ಆರ್ ಅಶೋಕ್ಗೆ ಕೊರೊನಾ ನೆಗಿಟಿವ್, ಪ್ರವಾಹ ಪರಿಹಾರ ಕಾರ್ಯಕ್ಕೆ ಹಾಜರ್!
ಬೆಂಗಳೂರು, ಆಗಸ್ಟ್ 6: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆ ಕಂದಾಯ ಸಚಿವ ಆರ್ ಅಶೋಕ್ ಕ್ವಾರಂಟೈನ್ಗೆ ಒಳಪಟ್ಟಿದ್ದರು.
Recommended Video
ಇದೀಗ, ಕೊವಿಡ್ ಪರೀಕ್ಷೆಗೆ ಒಳಗಾಗಿದ್ದ ಆರ್ ಅಶೋಕ್ ಅವರಿಗೆ ಕೊರೊನಾ ನೆಗಿಟಿವ್ ಬಂದಿದೆ. ಈ ಕುರಿತು ಸ್ವತಃ ಅಶೋಕ್ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಪ್ರವಾಹ ಭೀತಿ: ಯಡಿಯೂರಪ್ಪ ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ
'ಮುಖ್ಯಮಂತ್ರಿ ಯಡಿಯೂರಪ್ಪರವರಿಗೆ ಕೋವಿಡ್-19 ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ, ಅವರನ್ನು ಭೇಟಿಯಾಗಿ 8 ದಿನಗಳ ನಂತರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆನು. ಈ ಪರೀಕ್ಷೆಯ ವರದಿ ಕೋವಿಡ್-ನೆಗಟಿವ್ ಬಂದಿರುವುದು ನಮಗೆ ನೆಮ್ಮದಿ ತಂದಿದ್ದು, ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣೆ ಹಾಗೂ ಪ್ರವಾಹ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ' ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಶ್ರೀ @BSYBJPರವರಿಗೆ ಕೋವಿಡ್-19 ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ, ಅವರನ್ನು ಭೇಟಿಯಾಗಿ 8 ದಿನಗಳ ನಂತರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆನು.
— R. Ashoka (ಆರ್. ಅಶೋಕ) (@RAshokaBJP) August 6, 2020
ಈ ಪರೀಕ್ಷೆಯ ವರದಿ ಕೋವಿಡ್-ನೆಗಟಿವ್ ಬಂದಿರುವುದು ನಮಗೆ ನೆಮ್ಮದಿ ತಂದಿದ್ದು, ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣೆ ಹಾಗೂ ಪ್ರವಾಹ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ. pic.twitter.com/tOLDLloEyQ
ರಾಜ್ಯದಲ್ಲಿ ಮಳೆ ಹೆಚ್ಚಾಗಿ ಹಲವು ಕಡೆ ಪ್ರವಾಹ ಭೀತಿ ಎದುರಾಗಿದೆ. ಇಂತಹ ಸಮಯದಲ್ಲಿ ಸಿಎಂಗೆ ಕೊರೊನಾ ತಗುಲಿದ್ದು, ಆಸ್ಪತ್ರೆಯಲ್ಲಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್ ಅಶೋಕ್ ಸಹ ಕ್ವಾರಂಟೈನ್ ಗೆ ಒಳಗಾಗಿದ್ದರು.
ಈ ಹಿನ್ನೆಲೆ ವಿಪಕ್ಷ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ 'ಹಿರಿಯ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ವಹಿಸಿ ಎಂದು ಸಲಹೆ ನೀಡಿದ್ದರು.
ಇದೀಗ, ಆರ್ ಅಶೋಕ್ ಅವರಿಗೆ ಕೊರೊನಾ ನೆಗಿಟಿವ್ ಬಂದಿದ್ದು, 'ಪ್ರವಾಹ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ' ಎಂದು ತಿಳಿಸಿದ್ದಾರೆ.