ಬೆಂಗಳೂರಲ್ಲೊಂದು ಬೀರಬಲ್ ರಸ್ತೆ; ಎಲ್ಲಿದೆ ಗೊತ್ತೆ?
ಬೆಂಗಳೂರು, ಆಗಸ್ಟ್ 03: ಕೆಲವು ದಿನಗಳ ತನಕ ಹೆಸರೇ ಇಲ್ಲದ ಬೆಂಗಳೂರು ನಗರದ ರಸ್ತೆಯೊಂದಕ್ಕೆ ಬೀರಬಲ್ ರಸ್ತೆ ಎಂದು ನಾಮಕರಣ ಮಾಡಲಾಗಿದೆ. ರಸ್ತೆಗೆ ಹೆಸರಿಲ್ಲದೇ ಮನೆಯ ವಿಳಾಸ ಕೊಡಲು ಪರದಾಡುತ್ತಿದ್ದ ಜನರಿಗೆ ಇದು ಸಹಾಯಕವಾಗಿದೆ.
Recommended Video
ದೊಮ್ಮಲೂರು ವಾರ್ಡ್ನ ರಸ್ತೆಯೊಂದಕ್ಕೆ 'ಬೀರಬಲ್ ರಸ್ತೆ' ಎಂದು ನಾಮಕರಣ ಮಾಡಲಾಗಿದೆ. ಬಿಬಿಎಂಪಿ ಸದಸ್ಯರಾದ ಸಿ. ಆರ್. ಲಕ್ಷ್ಮೀ ನಾರಾಯಣ ಜುಲೈ 28ರಂದು ರಸ್ತೆಗೆ ನಾಮಕರಣ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, "ದೊರೆ ಅಕ್ಬರ್ಗೆ ಬೀರಬಲ್ ನಂಬಿಕೆಯ ಸಲಹೆಗಾರನಾಗಿದ್ದ. ಅವರು ಉತ್ತಮ ತಂತ್ರಗಾರಿಕೆಯನ್ನು ರೂಪಿಸುತ್ತಿದ್ದರು. ಜಾತಿ, ಧರ್ಮಗಳನ್ನು ಮೀರಿ ಜನರ ಹೃದಯದಲ್ಲಿ ಅವರು ಸ್ಥಾನ ಪಡೆದಿದ್ದಾರೆ" ಎಂದು ಹೇಳಿದ್ದಾರೆ.

"ರಸ್ತೆಗಳಿಗೆ ಇತಿಹಾಸ ಸೃಷ್ಟಿಸಿದ ಜನರ ಹೆಸರನ್ನು ಇಟ್ಟರೆ ಜನರಿಗೆ ಅವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯುತ್ತದೆ. ಮುಂದಿನ ಪೀಳಿಗೆಗೂ ಸಹ ಅವರ ಪರಿಚಯ ಮಾಡಿಕೊಟ್ಟಂತೆ ಆಗುತ್ತದೆ" ಎಂದು ಸಿ. ಆರ್. ಲಕ್ಷ್ಮೀ ನಾರಾಯಣ ತಿಳಿಸಿದ್ದಾರೆ.
ಈ ಹಿಂದೆ ತಮ್ಮ ವಾರ್ಡ್ನಲ್ಲಿನ ರಸ್ತೆಗಳಿಗೆ ಮಹಾಭಾರತದ ಪಾತ್ರಗಳಾದ ಅರ್ಜುನ, ನಕುಲ ಹೆಸರಿಟ್ಟಿದ್ದರು ಸಿ. ಆರ್. ಲಕ್ಷ್ಮೀ ನಾರಾಯಣ. ರಸ್ತೆಯ ಜನರು ಬೀರಬಲ್ ಹೆಸರು ಇಟ್ಟಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ವಾರ್ಡ್ನ ಹಲವು ರಸ್ತೆಗಳಿಗೆ ಯಾವುದೇ ಹೆಸರು ಇಲ್ಲ. ಇದರಿಂದಾಗಿ ಮನೆಯ ವಿಳಾಸ ಕೊಡಲು, ಅಂಚೆ ಮತ್ತು ಕೋರಿಯರ್ ಕಳಿಸಲು ಜನರು ಪರದಾಡುತ್ತಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ












Click it and Unblock the Notifications