Property Tax: ಬೆಂಗಳೂರು ವಾಣಿಜ್ಯ ಸ್ವತ್ತುಗಳ ಪರಿವೀಕ್ಷಣೆ ಆರಂಭ, ಮಾಲೀಕರಲ್ಲಿ ತಳಮಳ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರವು (ಜಿಬಿಎ) ಪ್ರಸ್ತಕ ಆರ್ಥಿಕ ವರ್ಷದಲ್ಲಿ 6500 ಕೋಟಿ ರೂ. ಅಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ವಿವಿಧ ಕ್ರಮಗಳ ಜಾರಿಗೆ ಮುಂದಾಗಿದೆ. ಅದರ ಬೆನ್ನಲ್ಲೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ವಾಣಿಜ್ಯ ಸ್ವತ್ತುಗಳಿಗೆ, ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ಮಾಲೀಕರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಈಗಾಗಲೇ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿ ಮಾಲೀಕರಿಗೆ ನೋಟಿಸ್ ನೀಡಿ, ಪಾವತಿಸದಿದ್ದರೆ ಸೀಲ್ ಮಾಡಿ ಎಂದು ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಸೂಚಿಸಿದ್ದರು. ಇದಾಗಿ ಎರಡು ದಿನಗಳಲ್ಲಿ ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ.ರಾಜೇಂದ್ರ ಕೆ.ವಿ. ಅವರು ವಾಣಿಜ್ಯ ಸ್ವತ್ತುಗಳ ಕಂದಾಯ ಪರಿವೀಕ್ಷಣೆ ನಡೆಸುವಂತೆ ನಿರ್ದೇಶಿಸಿದ್ದಾರೆ.

ಪರಿವೀಕ್ಷಣೆಯಲ್ಲಿ ಏನೆಲ್ಲ ಪರಿಶೀಲನೆ ಆಗಲಿದೆ
ಮಲ್ಲೇಶ್ವರಂ ವಿಭಾಗದ ವಾರ್ಡ್ ಸಂಖ್ಯೆ 64ರ ಮಾರ್ಗೋಸ ರಸ್ತೆಯಲ್ಲಿ ವಸತಿಯೇತರ (ವಾಣಿಜ್ಯ) ಸ್ವತ್ತುಗಳ ಕಂದಾಯ ಪರಿಷ್ಕರಣೆ ಅಭಿಯಾನ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಗೆ ಈ ಮೇಲಿನಂತೆ ಸೂಚಿಸಿದರು. ಮಾರ್ಗೋಸ ರಸ್ತೆಯ ವಾಣಿಜ್ಯ ಸ್ವತ್ತುಗಳ ಮಾಲೀಕರು ಸ್ವಂತ ಬಳಕೆ ಎಂದು ಸೂಚಿಸಿ ಬಾಡಿಗೆಗೆ ನೀಡಿರುವುದು, ಖಾಲಿ ಜಾಗಗಳನ್ನು ಕಾರು ನಿಲುಗಡೆ ಹಾಗೂ ಇತರೆ ವಾಣಿಜ್ಯ ಚಟುವಟಿಕೆಗಳಿಗೆ ಬಳಸುತ್ತಿರುವುದು, ಎಸ್.ಎ.ಎಸ್ (ಸ್ವಯಂ ಮೌಲ್ಯಮಾಪನ ವ್ಯವಸ್ಥೆ) ಪ್ರಕಾರ ಆಸ್ತಿ ತೆರಿಗೆ ಪಾವತಿಸುತ್ತಿರುವುದು ಪರಿಶೀಲನೆ ವೇಳೆ ಗೊತ್ತಾಗಿದೆ.
ಆಸ್ತಿ ಮಾಲೀಕರು ಎಸ್.ಎ.ಎಸ್ ಮೂಲಕ ಸ್ವತ್ತುಗಳ ವಿವರಗಳನ್ನು ಕಡಿಮೆ ತೋರಿಸಿ ಆಸ್ತಿ ತೆರಿಗೆ ಪಾವತಿಸಿರುವ ಪ್ರಕರಣಗಳನ್ನು ಪರಿಶೀಲಿಸಿದರು. ಕಂದಾಯ ಪರಿಷ್ಕರಣೆ ನಡೆಸಿ ನಿಗದಿತ ತೆರಿಗೆಯನ್ನು ವಸೂಲಿ ಮಾಡಬೇಕೆಂದು ತಿಳಿಸಿದರು. ಖಾಲಿ ಸ್ವತ್ತುಗಳನ್ನು ವಸತಿಯೇತರವಾಗಿ, ಅಂದರೆ ಖಾಸಗಿ ವಾಹನ ನಿಲುಗಡೆ ಸೇರಿದಂತೆ ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವಲ್ಲಿ ಅದರ ಅನುಸಾರ ತೆರಿಗೆ ಪಾವತಿಸುತ್ತಿರುವುದನ್ನು ಪರಿಶೀಲಿಸಲು ಹಾಗೂ ನೆಲಮಹಡಿ ಪ್ರದೇಶವನ್ನು ಯಾವ ಉದ್ದೇಶಕ್ಕಾಗಿ ಬಳಸಲು ನಕ್ಷೆ ಮಂಜೂರಾತಿ ಪಡೆದಿದ್ದಾರೆ ಎಂಬುದನ್ನೂ ಪರಿಶೀಲಿಸಲು ಅಧಿಕಾರಿಗಳಿಗೆ ಹೇಳಿದರು.
ತೆರಿಗೆ ಬಾಕಿ ಪಾವತಿಸಿ, ಕ್ರಮದಿಂದ ತಪ್ಪಿಸಿಕೊಳ್ಳಿ
ಈ ಮೂಲಕ ಬೆಂಗಳೂರಿನ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಹಂತ ಹಂತವಾಗಿ ಮನೆ ಹಾಗೂ ವಾಣಿಜ್ಯ ಸತ್ತುಗಳ ಆಸ್ತಿ ತೆರಿಗೆ ವಸೂಲಾತಿಗೆ ಸೂಕ್ತ ಕ್ರಮ ಜರುಗಿಸಲಾಗುತ್ತಿದೆ ಎಂದು ಇಲ್ಲಿ ಗಮನಿಸಬೇದ ಸಂಗತಿ. ಯಾರೆಲ್ಲ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದೀರಿ ಅವರೆಲ್ಲ ನಿಗದಿತ ಸಮಯದೊಳಗೆ ಪಾವತಿಸಿದರೆ ಜಿಬಿಎ ಕ್ರಮಕ್ಕೆ ಒಳಗಾಗುವುದು ತಪ್ಪಲಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications