3,000 ಉಳಿಸಲು ಹೋಗಿ ಸಿಕ್ಕಿಬಿದ್ದ ರಿಯಾಜ್ ಅಹ್ಮದ್ ಸಯೀದಿ!
ಬೆಂಗಳೂರು, ಜ.12 : ದುಬೈಗೆ ಹಾರಲು ಸಿದ್ಧವಾಗಿದ್ದ ಶಂಕಿತ ಉಗ್ರ ರಿಯಾಜ್ ಅಹ್ಮದ್ ಸಯೀದಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ದುಡ್ಡು ಉಳಿಸಲು ಹೋದ ಸಯೀದಿ ಪೊಲೀಸರ ಕೈಗೆ ಸಿಕ್ಕಿಬಿದ್ದದ್ದೇ ಒಂದು ಕಥೆ ಅದರ ವಿವರ ಇಲ್ಲಿದೆ ನೋಡಿ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ನಿವಾಸಿ ನಿವಾಸಿ ರಿಯಾಜ್ ಅಹ್ಮದ್ ಸಯೀದಿ (32)ಯನ್ನು ಶನಿವಾರ ರಾತ್ರಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈ ವಿಮಾನವೇರಲು ತೆರಳುತ್ತಿದ್ದಾಗ ಸಿಸಿಬಿ ಪೊಲೀಸರು ಮಂಗಳೂರು ಪೊಲೀಸರ ನೆರವಿನೊಂದಿಗೆ ಬಂಧಿಸಿದರು. [ಭಟ್ಕಳ ಮೂಲದ ನಾಲ್ಕನೇ ಶಂಕಿತ ಉಗ್ರ ಬಲೆಗೆ]

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಯೀದಿ ಮೂರು ದಿನಗಳ ಹಿಂದೆ ದುಬೈ ವಿಮಾನವೇರಬೇಕಿತ್ತು. ಆದರೆ, ಟ್ರಾವೆಲ್ ಎಜೆಂಟ್ ಮಾತು ಕೇಳಿ ಶನಿವಾರ ದುಬೈಗೆ ಹಾರಲು ಸಜ್ಜಾದ ರಿಯಾಜ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. [ಮೂವರು ಶಂಕಿತ ಉಗ್ರರಲ್ಲಿ ಒಬ್ಬ ಎಂಬಿಎ ವಿದ್ಯಾರ್ಥಿ]
ಟ್ರಾವೆಲ್ ಏಜೆಂಟ್ ಮಾತು ನಂಬಿದ : ಶನಿವಾರ ರಾತ್ರಿ ದುಬೈಗೆ ತೆರಳುವುದಕ್ಕಾಗಿ ಭಟ್ಕಳದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ರಿಯಾಜ್ ರಾತ್ರಿ 11.20ಕ್ಕೆ ಹೊರಡುವ ಜೆಟ್ ಏರ್ವೇಸ್ ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿದ್ದ.
ಆದರೆ, ಮೂರು ದಿನಗಳ ಹಿಂದೆ ರಿಯಾಜ್ ದುಬೈಗೆ ಪ್ರಯಾಣ ಬೆಳೆಸಬೇಕಿತ್ತು. ದುಬೈಗೆ ತೆರಳಲು ತುರ್ತು ಟಿಕೆಟ್ ಬುಕ್ ಮಾಡಲು ಹೋಗಿದ್ದ ರಿಯಾಜ್ಗೆ ಟ್ರಾವೆಲ್ ಏಜೆಂಟ್ ಮೂರು ದಿನಗಳು ತಡೆದರೆ 3000 ರೂ. ರಿಯಾಯಿತಿ ದೊರೆಯುತ್ತದೆ ಎಂದು ಹೇಳಿದ್ದ. ಮೂರು ಸಾವಿರ ಉಳಿಸಲು ಹೋದ ರಿಯಾಜ್, ಪ್ರಯಾಣವನ್ನು ಮುಂದೂಡಿ ಶನಿವಾರ ಹೊರಟಿದ್ದ ಅಷ್ಟರಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ರಿಯಾಜ್ ತನಿಖೆ ನಡೆಯುತ್ತಿದೆ : ದುಬೈನಲ್ಲಿ ಕೆಲಸ ಮಾಡುತ್ತಿದ್ದ ರಿಯಾಜ್ ಅಹ್ಮದ್ ಸಯೀದಿ ರಜೆ ಮೇಲೆ ಭಟ್ಕಳಕ್ಕೆ ಬಂದಿದ್ದ. ಆತನ ತನಿಖೆ ನಡೆಯುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಹೇಳಿದ್ದಾರೆ. ಸಯೀದಿಗೆ ಇತರ ದೇಶಗಳಲ್ಲಿರುವ ಸಂಪರ್ಕದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಇದುವರೆಗಿನ ತನಿಖೆಯಿಂದ ಕಳೆದ ವಾರ ಭಟ್ಕಳದಲ್ಲಿ ಬಂಧಿಸಿದ ಮೂವರು ಉಗ್ರರಿಗೂ ಮತ್ತು ರಿಯಾಜ್ಗೂ ಸಂಪರ್ಕವಿತ್ತು ಎಂದು ತಿಳಿದುಬಂದಿದೆ. ರಿಯಾಜ್ ಸಹ ಅನ್ಸರ್-ಉಲ್-ತವಹಿದ್ ಎಂಬ ಸಂಘಟನೆಯ ಮುಖ್ಯಸ್ಥ ಸುಲ್ತಾನ್ ಅಹಮದ್ ಅರ್ಮರ್ ಎಂಬಾತನ ಸೂಚನೆಯಂತೆ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications