Namma Metro: 'ನೀಲಿ ಮಾರ್ಗ'ದಲ್ಲಿ ತೆಲೆ ಎತ್ತಲಿದೆ ಅತೀ ಎತ್ತರದ ಮೆಟ್ರೋ ನಿಲ್ದಾಣ, ಕಾಮಗಾರಿ ಅಪ್ಡೇಟ್
ಬೆಂಗಳೂರು, ಫೆಬ್ರವರಿ 27: ಬೆಂಗಳೂರು ಜನರ ಜೀವನಾಡಿ ನಮ್ಮ ಮೆಟ್ರೋ (Namma Metro Blue Line) ನೀಲಿ ಮಾರ್ಗದಲ್ಲಿ ಕಾಮಗಾರಿ ಬರದಿಂದ ಸಾಗಿದೆ. ಉತ್ತರದಿಂದ ದಕ್ಷಿಣ ಭಾಗಗಳಲ್ಲಿ ಸಂಪರ್ಕ ಸಾಧಿಸುವ ಈ ನೀಲಿ ಮಾರ್ಗದಲ್ಲಿ ಅತೀ ಎತ್ತರದ ಮೆಟ್ರೋ ನಿಲ್ದಾಣದ ರೂಫ್ ಟ್ರಸ್ ಸಾಮಗ್ರಿ ಅಳವಡಿಕೆ ಮಾಡಲಾಗುತ್ತಿದೆ. ನೀಲಿ ಮಾರ್ಗದಲ್ಲಿನ ಎಲ್ಲ ನಿಲ್ದಾಣಗಳ ಈ ನಿಲ್ದಾಣವೇ ರೂಫ್ ಟ್ರಸ್ ಅಳವಡಿಕೆಯಲ್ಲಿ ಮೊದಲನೇಯದ್ದು ಎಂದು ಹೇಳಲಾಗುತ್ತಿದೆ.
ನಮ್ಮ ಮೆಟ್ರೋ ಯೋಜನೆಯ ಪೈಕಿ 2ಎ ಮತ್ತು 2ಬಿ ಅಡಿ ಎರಡು ಹಂತಗಳಲ್ಲಿ ಔಟರ್ ರಿಂಗ್ ರೋಡ್ (ORR) ಈ ನೀಲಿ ಮಾರ್ಗದ ನಿರ್ಮಾಣ ಕಾರ್ಯ ಮಾಡಲಾಗುತ್ತಿದೆ. ಸಿಲ್ಕ್ ಬೋರ್ಡ್ನಿಂದ ಕೆ.ಆರ್.ಪುರಂ ಮತ್ತು ಕೆ.ಆರ್.ಪುರಂ ನಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವರೆಗೆ ಎರಡು ಹಂತಗಳಲ್ಲಿ ನೀಲಿ ಮಾರ್ಗವು ತಲೆ ಎತ್ತಲಿದೆ. ಒಟ್ಟು 56 ಕಿ.ಮೀ. ಉದ್ದವಿರುವ ಈ ಮಾರ್ಗದಲ್ಲಿ, 30 ಮೆಟ್ರೋ ನಿಲ್ದಾಣಗಳು ನಿರ್ಮಾಣವಾಗುತ್ತಿವೆ.

ಈ ಎಲ್ಲ ಮೆಟ್ರೋ ನಿಲ್ದಾಣಗಳ ಪೈಕಿ ORR ವ್ಯಾಪ್ತಿಯಲ್ಲಿ ಬರುವ ಸರಸ್ವತಿ ನಗರ ಮೆಟ್ರೋ ನಿಲ್ದಾಣವು ಪರಿಪೂರ್ಣವಾಗಿ ಸಿದ್ಧವಾಗುವ ಮೊದಲ ನಿಲ್ದಾಣವಾಗಲಿದೆ. ರೂಫ್ ಟ್ರಸ್ ಸಾಮಗ್ರಿಗಳನ್ನು ಅಳವಡಿಸಲಾಗುತ್ತಿದೆ. ಈ ಕಾರ್ಯ ಆರಂಭಿಸುತ್ತಿರುವ ಎಲ್ಲ ನಿಲ್ದಾಣಗಳಲ್ಲಿ ಮೊದಲನೆಯದು ಎಂಬ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ (X) @sunilho ಮಾಹಿತಿ ಹಂಚಿಕೊಂಡಿದ್ದಾರೆ.
ನೀಲಿ ಮಾರ್ಗದಲ್ಲಿ ಬರುವ ಈ ಸರಸ್ವತಿ ನಗರವು ಬೆಂಗಳೂರಿನಲ್ಲಿರುವ ನಮ್ಮ ಮೆಟ್ರೋದ ನೀಲಿ ಮಾರ್ಗದಲ್ಲಿ ಉತ್ತರ-ದಕ್ಷಿಣ ಕಾರಿಡಾರ್ನಲ್ಲಿ ಕಟ್ಟಲಾಗುತ್ತಿರುವ ಅತೀ ಎತ್ತರದ ಮೆಟ್ರೋ ನಿಲ್ದಾಣವಾಗಿದೆ. ಈ ಮೆಟ್ರೋ ನಿಲ್ದಾಣವು ಮುಖ್ಯವಾಗಿ ಲೌರಿ ಸ್ಮಾರಕ ಶಿಕ್ಷಣ ಸಂಸ್ಥೆಗಳಿಗೆ, ಹುಂಡೈ, ಎಂಜಿ (ಮೋರಿಸ್ ಗ್ಯಾರೇಜಸ್), ಟಾಟಾ ಮೋಟಾರ್ಸ್, ರೆನಾಲ್ಟ್ ಮತ್ತು ಹೋಂಡಾ ಮೋಟಾರ್ಸ್ನಂತಹ ಕೆಲವು ಆಟೋಮೋಟಿವ್ ಕಂಪನಿಗಳ ನೌಕರರಿಗೆ, ಈ ಭಾಗದ ಜನರಿಗೆ ಸೇವೆ ಸಲ್ಲಿಸುತ್ತದೆ.

SNC ಯಿಂದ ಸರಸ್ವತಿ ನಗರ ಮೆಟ್ರೋ ನಿಲ್ದಾಣ ನಿರ್ಮಾಣ
ಇನ್ನೂ ಈ ಸರಸ್ವತಿ ನಗರ ವ್ಯಾಪ್ತಿಯಲ್ಲಿ ಕೆ.ಆರ್.ಪುರಂ, ಮಹಾದೇವಪುರ ಮತ್ತು ವೈಟ್ಫೀಲ್ಡ್, ಎಚ್ಎಸ್ಆರ್ ಬಡಾವಣೆ, ಸಿಲ್ಕಬೋರ್ಡ್ ಕಡೆಗಿಂತನ ಓಡಾಡುವವರಿಗೆ ಪ್ರಮುಖ ಸ್ಥಳವು ಆಗಿದೆ. ಈ ಮೆಟ್ರೋ ಮಾರ್ಗ ಮತ್ತು ನಿಲ್ದಾಣಗಳು 2026 ರ ಜೂನ್ ನಲ್ಲಿ ಕಾರ್ಯಾರಂಭಗೊಳಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಪ್ಲಾನ್ ಮಾಡಿಕೊಂಡಿದೆ.
ಬೆಂಗಳೂರು ಮೆಟ್ರೋದ 56 ಕಿಮೀ ನೀಲಿ ಮಾರ್ಗವನ್ನು ನಾಗಾರ್ಜುನ್ ಕನ್ಸ್ಟ್ರಕ್ಷನ್ಸ್, ಶಂಕರನಾರಾಯಣ ಕನ್ಸ್ಟ್ರಕ್ಷನ್ಸ್ (SNC), ಎಂಆರ್ ನಾಗಾರ್ಜುನ್ ಸೇರಿ ವಿವಿಧ ಕಂಪನಿಗಳು ನಿರ್ಮಿಸುತ್ತಿವೆ. ಈ ಸರಸ್ವತಿ ನಗರ ಮೆಟ್ರೋ ನಿಲ್ದಾಣ ನಿರ್ಮಾಣ ಜವಾಬ್ದಾರಿಯನ್ನು ಶಂಕರನಾರಾಯಣ ಕನ್ಸ್ಟ್ರಕ್ಷನ್ಸ್ (SNC) ವಹಿಸಿಕೊಂಡಿದೆ.
-
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications