ಯುವತಿ ತೊಡೆ ಮೇಲಿದ್ದ ಟ್ಯಾಟೂ ಕ್ಲಿಕ್ಕಿಸಿದ ಮ್ಯಾನೇಜರ್
ಬೆಂಗಳೂರು, ನ. 21 : ಈತನಿಗೂ ಟ್ಯಾಟೋ ಹಾಕಿಸಿಕೊಳ್ಳುವ ಆಸೆಯಂತೆ, ಹಾಗಾಗಿ ಯುವತಿಯ ತೊಡೆಯ ಮೇಲೆ ಸುಂದರವಾಗಿ ಕಂಡ ಟ್ಯಾಟೂ ಚಿತ್ರವನ್ನು ತನ್ನ ಮೊಬೈಲ್ ನಲ್ಲಿ ಕ್ಲಿಕ್ಕಿಸಿದನಂತೆ!
ಕಾಫಿ ಶಾಪ್ ನಲ್ಲಿ ಯುವತಿ ಫೋಟೋ ತೆಗೆದ ಎಡಿಜಿಪಿ ರವೀಂದ್ರನಾಥ್ ಪ್ರಕರಣ ಮತ್ತೆ ಮರುಕಳಿಸಿದೆ. ಆದರೆ ಈ ಬಾರಿ ಫೋಟೋ ಕ್ಲಿಕ್ಕಿಸಿದ್ದು ಕೆಎಫ್ ಸಿಯ ಮ್ಯಾನೇಜರ್. ಯುವತಿಯ ತೊಡೆ ಮೇಲಿದ್ದ ಟ್ಯಾಟೂ ಕ್ಲಿಕ್ಕಿಸಿದ ಆರೋಪದ ಮೇಲೆ ಹುಳಿಮಾವು ಕೆಎಫ್ ಸಿ ಮ್ಯಾನೇಜರ್ ವಿಕಾಸ್(28) ಎಂಬಾತನನ್ನು ಬಂಧಿಸಲಾಗಿದೆ.[ಕೆಫೆಯಲ್ಲಿ ಯುವತಿಯರ ಫೋಟೋ ಕ್ಲಿಕ್ಕಿಸಿದ ಎಡಿಜಿಪಿ]

ನ. 2ರಂದು ಅಸ್ಸಾಂ ಮೂಲದ ಯುವತಿಯೊಬ್ಬಳು ತನ್ನ ಸ್ನೇಹಿತರ ಜತೆ ಮೀನಾಕ್ಷಿ ಮಾಲ್ ನಲ್ಲಿರುವ ಕೆಎಫ್ ಸಿ ರೆಸ್ಟೋರೆಂಟ್ ಗೆ ತೆರಳಿದ್ದರು. ಅವರಿಬ್ಬರು ತಿಂಡಿ ತಿನ್ನುತ್ತಿರುವಾಗ ಮ್ಯಾನೇಜರ್ ವಿಕಾಸ್ ತನ್ನ ಮೊಬೈಲ್ ನಲ್ಲಿ ಯುವತಿಯ ಚಿತ್ರ ಸೆರೆಹಿಡಿದಿದ್ದಾನೆ. ತಕ್ಷಣ ಇದನ್ನು ಪ್ರಶ್ನಿಸಿದ ಯುವತಿ, ಮೊಬೈಲ್ ತೋರಿಸುವಂತೆ ಕೇಳಿದ್ದಾಳೆ.
ಈ ವೇಳೆ ಎಲ್ಲ ಗ್ರಾಹಕರು ಮತ್ತು ರೆಸ್ಟೋರೆಂಟ್ ನ ಇತರ ಸಿಬ್ಬಂದಿ ಒಟ್ಟಾಗಿದ್ದಾರೆ. ಮೊಬೈಲ್ ಪರಿಶೀಲಿಸಿದಾಗ ಯುವತಿ ಮತ್ತು ಆಕೆಯ ತೊಡೆಯ ಮೇಲೆ ಹಾಕಿಕೊಂಡ ಟ್ಯಾಟೂ ತೆಗೆದಿದ್ದು ಕಂಡುಬಂದಿದೆ.[ಸೆರೆಹಿಡಿದ ಚಿತ್ರಗಳು ಪತ್ತೆ]
ತೊಡೆ ಮೇಲೆ ಹಾಕಿಕೊಂಡ ಟ್ಯಾಟೂ ಸುಂದರವಾಗಿ ಕಾಣುತ್ತಿತ್ತು. ನಾನು ಅಂಥದ್ದೇ ಟ್ಯಾಟೂ ಹಾಕಿಸಿಕೊಳ್ಳಬೇಕೆಂದು ಫೋಟೋ ತೆಗೆದೆ ಎಂದು ವಿಕಾಸ್ ಹೇಳಿದ್ದ. ನಂತರ ಘಟನೆಗೆ ಸಂಬಂಧಿಸಿ ನವೆಂಬರ್ 18 ರಂದು ಯುವತಿ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು. ಕೋಡಿಚಿಕ್ಕನಹಳ್ಳಿಯಲ್ಲಿ ವಾಸವಿದ್ದ ಆರೋಪಿಯನ್ನು ಬಂಧಿಸಿ, ಮೊಬೈಲ್ ನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.
ಘಟನೆ ದಿನವೇ ವಿಕಾಸ್ ನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಪ್ರಕರಣ ನಡೆದ ಸಂದರ್ಭ ಕೆಎಫ್ ಸಿ ಅಪರೇಷನಲ್ ಮ್ಯಾನೇಜರ್ ಮತ್ತು ಸಿಬ್ಬಂದಿ ದೂರು ನೀಡದಂತೆ ಯುವತಿಯ ಮನವೊಲಿಸಲು ಪ್ರಯತ್ನಿಸಿದ್ದರು. ಯುವತಿ ಪಾಲಕರನ್ನು ಸಂಪರ್ಕಿಸುವುದಾಗಿ ಹೇಳಿದ್ದರಿಂದ ದೂರು ನೀಡಲು ತಡವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
ಐಪಿಎಲ್ ಪಂದ್ಯಗಳ ವೇಳೆ ಅಪ್ರಾಪ್ತರನ್ನು ಬಳಸಿ ಮೊಬೈಲ್ ಕಳ್ಳತನ: ಅಂತರರಾಜ್ಯ ಗ್ಯಾಂಗ್ ಬೆಂಗಳೂರಿನಲ್ಲಿ ವಶಕ್ಕೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್












Click it and Unblock the Notifications