ಸಂಚಾರ ನಿಯಮ ಇರುವುದು ಪೊಲೀಸರಿಗಲ್ಲ ಸ್ವಾಮಿ ನಿಮಗೆ
ಬೆಂಗಳೂರು, ಜು.20: ರಸ್ತೆ ಸುರಕ್ಷತಾ , ಸಂಚಾರಿ ನಿಯಮಗಳು ನಿಯಮಗಳು ಎಷ್ಟು ಮಂದಿಗೆ ಗೊತ್ತು, ಆ ನಿಯಮಗಳನ್ನು ಎಷ್ಟು ಜನ ಪಾಲನೆ ಮಾಡ್ತೀರಾ ಎಂದು ಪ್ರಶ್ನಿಸಿದರೆ ಯಾರಲ್ಲೂ ಉತ್ತರವಿಲ್ಲ.
ಪ್ರತಿನಿತ್ಯ ನಗರದಲ್ಲಿ ರಸ್ತೆ ಸುರಕ್ಷತಾ ನಿಯಮವನ್ನು ಉಲ್ಲಂಘಿಸಿ ನೂರಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಹೆಲ್ಮೆಟ್ ಹಾಕಿಕೊಂಡು ಬೈಕ್ ಚಲಾಯಿಸಿ ಎಂದರೆ ಹೆಲ್ಮೆಟ್ನ್ನು ಕೈಯಲ್ಲಿಟ್ಟುಕೊಂಡು ಓಡಾಡುತ್ತಾರೆ, ಸಿಗ್ನಲ್ಲ್ಲಿ ಕೆಂಪು ಲೈಟ್ ಬಂದಾಗ ನಿಲ್ಲಿ ಎಂದರೆ ನಿಯಮವಿರುವುದು ನಮಗಲ್ಲ ಎನ್ನುವ ಹಾಗೆ ಕ್ರಾಸ್ ಮಾಡಿಕೊಂಡು ಹೋಗುತ್ತಾರೆ.

ಹಾಗಾದರೆ ಈ ಎಲ್ಲಾ ಸುರಕ್ಷತಾ ನಿಯಮವಿರುವುದು ಕೇವಲ ಪೊಲೀಸರಿಗಾಗಿಯೇ ಎನ್ನುವ ಅನುಮಾನಗಳು ಕಾಡುತ್ತಿವೆ. ಈ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಲು ನೂರಾರು ಅಭಿಯಾನಗಳನ್ನು ಹಮ್ಮಿಕೊಳ್ಳುತ್ತಿದೆ.

ನಗರದ ಹಲಸೂರು, ಟ್ರಿನಿಟಿ ಸರ್ಕಲ್, ಚಾಲುಕ್ಯ ಸರ್ಕಲ್ ಮುಂತಾದ ಕಡೆ ಹೆಲ್ಮೆಟ್ ಹಾಕದಿದ್ರೆ ಯಮ ಬರ್ತಾನೆ ಎನ್ನುವ ವಿಷಯವನ್ನಿಟ್ಟುಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಇನ್ನು ಕೆಲವೆಡೆ ಶಾಲಾ ಮಕ್ಕಳಿಗೆ ಈ ಸಂಚಾರ ನಿಯಮಗಳು, ಅದು ಯಾವ ರೀತಿಯಲ್ಲಿ ಉಲ್ಲಂಘನೆಯಾಗುತ್ತಿದೆ ಯಾವ ತಪ್ಪನ್ನು ಮಕ್ಕಳು ಮಾಡಬಾರದು ಎನ್ನುವ ಕುರಿತು ತಿಳಿ ಹೇಳಲಾಗುತ್ತಿದೆ.

ಇನ್ನು ಆಟೋ ಚಾಲಕರು, ಸಾರ್ವಜನಿಕರಿಗೆ ಸಂಚಾರ ನಿಯಮಗಳುಳ್ಳ ಕರಪತ್ರಗಳನ್ನು ಹಂಚಲಾಗುತ್ತಿದೆ, ಕರಪತ್ರದಲ್ಲಿರುವ ನಿಯಮಗಳನ್ನು ಓದಿರಿ, ಸಂಚಾರಿ ನಿಯಮವನ್ನು ಪಾಲಿಸಿರಿ ಎಂದು ಜಾಗೃತಿ ಮೂಡಿಸುತ್ತಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications