ಮಾಜಿ ಡಿವೈಎಸ್ಪಿ ಪುತ್ರನ ಆಟಾಟೋಪ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಬೆಂಗಳೂರು, ಅಕ್ಟೋಬರ್ 5: ನಿವೃತ್ತ ಡಿವೈಎಸ್ ಪಿ ಪುತ್ರನೊಬ್ಬ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ನಲಪಾಡ್ ರೌಡಿಸಂ ಮತ್ತೊಮ್ಮೆ ಕಣ್ಣುಮುಂದೆ ಬಂದಂತಾಗಿದೆ.
ಮಾಜಿ ಡಿವೈಎಸ್ಪಿ ಪುತ್ರನೊಬ್ಬ ಹೋಟೆಲ್ ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ಬಿಯರ್ ಬಾಟಲಿಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಮ್ಮಗೊಂಡನಹಳ್ಳಿ ನಿವಾಸಿ ಎನ್.ಯುವರಾಜ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ, ನಿವೃತ್ತ ಡಿವೈಎಸ್ಪಿ ಪುತ್ರ ಜಕ್ಕೂರು ನಿವಾಸಿ ಸುಮನ್, ವಿಕ್ರಮ್ ತಲೆ ಮರೆಸಿಕೊಂಡಿದ್ದಾರೆ. ಹೈಗ್ರೌಂಡ್ಸ್ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಆರೋಪಿ ಸುಮನ್ ಡಿವೈಎಸ್ಪಿ ಕೋನಪ್ಪರೆಡ್ಡಿ ಅವರ ಪುತ್ರ, ಜಕ್ಕೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದಾನೆ. ಸೆಪ್ಟೆಂಬರ್ 8ರಂದು ರಾತ್ರಿ ರೇಸ್ ಕೋರ್ಸ್ ರಸ್ತೆಯಲ್ಲಿರುವ ರಿನೈಸಾನ್ಸ್ ಪಂಚತಾರಾ ಹೋಟೆಲ್ ಗೆ ತನ್ನ ಸ್ನೇಹಿತರೊಂದಿಗೆ ಹೋಗಿದ್ದಾನೆ, ಅಂದು ಊಟ ಮುಗಿಸಿ ಕೈತೊಳೆದುಕೊಂಡು ಬರುತ್ತಿರುವಾಗ ಆತನಿಗೆ ಯುವರಾಜ್ ಕೈ ತಾಗಿದೆ ಅಷ್ಟಕ್ಕೇ ಗಲಾಟೆ ಆರಂಭಿಸಿದ ಸುಮನ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ರಕ್ತಸ್ರಾವವಾಗಿ ಯುವರಾಜ್ ಸ್ಥಳದಲ್ಲೇ ಕುಸಿದು ಬಿದ್ದಿದ್ದು ಕಾರ್ತಿಕ್ ಕೂಡಲೇ ಸ್ನೇಹಿತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಕಾರ್ತಿಕ್ ಕಾರಿನ ಬಳಿ ಬಂದ ದುಷ್ಕರ್ಮಿಗಳು ಚಾಕು ತೋರಿಸಿ ನೀನು ಹೊರಗೆ ಬಂದರೆ ನಿನ್ನನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆಯನ್ನು ಹಾಕಿದ್ದರು ಎನ್ನಲಾಗಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications