Road Accident: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇವಲ ಎರಡೇ ತಿಂಗಳಿಗೆ ರಸ್ತೆ ಅಪಘಾತದಿಂದ ಇಷ್ಟೊಂದು ಸಾವು.!
ಬೆಂಗಳೂರು, ಮಾರ್ಚ್ 14: ರಾಜ್ಯ ರಾಜಧಾನಿ ಬೆಂಗಳೂರು ಐಟಿ ಸಿಟಿ ಅಂತಲೇ ಹೆಸರುವಾಸಿಯಾಗಿದೆ. ಈ ನಗರದಲ್ಲಿ ಬೆಳಗ್ಗೆ 8 ಆಯಿತಂದರೆ ಸಾಕು ಸಂಚಾರ ದಟ್ಟಣೆ ಶುರುವಾಗಿಬಿಡುತ್ತದೆ. ಇನ್ನೂ ಈ ಟ್ರಾಫಿಕ್ ಜಂಜಾಟದಲ್ಲಿಯೇ ಪ್ರತಿನಿತ್ಯವು ಒಂದಲ್ಲಾ ಒಂದು ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಇನ್ನು ಕಳೆದ ಕೇವಲ ಎರಡು ತಿಂಗಳಲ್ಲಿ ಸಂಭವಿಸಿದ ಅಪಘಾತಗಳ ಸಂಖ್ಯೆ ಎಷ್ಟು ಗೊತ್ತಾ? ಈ ಅಂಕಿಅಂಶಗಳನ್ನು ಗಮನಿಸಿದರೆ ಶಾಕ್ ಆಗೋದಂತೂ ಗ್ಯಾರಂಟಿ. ಮಾಹಿತಿ ಇಲ್ಲಿದೆ ಗಮನಿಸಿ.
ಬೆಂಗಳೂರಿನಲ್ಲಿ 2024ರ ಮೊದಲ ಎರಡು ತಿಂಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ 174 ಜನ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದೆ. ಇನ್ನು 2023ರಲ್ಲಿ 914 ಜನ ಸಾವಿಗೀಡಾಗಿದ್ದಾರೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.

ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಮತ್ತು ಕಾಮರ್ಸ್ (ಬಿಸಿಐಸಿ) ಆಯೋಜಿಸಿದ್ದ ರಸ್ತೆ ಸುರಕ್ಷತಾ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿರುವ ಅವರು, ಬೆಂಗಳೂರಿನಲ್ಲಿ 1.4 ಕೋಟಿ ಜನಸಂಖ್ಯೆಯಿದ್ದು, 1,000ಕ್ಕೆ 827 ಜನರ ಬಳಿ ವಾಹನಗಳಿವೆ.
ಈ ಮೂಲಕ ದೇಶದಲ್ಲೇ ಅತಿ ಹೆಚ್ಚು ವಾಹನಗಳು ಬೆಂಗಳೂರಿನಲ್ಲಿ ಇವೆ. ವಾಹನಗಳ ಅತಿ ವೇಗದ ಚಾಲನೆಯಿಂದ ಶೇಕಡಾ 10 ಸಾವುಗಳು ದೇವನಹಳ್ಳಿಯ ಎಲಿವೇಟೆಡ್ ಕಾರಿಡಾರ್ನಲ್ಲಿ ಸಂಭವಿಸಿವೆ. ನಂತರ ಕೆಂಗೇರಿ ನೈಸ್ ರಸ್ತೆಯಲ್ಲಿ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
2023ರಲ್ಲಿ ಮೃತಪಟ್ಟ 914 ಜನರಲ್ಲಿ ದ್ವಿಚಕ್ರ ವಾಹನ ಸವಾರರು ಶೇಕಡಾ 74 ರಷ್ಟಿದ್ದರೇ, ಶೇಕಡಾ 21 ಪಾದಾಚಾರಿಗಳು ಸಾವನ್ನಪ್ಪಿದ್ದಾರೆ. ಇವರಲ್ಲಿ ಶೇಕಡಾ 60ರಷ್ಟು ಜನ 60 ವಯಸ್ಸಿಗಿಂತ ಮೇಲ್ಪಟ್ಟವರಾಗಿದ್ದಾರೆ. ಸಂಚಾರ ನಿರ್ವಹಣೆಯನ್ನು ಹೆಚ್ಚಿಸಲು, ಅಪಘಾತಗಳನ್ನು ತಡೆಯಲು ಮತ್ತು ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಬೆಂಗಳೂರು ಪೊಲೀಸರು ಕೈಗೊಂಡ ವಿವಿಧ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಸುಧಾರಿತ ತಂತ್ರಜ್ಞಾನಗಳಾದ AI, ಬಿಗ್ ಡೇಟಾ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್, ಜಂಕ್ಷನ್ಗಳಲ್ಲಿ AI ಆಧಾರಿತ ಸಿಗ್ನಲ್ಗಳು, AI ಕ್ಯಾಮೆರಾ ಸಂಚಾರ ದಟ್ಟಣೆ ಕಡಿಮೆ ಮಾಡಲು ಮತ್ತು ಸುರಕ್ಷತೆಯನ್ನು ಹೆಚ್ಚಿಸಲು ಪ್ರಮುಖ ಪಾತ್ರವಹಿಸಿವೆ ಎಂದರು. ಇನ್ನು ಬೆಳಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ಮೂರು ಗಂಟೆಗಳಲ್ಲಿ ಹೆಬ್ಬಾಳದಲ್ಲಿ 90,000 ವಾಹನಗಳು ಸಂಚರಿಸುತ್ತವೆ.
ಇದು ಜಾಗತಿಕವಾಗಿ ಅತ್ಯಧಿಕವಾಗಿದ್ದು, ಹೀಗಾಗಿ ಸಂಚಾರ ದಟ್ಟಣೆಯನ್ನು ತಗ್ಗಿಸಲು ನಕ್ಷೆ ಆಧಾರಿತ ಸೇವೆಗಳು, ಎಫ್ಎಮ್ ರೇಡಿಯೋ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಜನರಲ್ಲಿ ತಿಳಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications