡಿ ತಿನ್ನುತ್ತಿರುವಾಗ ಮ್ಯಾನೇಜರ್ ವಿಕಾಸ್ ತನ್ನ ಮೊಬೈಲ್ ನಲ್ಲಿ ಯುವತಿಯ ಚಿತ್ರ ಸೆರೆಹಿಡಿದಿದ್ದಾನೆ. ತಕ್ಷಣ ಇದನ್ನು ಪ್ರಶ್ನಿಸಿದ ಯುವತಿ, ಮೊಬೈಲ್ ತೋರಿಸುವಂತೆ ಕೇಳಿದ್ದಾಳೆ.
ಈ ವೇಳೆ ಎಲ್ಲ ಗ್ರಾಹಕರು ಮತ್ತು ರೆಸ್ಟೋರೆಂಟ್ ನ ಇತರ ಸಿಬ್ಬಂದಿ ಒಟ್ಟಾಗಿದ್ದಾರೆ. ಮೊಬೈಲ್ ಪರಿಶೀಲಿಸಿದಾಗ ಯುವತಿ ಮತ್ತು ಆಕೆಯ ತೊಡೆಯ ಮೇಲೆ ಹಾಕಿಕೊಂಡ ಟ್ಯಾಟೂ ತೆಗೆದಿದ್ದು ಕಂಡುಬಂದಿದೆ.[ಸೆರೆಹಿಡಿದ ಚಿತ್ರಗಳು ಪತ್ತೆ]
ತೊಡೆ ಮೇಲೆ ಹಾಕಿಕೊಂಡ ಟ್ಯಾಟೂ ಸುಂದರವಾಗಿ ಕಾಣುತ್ತಿತ್ತು. ನಾನು ಅಂಥದ್ದೇ ಟ್ಯಾಟೂ ಹಾಕಿಸಿಕೊಳ್ಳಬೇಕೆಂದು ಫೋಟೋ ತೆಗೆದೆ ಎಂದು ವಿಕಾಸ್ ಹೇಳಿದ್ದ. ನಂತರ ಘಟನೆಗೆ ಸಂಬಂಧಿಸಿ ನವೆಂಬರ್ 18 ರಂದು ಯುವತಿ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು. ಕೋಡಿಚಿಕ್ಕನಹಳ್ಳಿಯಲ್ಲಿ ವಾಸವಿದ್ದ ಆರೋಪಿಯನ್ನು ಬಂಧಿಸಿ, ಮೊಬೈಲ್ ನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.
ಘಟನೆ ದಿನವೇ ವಿಕಾಸ್ ನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಪ್ರಕರಣ ನಡೆದ ಸಂದರ್ಭ ಕೆಎಫ್ ಸಿ ಅಪರೇಷನಲ್ ಮ್ಯಾನೇಜರ್ ಮತ್ತು ಸಿಬ್ಬಂದಿ ದೂರು ನೀಡದಂತೆ ಯುವತಿಯ ಮನವೊಲಿಸಲು ಪ್ರಯತ್ನಿಸಿದ್ದರು. ಯುವತಿ ಪಾಲಕರನ್ನು ಸಂಪರ್ಕಿಸುವುದಾಗಿ ಹೇಳಿದ್ದರಿಂದ ದೂರು ನೀಡಲು ತಡವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications