ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೆಟ್ರೋ ಡಿಪೋಗಾಗಿ 16 ಎಕರೆ ಭೂಮಿ ನೀಡಲು ಕಂದಾಯ ಇಲಾಖೆ ಒಪ್ಪಿಗೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 7: ತಿಪ್ಪಗೊಂಡನಹಳ್ಳಿಯಲ್ಲಿರುವ 16 ಎಕರೆ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಲು ಕಂದಾಯ ಇಲಾಖೆ ಒಪ್ಪಿಗೆ ನೀಡಿದೆ.

ಮೆಟ್ರೋ ಎರಡನೇ ಹಂತದ ಕಾಮಗಾರಿಗಾಗಿ ನಾಗವಾರ-ಗೊಟ್ಟಿಗೆರೆ ಮಾರ್ಗದಲ್ಲಿ ಕಾಡುಗೋಡಿ ಡಿಪೋ ನಿರ್ಮಾಣ ಮಾಡಲು ಅರಣ್ಯ ಇಲಾಖೆಯು 45 ಎಕರೆ ಜಮೀನು ನೀಡಿತ್ತು. ಅದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ತಿಪ್ಪಗೊಂಡನಹಳ್ಳಿಯಲ್ಲಿ 16 ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ನೀಡಲು ಒಪ್ಪಿಗೆ ಸೂಚಿಸಿದೆ.

ಮೆಟ್ರೋ ನಿಲ್ದಾಣದಲ್ಲಿ ಟ್ರಾಕ್ ಸಮೀಪ ಗಾಜಿನ ಬಾಗಿಲು ಅಳವಡಿಕೆ ಮೆಟ್ರೋ ನಿಲ್ದಾಣದಲ್ಲಿ ಟ್ರಾಕ್ ಸಮೀಪ ಗಾಜಿನ ಬಾಗಿಲು ಅಳವಡಿಕೆ

ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಎರಡನೇ ಹಂತದ ಮೆಟ್ರೋ ಕಾಮಗಾರಿ 72ಕಿ.ಮೀ ವ್ಯಾಪ್ತಿಯದ್ದಾಗಿದೆ.

Revenue department to give 16 acres for Metro Depot

ಅದಕ್ಕೆ ಸುಮಾರು 32,000 ಕೋಟಿ ರೂ ವೆಚ್ಚವಾಗಲಿದೆ. ಹಾಗೆಯೇ 13.26 ಸ್ಕ್ವೇರ್ ಮೀ ಬೇಕಾಗುತ್ತದೆ. ಈಗಾಗಲೇ 8.6 ಕಿಮೀ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಜಮೀನು ಮಾಲೀಕರಿಗೆ 6293 ಕೋಟಿ ರೂ ನೀಡಲಾಗಿದೆ.

ಮೆಟ್ರೋದಲ್ಲಿ ಯುವತಿ ಜತೆ ಅಸಭ್ಯ ವರ್ತನೆ ಮಾಡಿದವನಿಗೆ ಧರ್ಮದೇಟು ಮೆಟ್ರೋದಲ್ಲಿ ಯುವತಿ ಜತೆ ಅಸಭ್ಯ ವರ್ತನೆ ಮಾಡಿದವನಿಗೆ ಧರ್ಮದೇಟು

20 ದಿನಗಳೊಳಗಾಗಿ ತಿಪ್ಪಗೊಂಡನಹಳ್ಳಿ ಜಮೀನನ್ನು ಅರಣ್ಯ ಇಲಾಖೆಗೆ ಒಪ್ಪಿಸುವುದಾಗಿ ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

English summary
There revenue department has agreed to hand over 16 acres n Thippagondanahalli to the Forest department for the Kadugodi depot of Metro phase 2.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X