ಬೆಂಗಳೂರು ಗಲಭೆ: 2 ದಿನ ಸಿಸಿಬಿ ವಶಕ್ಕೆ ಸಂಪತ್ ರಾಜ್
ಬೆಂಗಳೂರು, ನವೆಂಬರ್ 17: ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆಗೆ ಬೆಂಕಿ ಹಚ್ಚಲು ಪ್ರಚೋದನೆ ನೀಡಿದ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರ ಬಂಧನ ನಾಟಕ ಮುಗಿದಿದೆ. ಸ್ನೇಹಿತರ ಮನೆಯಲ್ಲಿ ಸಿಸಿಬಿಗೆ ಸಿಕ್ಕಿದ್ದು, ಮಂಗಳವಾರ ಸಂಜೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಎರಡು ದಿನಗಳ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಇಂದು ಬೆಳಗ್ಗೆ ಸಂಪತ್ ರಾಜ್ರನ್ನು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಪ್ರಶ್ನಿಸಿದ್ದಾರೆ. ಇಷ್ಟು ದಿನ ಎಲ್ಲಿದ್ದಿರಿ ? ಮೊಬೈಲ್ ಪೋನ್ ಯಾಕೆ ಸ್ವಿಚ್ ಆಫ್ ಮಾಡಿಕೊಂಡಿದ್ದೀರಿ ? ವಿಚಾರಣೆಗೆ ನೋಟಿಸ್ ನೀಡಿದರೂ ಯಾಕೆ ಬರಲಿಲ್ಲ? ಆಸ್ಪತ್ರೆಯಿಂದ ತೆರಳಿದ ಬಳಿಕ ವಿಚಾರಣೆಗೆ ಹಾಜರಾಗಬೇಕು ಎಂದು ವೈದ್ಯರು ನಿಮ್ಮ ಗಮನಕ್ಕೆ ತರಲಿಲ್ಲವೇ ? ಎಂಬ ಪ್ರಶ್ನೆಗ ಳನ್ನು ಮುಂದಿಟ್ಟಿದ್ದಾರೆ. ಉತ್ತರ ನೀಡಲು ಸಂಪತ್ ತಡಬಡಿಸಿದ್ದು, ಮಧ್ಯಾಹ್ನಟ ಊಟ ಮುಗಿಸಿದ ನಂತರ ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸಂಪತ್ ಹಾಜರು ಪಡಿಸಿದರು.

ಸಂಪತ್ ರಾಜ್ ಅವರ ವಿಚಾರಣೆ ಅಗತ್ಯವಿದ್ದು, ಪೊಲೀಸ್ ವಶಕ್ಕೆ ನೀಡುವಂತೆ ಸಾರ್ವಜನಿಕ ಅಭಿಯೋಜಕರು ಮನವಿ ಮಾಡಿದರು. ಸಂಪತ್ ರಾಜ್ ಪ್ರಭಾವಿ ರಾಜಕಾರಣಿಯಾಗಿದ್ದರೂ, ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದರು. ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಸಂಪತ್ ರಾಜ್ ಅವರ ಪಾತ್ರವಿರುವ ಬಗ್ಗೆ ಸಾಕ್ಷಾಧಾರಗಳು ಲಭ್ಯವಿದ್ದು, ಅವರನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ. ಕಾನೂನಿಗೆ ಗೌರವ ಕೊಡದೇ ತಲೆ ಮರೆಸಿಕೊಂಡಿದ್ದು, ಸಾಕ್ಷಿಗಳನ್ನು ನಾಶ ಪಡಿಸುವ ಪ್ರಭಾವ ಹೊಂದಿದ್ದಾರೆ. ಹೀಗಾಗಿ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಸಿಸಿಬಿ ಪೊಲೀಸರ ಮನವಿ ಅಂಗೀಕರಿಸಿದ ನ್ಯಾಯಾಧೀಶರು ಎರಡು ದಿನ ಸಿಸಿಬಿ ಪೊಲೀಸರ ವಶಕ್ಕೆ ನೀಡಿದ್ದಾರೆ. ಸಿಸಿಬಿ ಡಿವೈಎಸ್ಪಿ ವೇಣುಗೋಪಾಲ್ ನೇತೃತ್ವದ ತಂಡ ಸಂಪತ್ ರಾಜ್ ಅವರನ್ನು ವಿಚಾರಣೆ ನಡೆಸಲಿದೆ.
Recommended Video
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications