ಬೆಂಗಳೂರು ಗಲಭೆ: 2 ದಿನ ಸಿಸಿಬಿ ವಶಕ್ಕೆ ಸಂಪತ್ ರಾಜ್
ಬೆಂಗಳೂರು, ನವೆಂಬರ್ 17: ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆಗೆ ಬೆಂಕಿ ಹಚ್ಚಲು ಪ್ರಚೋದನೆ ನೀಡಿದ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರ ಬಂಧನ ನಾಟಕ ಮುಗಿದಿದೆ. ಸ್ನೇಹಿತರ ಮನೆಯಲ್ಲಿ ಸಿಸಿಬಿಗೆ ಸಿಕ್ಕಿದ್ದು, ಮಂಗಳವಾರ ಸಂಜೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಎರಡು ದಿನಗಳ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಇಂದು ಬೆಳಗ್ಗೆ ಸಂಪತ್ ರಾಜ್ರನ್ನು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಪ್ರಶ್ನಿಸಿದ್ದಾರೆ. ಇಷ್ಟು ದಿನ ಎಲ್ಲಿದ್ದಿರಿ ? ಮೊಬೈಲ್ ಪೋನ್ ಯಾಕೆ ಸ್ವಿಚ್ ಆಫ್ ಮಾಡಿಕೊಂಡಿದ್ದೀರಿ ? ವಿಚಾರಣೆಗೆ ನೋಟಿಸ್ ನೀಡಿದರೂ ಯಾಕೆ ಬರಲಿಲ್ಲ? ಆಸ್ಪತ್ರೆಯಿಂದ ತೆರಳಿದ ಬಳಿಕ ವಿಚಾರಣೆಗೆ ಹಾಜರಾಗಬೇಕು ಎಂದು ವೈದ್ಯರು ನಿಮ್ಮ ಗಮನಕ್ಕೆ ತರಲಿಲ್ಲವೇ ? ಎಂಬ ಪ್ರಶ್ನೆಗ ಳನ್ನು ಮುಂದಿಟ್ಟಿದ್ದಾರೆ. ಉತ್ತರ ನೀಡಲು ಸಂಪತ್ ತಡಬಡಿಸಿದ್ದು, ಮಧ್ಯಾಹ್ನಟ ಊಟ ಮುಗಿಸಿದ ನಂತರ ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸಂಪತ್ ಹಾಜರು ಪಡಿಸಿದರು.

ಸಂಪತ್ ರಾಜ್ ಅವರ ವಿಚಾರಣೆ ಅಗತ್ಯವಿದ್ದು, ಪೊಲೀಸ್ ವಶಕ್ಕೆ ನೀಡುವಂತೆ ಸಾರ್ವಜನಿಕ ಅಭಿಯೋಜಕರು ಮನವಿ ಮಾಡಿದರು. ಸಂಪತ್ ರಾಜ್ ಪ್ರಭಾವಿ ರಾಜಕಾರಣಿಯಾಗಿದ್ದರೂ, ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದರು. ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಸಂಪತ್ ರಾಜ್ ಅವರ ಪಾತ್ರವಿರುವ ಬಗ್ಗೆ ಸಾಕ್ಷಾಧಾರಗಳು ಲಭ್ಯವಿದ್ದು, ಅವರನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ. ಕಾನೂನಿಗೆ ಗೌರವ ಕೊಡದೇ ತಲೆ ಮರೆಸಿಕೊಂಡಿದ್ದು, ಸಾಕ್ಷಿಗಳನ್ನು ನಾಶ ಪಡಿಸುವ ಪ್ರಭಾವ ಹೊಂದಿದ್ದಾರೆ. ಹೀಗಾಗಿ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಸಿಸಿಬಿ ಪೊಲೀಸರ ಮನವಿ ಅಂಗೀಕರಿಸಿದ ನ್ಯಾಯಾಧೀಶರು ಎರಡು ದಿನ ಸಿಸಿಬಿ ಪೊಲೀಸರ ವಶಕ್ಕೆ ನೀಡಿದ್ದಾರೆ. ಸಿಸಿಬಿ ಡಿವೈಎಸ್ಪಿ ವೇಣುಗೋಪಾಲ್ ನೇತೃತ್ವದ ತಂಡ ಸಂಪತ್ ರಾಜ್ ಅವರನ್ನು ವಿಚಾರಣೆ ನಡೆಸಲಿದೆ.
Recommended Video
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications