ಬೆಂಗಳೂರಿನಲ್ಲಿ ಇಸ್ರೋ ವಿಜ್ಞಾನಿ ಕಾರಿನ ಮೇಲೆ ಸ್ಕೂಟರ್ ಸವಾರನಿಂದ ದಾಳಿ: ನಿಂದನೆ
ಬೆಂಗಳೂರಿನಲ್ಲಿ ಕಾರು, ಸ್ಕೂಟರ್ ಚಾಲಕರ ಮೇಲೆ ಹಲ್ಲೆ, ನಿಂದನೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ತಾನೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಯೊಬ್ಬರ ಕಾರನ್ನು ಕಿಡಿಗೇಡಿಗಳು ಹಾನಿ ಮಾಡಿದ ಘಟನೆ ಬೆನ್ನಲ್ಲೇ, ಮತ್ತೋರ್ವ ಇಸ್ರೋ ವಿಜ್ಞಾನಿಯ ಕಾರಿನ ಮೇಲೆ ದಾಳಿ ಮಾಡಿದ್ದಲ್ಲದೆ ನಿಂದಿಸಿದ ಘಟನೆ ನಡೆದಿದೆ ಎಂದು ವರದಿಯಾಘಿದೆ.
ವಿಜ್ಞಾನಿ ಆಶಿಶ್ ಲಂಬಾ ಅವರು 'ಎಕ್ಸ್' ನಲ್ಲಿ ಹಂಚಿಕೊಂಡ ಪೋಸ್ಟ್ನಲ್ಲಿ ಘಟನೆಯಯ ಬಗ್ಗೆ ವಿವರಣೆ ನೀಡಿದ್ದಾರೆ. ಅವರು ಇಸ್ರೋ ಕಚೇರಿಗೆ ಹೋಗುತ್ತಿದ್ದಾಗ ಸ್ಕೂಟರ್ನಲ್ಲಿ ಹೆಲ್ಮೆಟ್ ಧರಿಸದ ವ್ಯಕ್ತಿಯೊಬ್ಬ ಏಕಾಏಕಿ ತಮ್ಮ ಕಾರಿನ ಮುಂದೆ ಸ್ಕೂಟರ್ ತಿರುಗಿಸಿದ್ದಾರೆ ಎಂದು ವಿವರಿಸಿದರು. ಸ್ಕೂಟರ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿಕೊಳ್ಳಲು ಆಶಿಶ್ ಹಠಾತ್ ಬ್ರೇಕ್ ಹಾಕಿದ್ದು, ಸ್ಕೂಟರ್ ಸವಾರ ತನ್ನ ಕಾರಿನ ಮುಂದೆ ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂದು ಹೇಳಿದ್ದಾರೆ.

ಕಾರಿನ ಡ್ಯಾಶ್ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿರುವ ವಿಡಿಯೋ ದೃಶ್ಯಾವಳಿಗಳು ಮತ್ತು ಚಿತ್ರಗಳನ್ನು ಹಂಚಿಕೊಂಡ ಆಶಿಶ್, ಆಗಸ್ಟ್ 29 ರಂದು ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಇತ್ತೀಚೆಗೆ ನಿರ್ಮಿಸಲಾದ ಎಚ್ಎಎಲ್ ಅಂಡರ್ಪಾಸ್ ಬಳಿ ಘಟನೆ ಸಂಭವಿಸಿದೆ ಎಂದು ಮಾಹಿತಿ.
