ಬೆಂಗಳೂರಿನ ಈ ಬೂತ್ನಲ್ಲಿ ಯಾವ ಬಟನ್ ಒತ್ತಿದರೂ ಮತ ಬಿಜೆಪಿಗೆ!
ಬೆಂಗಳೂರು, ಮೇ 12: ನಗರದ ಆರ್ಎಂವಿ 2ನೇ ಹಂತದ 2ನೇ ಬೂತ್ನಲ್ಲಿ ಇವಿಎಂ ಯಂತ್ರದ ಯಾವುದೇ ಬಟನ್ ಒತ್ತಿದರೂ ಮತ ಬಿಜೆಪಿಗೆ ಹೋಗಿದೆ. ಆದರೆ ನಂತರ ದೋಷವನ್ನು ಸರಿಪಡಿಸಲಾಗಿದೆ.
ಕಾಂಗ್ರೆಸ್ನ ಹಿರಿಯ ಮುಖಂಡ ಬ್ರಿಜೇಶ್ ಕಾಳಪ್ಪ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, 'ಆರ್ಎಂವಿ 2ನೇ ಹಂತದ 2ನೇ ಬೂತ್ನಲ್ಲಿ ಇವಿಎಂ ಸಮಸ್ಯೆ ಇದ್ದು ಯಾವ ಬಟನ್ಗೆ ಮತ ಹಾಕಿದರೂ ಬಿಜೆಪಿಗೆ ಮತ ಹೋಗಿದೆಯೆಂದು ವಿವಿಪ್ಯಾಟ್ನಲ್ಲಿ ತೋರಿಸುತ್ತಿದೆ ಎಂದಿದ್ದಾರೆ. ಈ ಟ್ವೀಟ್ ಅನ್ನು ಅವರು ಇಂದು 8 ಗಂಟೆ ಸುಮಾರಿಗೆ ಮಾಡಿದ್ದಾರೆ.
Dear FB Friends, polling has not begun again at booth no. 2 opp Sterling Residency RMV II Stage after the EVM/VVPAT was found to be malfunctioning. My own vote is in the same booth.
— Brijesh Kalappa (@brijeshkalappa) May 12, 2018
Meanwhile INC Supporters, please don't be disheartened. Please cast your vote. Make a difference.
9 ಗಂಟೆ ಸುಮಾರಿಗೆ ಮತ್ತೆ ಟ್ವೀಟ್ ಮಾಡಿರುವ ಬ್ರಿಜೇಶ್ ಕಾಳಪ್ಪ ಅವರು, ಇನ್ನೂ ಸಮಸ್ಯೆ ಸರಿಹೋಗಿಲ್ಲ, ಮತದಾರರೆಲ್ಲರೂ ಕೋಪಗೊಂಡು ವಪಾಸ್ಸಾಗುತ್ತಿದ್ದಾರೆ. ನನ್ನ ಮತ ಸಹ ಇದೇ ಬೂತ್ನಲ್ಲಿ ಚಲಾಯಿಸಬೇಕಿದೆ' ಎಂದು ಟ್ವೀಟ್ ಮಾಡಿದ್ದಾರೆ.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

ಮತ್ತೆ ಸಮಸ್ಯೆ ಸರಿಪಡಿಸಿ ಸಾಮಾನ್ಯ ಮತದಾನಕ್ಕೆ ಅವಕಾಶ ಕಲ್ಪಿಸಿರುವ ಬಗ್ಗೆ ಬ್ರಿಜೇಶ್ ಕಾಳಪ್ಪ ಅವರು 12 ಗಂಟೆ ಸುಮಾರಿಗೆ ಟ್ವೀಟ್ ಮಾಡಿದ್ದಾರೆ. ಅಂದರೆ ಸುಮಾರು 5 ಗಂಟೆಗಳ ಕಾಲ ಇವಿಎಂ ಸರಿ ಇರಲಿಲ್ಲ. ಮತದಾನದ ಅವಧಿ ಸಹ ಅಷ್ಟು ಸಮಯ ವ್ಯರ್ಥವಾಗಿದೆ.
ರಾಮನಗರ, ಚಾಮರಾಜಪೇಟೆ ಮತ್ತು ಹೆಬ್ಬಾಳದಲ್ಲಿಯೂ ಇದೇ ರೀತಿಯಲ್ಲಿ ಸಮಸ್ಯೆ ಕಂಡು ಬಂದಿರುವುದಾಗಿ ವರದಿಯಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications