Government Jobs: ಕಂದಾಯ ಇಲಾಖೆಯ 1,000 ಹುದ್ದೆ ನೇಮಕಾತಿ; ವಿದ್ಯಾರ್ಹತೆ, ಪರೀಕ್ಷೆ ವಿವರ
ಬೆಂಗಳೂರು, ಫೆಬ್ರವರಿ.18: ರಾಜ್ಯದಲ್ಲಿ ಖಾಲಿಯಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಹುದ್ದೆಗಳ ಮಾಹಿತಿ, ಪರೀಕ್ಷಾ ವಿವರಗಳು ಇಲ್ಲಿವೆ.
ರಾಜ್ಯದ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ತಿಳಿಸಲಾಗಿದೆ. ಹುದ್ದೆಗಳ ಅಧಿಸೂಚನೆ, ವಯೋಮಿತಿ ಮತ್ತು ಪಠ್ಯಕ್ರಮದ ಬಗ್ಗೆ, ವಿವರಗಳು ಮತ್ತು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುವುದು.

ಗ್ರಾಮ ಆಡಳಿತ ಹುದ್ದೆಗಳ ನೇಮಕಾತಿಗಾಗಿ ಸರ್ಕಾರವು ವಯೋಮಿತಿಯನ್ನು ಈ ಕೆಳಗಿನಂತೆ ನಿಗಧಿ ಪಡಿಸಿದೆ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ ಒಂದಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷಗಳು ಎಂದು ವಯೋಮಿತಿ ನಿಗದಿಪಡಿಸಲಾಗಿದೆ.
* 2ಎ, 2ಬಿ, 3ಎ, 3ಬಿ ವರ್ಗಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷಗಳು ಎಂದು ವಯೋಮಿತಿ ನಿಗದಿಪಡಿಸಲಾಗಿದೆ.
* ಸಾಮಾನ್ಯ ವರ್ಗಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷಗಳು ಎಂದು ವಯೋಮಿತಿ ನಿಗದಿಪಡಿಸಲಾಗಿದೆ.
ಪರೀಕ್ಷೆ ಮತ್ತು ಪಠ್ಯ ಕ್ರಮ
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ತಿಳಿಸಲಾಗಿದೆ. ಪಠ್ಯ ಕ್ರಮವನ್ನು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರಲ್ಲಿ ನಿಗದಿಪಡಿಸಿರುವಂತೆ ಅಳವಡಿಸಲಾಗುವುದು.
ಆಡಳಿತ ಹುದ್ದೆಗಳನ್ನು ನೇಮಕಮಾಡಿಕೊಳ್ಳಲು ಯಾವ ಪರೀಕ್ಷಾ ಆಯೋಗ/ ಪ್ರಾಧಿಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ ಈಗಾಗಲೇ ಸಾಕಷ್ಟು ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಫಲಿತಾಂಶ ಬಿಡುಗಡೆಯಾಗದೇ ಹಲವಾರು ವರ್ಷಗಳ ಕಾಲ ವಿಳಂಬವಾಗುತ್ತಿರುವ ಕಾರಣ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಯಾವುದಾದರು ಸಾಂವಿಧಾನಿಕ ಪರೀಕ್ಷಾ ಸಂಸ್ಥೆಗೆ ಈ ನೇಮಕಾತಿಯ ಜವಾಬ್ದಾರಿಯನ್ನು ನೀಡಲು ಸರ್ಕಾರ ಕ್ರಮಕೈಗೊಳ್ಳುವುದೇ ಅಥವಾ ಈ ಕುರಿತು ಸ್ಪಷ್ಟನೆ ನೀಡಲಿದೇಯೇ ಎಂಬುದನ್ನು ಕಂದಾಯ ಇಲಾಖೆ ಪ್ರಶ್ನಿಸಿದೆ.
-
Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರ ಲಿಂಕ್, ವಿವರ -
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
ಯುಪಿಎಸ್ಸಿ 2025 ಫಲಿತಾಂಶ ಪ್ರಕಟ: ಪಾಸಾದವರು 958 ಆಕಾಂಕ್ಷಿಗಳು, ಅರ್ಜಿ ಹಾಕಿದ್ದವರು 10 ಲಕ್ಷ ಮಂದಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ












Click it and Unblock the Notifications