@blrcitytraffic @CPBlr @BlrCityPolice Yesterday during going to ISRO office,Near to newly constructed HAL underpass, a person on scooty (KA03KM8826) without helmet was driving recklessly and coming in front of our car suddenly and so We had to apply sudden brake. pic.twitter.com/xwDyEy2peA
— Aashish Lamba (@lambashish) August 30, 2023
ವಿಜ್ಞಾನಿಗೆ ನಿಂದಿಸಿದ ಬೈಕ್ ಸವಾರ
"ಸ್ಕೂಟರ್ ಸವಾರ ತನ್ನ ಕಾರಿನ ಬಳಿಗೆ ಬಂದು ತನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದನು. ಕೋಪದ ಭರದಲ್ಲಿ ತನ್ನ ಕಾರಿನ ಟೈರ್ಗಳನ್ನು ಒದ್ದಿದ್ದಾನೆ. ನಿನ್ನೆ ಇಸ್ರೋ ಕಚೇರಿಗೆ ಹೋಗುತ್ತಿದ್ದಾಗ, ಹೊಸದಾಗಿ ನಿರ್ಮಿಸಲಾದ ಎಚ್ಎಎಲ್ ಅಂಡರ್ಪಾಸ್ ಬಳಿ, ಹೆಲ್ಮೆಟ್ ಇಲ್ಲದೆ ಸ್ಕೂಟಿಯಲ್ಲಿ (ಕೆಎ 03 ಕೆಎಂ 8826) ವ್ಯಕ್ತಿಯೊಬ್ಬರು ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದರು ಮತ್ತು ನಮ್ಮ ಕಾರಿನ ಮುಂದೆ ಇದ್ದಕ್ಕಿದ್ದಂತೆ ಬರುತ್ತಿದ್ದರು ಮತ್ತು ಆದ್ದರಿಂದ ನಾವು ಸಡನ್ ಬ್ರೇಕ್ ಹಾಕಬೇಕಾಯಿತು" ಎಂದು ಅವರು ಟ್ವಿಟರ್ ನಲ್ಲಿ ಬರೆದಿದ್ದಾರೆ. .
"ಅವರು ನಮ್ಮ ಕಾರಿಗೆ ಬಂದರು ಜಗಳವಾಡಲು ಪ್ರಾರಂಭಿಸಿದರು. ಅವನು ನನ್ನ ಕಾರನ್ನು ಎರಡು ಬಾರಿ ಒದ್ದು ಹಾರಿಸಿದನು. ದಯವಿಟ್ಟು ಕ್ರಮ ತೆಗೆದುಕೊಳ್ಳಿ" ಎಂದು ಪೋಸ್ಟ್ನಲ್ಲಿ ಮನವಿ ಮಾಡಿದ್ದಾರೆ.
ಅಧಿಕೃತ ಬೆಂಗಳೂರು ಪೊಲೀಸ್ ಖಾತೆಯು ತಕ್ಷಣವೇ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ನಿಮ್ಮ ಟ್ವೀಟ್ ಗಮನಿಸಲಾಗಿದೆ. ನಾವು ಸಂಬಂಧಿತ ಪೊಲೀಸ್ ಅಧಿಕಾರಿಗೆ ಸೂಚನೆ ನೀಡುತ್ತೇವೆ, ಹೆಚ್ಚಿನ ಸಂವಹನಕ್ಕಾಗಿ ಆಶಿಶ್ ಅವರ ಸಂಪರ್ಕ ವಿವರ ನೀಡುವಂತೆ ಮನವಿ ಮಾಡಿದೆ.
ಕ್ರಮ ತೆಗೆದುಕೊಳ್ಳಲು ಒತ್ತಾಯ
ಒಬ್ಬ ಬಳಕೆದಾರ ಪ್ರತಿಕ್ರಿಯಿಸಿ , "ಆರೋಪಿಯ ಬಂಧನದ ಕುರಿತು ಯಾವುದೇ ನವೀಕರಣವಿದೆಯೇ? ಬಲಿಯಾದವರು ಇಸ್ರೋ ವಿಜ್ಞಾನಿ. ಇದು ನಮ್ಮ ಮುಂಚೂಣಿಯಲ್ಲಿರುವವರ ಸ್ಥಿತಿ, ಸಾಮಾನ್ಯ ನಾಗರಿಕರಿರಲಿ. ಅಸಂಸ್ಕೃತ ಗೂಂಡಾಗಳ ಮೇಲೆ ಯಾವ ವಿಭಾಗಗಳನ್ನು ಕಪಾಳಮೋಕ್ಷ ಮಾಡುತ್ತಿದ್ದೀರಿ? ದಯವಿಟ್ಟು ಆತನ ಬಂಧನವನ್ನು ಬಹಿರಂಗ ಪಡಿಸಿ" ಎಂದು ಕೇಳಿದ್ದಾರೆ.
ಮತ್ತೊಬ್ಬರು, "ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ರೋಡ್ ರೇಜ್ ಪ್ರಕರಣಗಳು ದಾಖಲಾಗುತ್ತಿರುವುದು ಬೇಸರ ತಂದಿದೆ" ಎಂದು ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications