ರಾಯಿಟರ್ಸ್ ಪತ್ರಕರ್ತೆ ಶೃತಿ ಬೆಂಗಳೂರಿನಲ್ಲಿ ಸಾವು: ಕೊಲೆ ಶಂಕೆ
ಬೆಂಗಳೂರು, ಮಾ. 24: ರಾಯಿಟರ್ಸ್ ಸುದ್ದಿ ಸಂಸ್ಥೆಯ ಪತ್ರಕರ್ತೆ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ರಾಯಿಟರ್ಸ್ ಸುದ್ದಿ ಸಂಸ್ಥೆಯ ಶೃತಿ (35) ಸಾವನ್ನಪ್ಪಿದ್ದರು. ಶೃತಿ ಪತಿ ಅನೀಶ್ ಕೊಯಾಡನ್ ಕೊಲೆ ಮಾಡಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿ ಶೃತಿ ಸಹೋದರ ನಿಶಾಂತ್ ನಾರಾಯಣನ್ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
2017 ರಲ್ಲಿ ಸೃತಿ ಹಾಗೂ ಅನೀಶ್ ಮದುವೆಯಾಗಿತ್ತು. ಬೆಂಗಳೂರಿಗೆ ಮರಳಿದ್ದ ದಂಪತಿ ವೈಟ್ ಫೀಲ್ಡ್ ಸಮೀಪದ ನಲ್ಲೂರಹಳ್ಳಿ ರಸ್ತೆಯಲ್ಲಿರುವ ಎಸ್. ವಿ. ಮೈಪೇರ್ ವಸತಿ ಸಮುಚ್ಚಯದಲ್ಲಿ ವಾಸವಾಗಿದ್ದರು. ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಅನೀಶ್ ಹಾಗೂ ಶೃತಿ ಇತ್ತೀಚೆಗೆ ಜಗಳ ಮಾಡಿಕೊಳ್ಳುತ್ತಿದ್ದರು. ಶೃತಿಗೆ ಅನೀಶ್ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಸಂಬಳದ ಹಣವನ್ನು ತವರು ಮನೆಗೆ ನೀಡುತ್ತೀಯ ಎಂದು ನಿಂದನೆ ಮಾಡಿ ಶೃತಿ ಮೇಲೆ ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದ ಎಂದು ಮೃತ ಶೃತಿ ಸಹೋದರ ನಿಶಾಂತ್ ನಾರಾಯಣನ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ತನ್ನ ಸಹೋದರಿಯ ಮೇಲೆ ಅನುಮಾನ ವ್ಯಕ್ತಪಡಿಸಿ ಮನೆಯಲ್ಲಿ ಹಿಡನ್ ಕ್ಯಾಮರಾ ಇಟ್ಟು ಆಕೆಯ ಚಲನ ವಲನ ಬಗ್ಗೆ ನಿಗಾ ಇಡುತ್ತಿದ್ದ. ಆಕೆ ಮಾತನಾಡುತ್ತಿದ್ದನ್ನು ರೆಕಾರ್ಡ್ ಮಾಡುತ್ತಿದ್ದ. ವಾರಂತ್ಯದಲ್ಲಿ ಪ್ರವಾಸದ ಹೆಸರಿನಲ್ಲಿ ಕರೆದುಕೊಂಡು ಹೋಗಿ ಚಿತ್ರ ಹಿಂಸೆ ಕೊಡುತ್ತಿದ್ದ ಅನೀಶ್ ಈ ವರ್ಷ ಜನವರಿಯಲ್ಲಿ ಒಮ್ಮೆ ನನ್ನ ಸಹೋದರಿಯ ಹತ್ಯೆಗೆ ಯತ್ನಿಸಿದ್ದ. ಆಕೆಯ ಚೀರಾಟ ಕೇಳಿ ಭದ್ರತಾ ಸಿಬ್ಬಂದಿ ನನ್ನ ಸಹೋದರಿಯ ಜೀವ ಕಾಪಾಡಿದ್ದರು ಎಂದು ಹಿಂದಿನ ಘಟನೆಯನ್ನು ಉಲ್ಲೇಖಿಸಿದ್ದಾರೆ.
ನನ್ನ ಪತ್ನಿ ಇದೇ ಮಾ. 20 ರಂದು ನನ್ನ ಸಹೋದರಿ ಶೃತಿಗೆ ಕರೆ ಮಾಡಿದಾಗ ಆಕೆ ಕರೆ ಸ್ವೀಕರಿಸಿರಲಿಲ್ಲ. ಮರು ದಿನ ಕರೆ ಮಾಡಿದರೂ ಪೋನ್ ಸ್ವೀಕರಿಸಿರಲಿಲ್ಲ. ಹೀಗಾಗಿ ಮಾ. 22 ರಂದು ಬೆಳಿಗ್ಗೆ ಬೆಂಗಳೂರಿಗೆ ಬಂದು ನೋಡಿದಾಗ ಅಪಾರ್ಟ್ ಮೆಂಟ್ ನ ಮನೆಯೊಳಗೆ ಯಾರೂ ಕಾಣಲಿಲ್ಲ. ಭದ್ರತಾ ಸಿಬ್ಬಂದಿಯ ನೆರವಿನಿಂದ ಬಾಲ್ಕನಿ ಬಾಗಿಲು ಮುರಿದು ಒಳಗೆ ನೋಡಿದಾಗ ಶೃತಿ ನೇಣು ಬಿಗಿದ ಸ್ಥಿತಿಯಲ್ಲಿ ಬಿದ್ದಿದ್ದಳು. ಆಕೆಯ ಗಂಡನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತಳ ಸಹೋದರ ನಿಶಾಂತ್ ದೂರಿನಲ್ಲಿ ವಿವರಿಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications