Property Tax: ಬೆಂಗಳೂರು ವಾಣಿಜ್ಯ ಸ್ವತ್ತುಗಳ ಪರಿವೀಕ್ಷಣೆ ಆರಂಭ, ಮಾಲೀಕರಲ್ಲಿ ತಳಮಳ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರವು (ಜಿಬಿಎ) ಪ್ರಸ್ತಕ ಆರ್ಥಿಕ ವರ್ಷದಲ್ಲಿ 6500 ಕೋಟಿ ರೂ. ಅಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ವಿವಿಧ ಕ್ರಮಗಳ ಜಾರಿಗೆ ಮುಂದಾಗಿದೆ. ಅದರ ಬೆನ್ನಲ್ಲೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ವಾಣಿಜ್ಯ ಸ್ವತ್ತುಗಳಿಗೆ, ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ಮಾಲೀಕರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಈಗಾಗಲೇ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿ ಮಾಲೀಕರಿಗೆ ನೋಟಿಸ್ ನೀಡಿ, ಪಾವತಿಸದಿದ್ದರೆ ಸೀಲ್ ಮಾಡಿ ಎಂದು ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಸೂಚಿಸಿದ್ದರು. ಇದಾಗಿ ಎರಡು ದಿನಗಳಲ್ಲಿ ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ.ರಾಜೇಂದ್ರ ಕೆ.ವಿ. ಅವರು ವಾಣಿಜ್ಯ ಸ್ವತ್ತುಗಳ ಕಂದಾಯ ಪರಿವೀಕ್ಷಣೆ ನಡೆಸುವಂತೆ ನಿರ್ದೇಶಿಸಿದ್ದಾರೆ.

ಪರಿವೀಕ್ಷಣೆಯಲ್ಲಿ ಏನೆಲ್ಲ ಪರಿಶೀಲನೆ ಆಗಲಿದೆ
ಮಲ್ಲೇಶ್ವರಂ ವಿಭಾಗದ ವಾರ್ಡ್ ಸಂಖ್ಯೆ 64ರ ಮಾರ್ಗೋಸ ರಸ್ತೆಯಲ್ಲಿ ವಸತಿಯೇತರ (ವಾಣಿಜ್ಯ) ಸ್ವತ್ತುಗಳ ಕಂದಾಯ ಪರಿಷ್ಕರಣೆ ಅಭಿಯಾನ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಗೆ ಈ ಮೇಲಿನಂತೆ ಸೂಚಿಸಿದರು. ಮಾರ್ಗೋಸ ರಸ್ತೆಯ ವಾಣಿಜ್ಯ ಸ್ವತ್ತುಗಳ ಮಾಲೀಕರು ಸ್ವಂತ ಬಳಕೆ ಎಂದು ಸೂಚಿಸಿ ಬಾಡಿಗೆಗೆ ನೀಡಿರುವುದು, ಖಾಲಿ ಜಾಗಗಳನ್ನು ಕಾರು ನಿಲುಗಡೆ ಹಾಗೂ ಇತರೆ ವಾಣಿಜ್ಯ ಚಟುವಟಿಕೆಗಳಿಗೆ ಬಳಸುತ್ತಿರುವುದು, ಎಸ್.ಎ.ಎಸ್ (ಸ್ವಯಂ ಮೌಲ್ಯಮಾಪನ ವ್ಯವಸ್ಥೆ) ಪ್ರಕಾರ ಆಸ್ತಿ ತೆರಿಗೆ ಪಾವತಿಸುತ್ತಿರುವುದು ಪರಿಶೀಲನೆ ವೇಳೆ ಗೊತ್ತಾಗಿದೆ.
ಆಸ್ತಿ ಮಾಲೀಕರು ಎಸ್.ಎ.ಎಸ್ ಮೂಲಕ ಸ್ವತ್ತುಗಳ ವಿವರಗಳನ್ನು ಕಡಿಮೆ ತೋರಿಸಿ ಆಸ್ತಿ ತೆರಿಗೆ ಪಾವತಿಸಿರುವ ಪ್ರಕರಣಗಳನ್ನು ಪರಿಶೀಲಿಸಿದರು. ಕಂದಾಯ ಪರಿಷ್ಕರಣೆ ನಡೆಸಿ ನಿಗದಿತ ತೆರಿಗೆಯನ್ನು ವಸೂಲಿ ಮಾಡಬೇಕೆಂದು ತಿಳಿಸಿದರು. ಖಾಲಿ ಸ್ವತ್ತುಗಳನ್ನು ವಸತಿಯೇತರವಾಗಿ, ಅಂದರೆ ಖಾಸಗಿ ವಾಹನ ನಿಲುಗಡೆ ಸೇರಿದಂತೆ ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವಲ್ಲಿ ಅದರ ಅನುಸಾರ ತೆರಿಗೆ ಪಾವತಿಸುತ್ತಿರುವುದನ್ನು ಪರಿಶೀಲಿಸಲು ಹಾಗೂ ನೆಲಮಹಡಿ ಪ್ರದೇಶವನ್ನು ಯಾವ ಉದ್ದೇಶಕ್ಕಾಗಿ ಬಳಸಲು ನಕ್ಷೆ ಮಂಜೂರಾತಿ ಪಡೆದಿದ್ದಾರೆ ಎಂಬುದನ್ನೂ ಪರಿಶೀಲಿಸಲು ಅಧಿಕಾರಿಗಳಿಗೆ ಹೇಳಿದರು.
ತೆರಿಗೆ ಬಾಕಿ ಪಾವತಿಸಿ, ಕ್ರಮದಿಂದ ತಪ್ಪಿಸಿಕೊಳ್ಳಿ
ಈ ಮೂಲಕ ಬೆಂಗಳೂರಿನ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಹಂತ ಹಂತವಾಗಿ ಮನೆ ಹಾಗೂ ವಾಣಿಜ್ಯ ಸತ್ತುಗಳ ಆಸ್ತಿ ತೆರಿಗೆ ವಸೂಲಾತಿಗೆ ಸೂಕ್ತ ಕ್ರಮ ಜರುಗಿಸಲಾಗುತ್ತಿದೆ ಎಂದು ಇಲ್ಲಿ ಗಮನಿಸಬೇದ ಸಂಗತಿ. ಯಾರೆಲ್ಲ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದೀರಿ ಅವರೆಲ್ಲ ನಿಗದಿತ ಸಮಯದೊಳಗೆ ಪಾವತಿಸಿದರೆ ಜಿಬಿಎ ಕ್ರಮಕ್ಕೆ ಒಳಗಾಗುವುದು ತಪ್ಪಲಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications