ಪ್ರೇಮಿಗಳ ಹಬ್ಬ ವಿಶೇಷ: ವಿಶೇಷ ಕರಕುಶಲ ವಸ್ತು ಪ್ರದರ್ಶನ ಮೇಳ
ಬೆಂಗಳೂರು ಫೆಬ್ರವರಿ 7: ಪ್ರೇಮಿಗಳ ಹಬ್ಬ - ವ್ಯಾಲಂಟೈನ್ಸ್ ಡೇಯನ್ನು ಮತ್ತಷ್ಟು ವಿಶೇಷ ಗೊಳಿಸುವ ಉದ್ದೇಶದಿಂದ ನಗರದ ಹೃದಯಭಾಗದಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿರುವ ದ ಸೋಕ್ ಮಾರ್ಕೇಟ್ ಗೆ ನಟಿ ರಿಷಿಕಾ ಶರ್ಮಾ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಫೆಬ್ರವರಿ 14 - ವ್ಯಾಲಂಟೈನ್ ಡೇ - ಪ್ರೇಮಿಗಳ ದಿನಕ್ಕೆ ಅದರದೇ ಆದ ವಿಶೇಷತೆ ಇದೆ. ತಮ್ಮ ಸಂಗಾತಿಗೆ ವಿಶೇಷವಾದ ಕೊಡುಗೆಯನ್ನು ಕೊಡುವ ಮೂಲಕ ಬಹುತೇಕ ಪ್ರೇಮಿಗಳು ಇದನ್ನು ಆಚರಿಸುತ್ತಾರೆ. ಸಂಗಾತಿಗೆ ವಿಶಿಷ್ಟವಾದ ಕೊಡುಗೆಯನ್ನು ಆಯ್ಕೆ ಮಾಡುವ ಅವಕಾಶವನ್ನು ನೀಡುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಫೆಬ್ರವರಿ 5 ರಿಂದ 14 ರ ವರೆಗೆ ದ ಸೋಕ್ ಮಾರ್ಕೇಟ್ - ಆರ್ಟ್ ಅಂಡ್ ಕ್ರಾಫ್ಟ್ ಮೇಳವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಕರಕುಶಲ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದ ಆಯೋಜಕ ಅಫ್ತಾಬ್ ಮಾತನಾಡಿ, ಚಿತ್ತಾರ - ಗ್ರಾಂಡ್ ಫ್ಲಿಯಾ ಮಾರ್ಕೇಟ್ ಸಹಯೋಗದಲ್ಲಿ ಆಯೋಜಿಸಿರುವ ಈ ಕರಕುಶಲ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ, ನೂರಕ್ಕೂ ಹೆಚ್ಚು ಸ್ಟಾಲ್ಗಳಲ್ಲಿ ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳ ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುಲಿವೆ.
ಫೆಬ್ರವರಿ 5 ರಿಂದ ಫೆಬ್ರವರಿ 14 ವರೆಗೆ ಈ ಪ್ರದರ್ಶನವು ನಡೆಯಲಿದ್ದು, ಪ್ರತಿದಿನ 11 ರಿಂದ ಸಂಜೆ 7 ಗಂಟೆಯವರೆಗೆ ಪ್ರದರ್ಶನ ಮತ್ತು ಮಾರಾಟ ಮೇಳ ಇರಲಿದೆ ಎಂದು ಹೇಳಿದರು.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ










Click it and Unblock the Notifications