ಶಿವಾಜಿನಗರ ಶಾಸಕರಾಗಿ ರಿಜ್ವಾನ್ ಅರ್ಷದ್ ಪ್ರಮಾಣವಚನ
Recommended Video
ಬೆಂಗಳೂರು, ಫೆಬ್ರವರಿ 3: ಶಿವಾಜಿನಗರ ನೂತನ ಶಾಸಕರಾಗಿ ರಿಜ್ವಾನ್ ಅರ್ಷದ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ವಿಧಾನಸಭೆ ಸ್ಪೀಕರ್ ಕಚೇರಿಯಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು. ರಿಜ್ವಾನ್ ಅರ್ಷದ್ ಸತ್ಯ ಮತ್ತು ನಿಷ್ಠೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಶಾಸಕರಾಗಿದ್ದ ರೋಷನ್ ಬೇಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಆದರೆ ಉಪ ಚುನಾವಣೆಯಲ್ಲಿ ರೋಷನ್ ಬೇಗ್ ಅವರಿಗೆ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅವರು ಸ್ಪರ್ಧಿಸಿರಲಿಲ್ಲ.
ಬಿಜೆಪಿ ಶರವಣ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯರೂ ಆಗಿರುವ ರಿಜ್ವಾನ್ ಅರ್ಷದ್ ಗೆಲುವು ಪಡೆದಿದ್ದರು.
ಶಿವಾಜಿನಗರ ನೂತನ ಶಾಸಕರಾಗಿ ರಿಜ್ವಾನ್ ಅರ್ಷದ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ@ArshadRizwan @INCKarnataka #KannadaNews pic.twitter.com/Za8exZCsZF
— Oneindia Kannada (@OneindiaKannada) February 3, 2020
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಎನ್.ಎ. ಹ್ಯಾರಿಸ್ ಮತ್ತು ರಿಜ್ವಾನ್ ಅರ್ಷದ್ ಅವರ ಕುಟುಂಬದ ಸದಸ್ಯರು ಹಾಜರಿದ್ದರು.