ಬೆಂಗಳೂರು : ನಿವೃತ್ತ ವಾಯುಪಡೆ ಅಧಿಕಾರಿ ಕೊಲೆ
ಬೆಂಗಳೂರು, ನ. 24 : ವಾಯುಪಡೆಯ ನಿವೃತ್ತ ಕಮಾಂಡೆಂಟ್ ಅವರನ್ನು ಕೊಲೆ ಮಾಡಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಹುಸ್ಕೂರಿನಲ್ಲಿ ನಡೆದಿದೆ. ತಮ್ಮ ಪತ್ನಿಯೊಂದಿಗೆ ಹುಸ್ಕೂರಿನ ಸಮೀಪದ ಗ್ರೀನ್ ವ್ಯಾಲಿ ವಿಲ್ಲಾದಲ್ಲಿ ಇವರು ಎರಡು ತಿಂಗಳಿನಿಂದ ನೆಲೆಸಿದ್ದರು.
ಕೊಲೆಯಾದವರನ್ನು ಪರ್ವೀಜ್ ಖೋಕರ್ (70) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಒಂದು ಗಂಟೆಯ ಸುಮಾರಿನಲ್ಲಿ ಮನೆಯ ಬಾಗಿಲು ಮುರಿದು ಒಳನುಗ್ಗಿದ ದುಷ್ಕರ್ಮಿಗಳು ಕೈ ಕಾಲು ಕಟ್ಟಿ ಹಾಕಿ, ಖೋಕರ್ ಅವರ ಕುತ್ತಿಗೆಗೆ ಟವೆಲ್ ಬಿಗಿದು ಕೊಲೆ ಮಾಡಿದ್ದಾರೆ. ಪಂಜಾಬ್ ಮೂಲದ ಖೋಕರ್, ವಾಯುಪಡೆಯ ಮುಖ್ಯ ಕಮಾಂಡೆಂಟ್ ಆಗಿ ನಿವೃತ್ತರಾದ ನಂತರ ಎಚ್ಎಎಲ್ನಲ್ಲಿ ಕನ್ಸಲ್ಟೆಂಟ್ ಆಗಿದ್ದರು.

ಹುಸ್ಕೂರು ರಸ್ತೆಯ ಎಸ್ಟೇಟ್ ಕ್ಲಬ್ಗೆ ಹೊಂದಿಕೊಂಡಿರುವ ಗ್ರೀನ್ ವಿಲ್ಲಾದಲ್ಲಿ ಖೋಕರ್, ತಮ್ಮ ಪತ್ನಿ ಪ್ರಮೀಳಾ ಜೊತೆ ವಾಸವಾಗಿದ್ದು. ಖೋಕರ್ ಅವರ ರೂಂನಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, ಯಾವುದೇ ಬೆಲೆಬಾಳುವ ವಸ್ತುಗಳನ್ನು ಕೊಲೆ ಮಾಡಿದವರು ದೋಚಿಲ್ಲ.
ಕೊಲೆ ನಡೆದ ದಿನ ಖೋಕರ್ ಅವರ ಪತ್ನಿ ಪ್ರಮೀಳಾ ಪಕ್ಕದ ಕೋಣೆಯಲ್ಲೇ ಮಲಗಿದ್ದರು. ದುಷ್ಕರ್ಮಿಗಳು ರೂಂ ಅನ್ನು ಹೊರಗಿನಿಂದ ಲಾಕ್ ಮಾಡಿದ್ದರಿಂದ ಪತಿಯನ್ನು ರಕ್ಷಿಸಲು ಅವರಿಗೆ ಸಾಧ್ಯವಾಗಿಲ್ಲ.
ಅಗತ್ಯ ಭದ್ರತೆ ಇದೆ : ವಿಲ್ಲಾದಲ್ಲಿ ಉತ್ತಮ ಭದ್ರತಾ ವ್ಯವಸ್ಥೆ ಇದೆ. ಹೊರಗಿನಿಂದ ಯಾರೂ ಆಗಮಿಸಿದರೂ ಭದ್ರತಾ ಸಿಬ್ಬಂದಿಗಳ ಬಳಿ ವಿವರಗಳು ದಾಖಲಾಗಿರುತ್ತವೆ. ಆವರಣದಲ್ಲಿ ಎಲ್ಲಾ ಕಡೆ ಸಿಸಿಟಿವಿ ಆಳವಡಿಸಲಾಗಿದೆ. ಆದರೂ ದುಷ್ಕರ್ಮಿಗಳು ಹೇಗೆ ಒಳಗೆ ಬಂದರು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications