ಶಿವಾಜಿನಗರ ಕ್ಷೇತ್ರದ 'ಕೈ' ಟಿಕೆಟ್ ರಿಜ್ವಾನ್ ಪಾಲು
ಬೆಂಗಳೂರು, ನವೆಂಬರ್ 17: ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯ ಕಾಂಗ್ರೆಸ್ ಪಕ್ಷದ ಟಿಕೆಟ್ ಅನ್ನು ಭಾರೀ ಲಾಬಿ ಮಾಡುವ ಮೂಲಕ ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತದೆ. ಈ ಹಿಂದಿನ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ, ಗುಜರಾತ್ ರಾಜ್ಯ ಉಸ್ತುವಾರಿ ರಾಜೀವ್ ಸಾಥವ್ ಲಿಂಕ್ ಬಳಸಿ ಟಿಕೆಟ್ ಪಡೆದುಕೊಳ್ಳಲು ಕೆ.ಸಿ.ವೇಣುಗೋಪಾಲ್ ಅವರಿಗೆ ಕರೆ ಮಾಡಿಸಿದ್ದಾರೆ. ರಾಜೀವ್ ಅವಧಿಯಲ್ಲಿ ಅರ್ಷದ್ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದರು.
ಸೋತರೆ ಮತ್ತೆ ಟಿಕೆಟ್ ಕೇಳಲ್ಲ ಇದೇ ಕೊನೆ ಬಾರಿ ಒಂದು ಅವಕಾಶ ನೀಡುವಂತೆ ಕೆ.ಸಿ.ವೇಣುಗೋಪಾಲ್ ಬಳಿ ಆಪ್ತರಾದ ರವಿ ಬೋಸರಾಜ್, ಶ್ರೀನಿವಾಸ್ ಮಾನೆಯನ್ನು ಕಳುಹಿಸಿದ್ದರು. ಈ ಬಾರಿ ತಯಾರಿ ಮಾಡಿಕೊಂಡಿದ್ದೇನೆ ಗೆದ್ದು ಬರ್ತೀನಿ, ಟಿಕೆಟ್ ಕೊಡಿಸಿ ಅಂತ ಸಿದ್ಧರಾಮಯ್ಯ, ಜಮೀರ್, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್ ಮೂಲಕವೂ ಒತ್ತಡ ಹಾಕಿಸಿ ದಯವಿಟ್ಟು ಅವಕಾಶ ಕೊಡಿ ಎಂದು ರಿಜ್ವಾನ್ ಅರ್ಷದ್ ಬೇಡಿಕೊಂಡಿದ್ದಾರೆ.

ಈ ವೇಳೆ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. 2014 ರ ಲೋಕಸಭೆ ಚುನಾವಣೆಗೆ ಜಾಫರ್ ಷರೀಫ್ ಬದಲಿಗೆ ಟಿಕೆಟ್ ಕೊಡಿಸಿದ್ದೆ, 2019ರಲ್ಲಿ ರೋಷನ್ ಬೇಗ್ ಬದಲು ನಿನಗೆ ಟಿಕೆಟ್ ಕೊಡಿಸಿದ್ದೆ, ಈ ಬಾರಿ ಗೆಲ್ಲದೆ ಇದ್ದರೇ ಕಷ್ಟವಾಗುತ್ತದೆ ಎಂದು ಸೂಚನೆ ನೀಡಿ ಕೆ.ಸಿ.ವೇಣುಗೋಪಾಲ್ ಗೆ ಕರೆ ಮಾಡಿ ರಿಜ್ವಾನ್ ಗೆ ಟಿಕೆಟ್ ನೀಡುವಂತೆ ಹೇಳಿದ್ದಾರೆ. ಬಳಿಕ ಕೆಸಿವಿಯಿಂದಲೂ ಅರ್ಷದ್ ವಾರ್ನಿಂಗ್ ಪಡೆದುಕೊಂಡಿದ್ದಾರೆ. ಶಿವಾಜಿನಗರ ಕ್ಷೇತ್ರ ನನಗೂ ಪ್ರತಿಷ್ಠೆಯ ಪ್ರಶ್ನೆ, ಸೋತರೆ ಮತ್ತೆ ಬರಬೇಡಿ, ನಿಮಗೆ ಇದೇ ಕೊನೆಯ ಅವಕಾಶ ಎಂದು ಎಚ್ಚರಿಕೆ ಕೊಟ್ಟ ಬಳಿಕ ಟಕೆಟ್ ನೀಡಲು ಒಪ್ಪಕೊಂಡಿದ್ದಾರೆ ಎನ್ನಲಾಗಿದೆ.
-
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್












Click it and Unblock the Notifications