ನಮ್ಮ ಬೆಂಗಳೂರು ಪ್ರಶಸ್ತಿ ಸ್ವೀಕರಿಸಲು ರೂಪಾ ನಿರಾಕರಣೆ
ಬೆಂಗಳೂರು, ಮಾರ್ಚ್ 24 : ಐಪಿಎಸ್ ಅಧಿಕಾರಿ ರೂಪಾ ಮೌದ್ಗೀಲ್ ಅವರು ನಮ್ಮ ಬೆಂಗಳೂರು ಫೌಂಡೇಷನ್ ನೀಡುವ 'ನಮ್ಮ ಬೆಂಗಳೂರು ಪ್ರಶಸ್ತಿ'ಯನ್ನು ಸ್ವೀಕರಿಸಲು ನಯವಾಗಿಯೇ ತಿರಸ್ಕರಿಸಿದ್ದಾರೆ.
ಈ ಕುರಿತು, ಹೋಂ ಗಾರ್ಡ್ಸ್ ಮತ್ತು ಸಿವಿಲ್ ಡಿಫೆನ್ಸ್ನ ಐಜಿಪಿ ಆಗಿರುವ ಅವರು, ನಮ್ಮ ಬೆಂಗಳೂರು ಫೌಂಡೇಷನ್ಗೆ ಶನಿವಾರ ಪತ್ರ ಬರೆದಿದ್ದು, ತಾವು ಸರಕಾರಿ ಅಧಿಕಾರಿಯಾಗಿರುವುದರಿಂದ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಲು ಮನಸ್ಸು ಒಪ್ಪುತ್ತಿಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಅಭಿವೃದ್ಧಿಗಾಗಿ ಶ್ರಮವಹಿಸಿ ದುಡಿಯುವ ನಾನಾ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ ವ್ಯಕ್ತಿಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಯನ್ನು ಮಾರ್ಚ್ 25ರಂದು ಜಯನಗರದ ಎನ್ಎಂಕೆಆರ್ವಿ ಕಾಲೇಜಿನ ಮಂಗಳ ಸಭಾಂಗಣದಲ್ಲಿ ಸಂಜೆ 4.30ಕ್ಕೆ ನೀಡಲಾಗುತ್ತಿದೆ.

ರಾಜ್ಯಸಭೆಗೆ ಕರ್ನಾಟಕದಿಂದ ಹೊಸದಾಗಿ ಆಯ್ಕೆಯಾಗಿರುವ ರಾಜೀವ್ ಚಂದ್ರಶೇಖರ್ ಅವರ ನೇತೃತ್ವದಲ್ಲಿ 'ನಮ್ಮ ಬೆಂಗಳೂರು ಫೌಂಡೇಷನ್' ಈ ಪ್ರಶಸ್ತಿ ನೀಡುತ್ತಿದೆ. ರೂಪಾ ಮೌದ್ಗೀಲ್ ಅವರು ಬರೆದ ಪತ್ರದ ಸಾರಾಂಶ ಕೆಳಗಿನಂತಿದೆ.
'ನಮ್ಮ ಬೆಂಗಳೂರು ಪ್ರಶಸ್ತಿ'ಗೆ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು. ಆದರೆ, ಈ ಪ್ರಶಸ್ತಿ ಭಾರೀ ಮೊತ್ತ ಒಳಗೊಂಡಿರುವುದೆ ಮತ್ತು ಇದನ್ನು ಸ್ವೀಕರಿಸಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ.
ಅಲ್ಲದೆ, ಪ್ರತಿ ಸರಕಾರಿ ನೌಕರರು ತಟಸ್ಥ ನೀತಿ ಪಾಲಿಸಬೇಕು ಮತ್ತು ಅರೆ-ರಾಜಕೀಯ ಸಂಸ್ಥೆ, ಸಂಘಟನೆಗಳಿಂದ ಸಮಾನ ದೂರನ್ನು ಕಾಪಾಡಿಕೊಳ್ಳಬೇಕು ನಿರೀಕ್ಷಿಸಲಾಗುತ್ತದೆ. ಆಗ ಮಾತ್ರ ಸಾರ್ವಜನಿಕರಿಂದ ಸ್ವಚ್ಛ ಮತ್ತು ಸ್ವಸ್ಥ ವ್ಯಕ್ತಿತ್ವವನ್ನು ಕಾಪಾಡಿಕೊಳ್ಳಲು ಸಾಧ್ಯ. ಅಲ್ಲದೆ, ಚುನಾವಣೆ ಬೇರೆ ಹತ್ತಿರವಿರುವುದರಿಂದ ಇನ್ನೂ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತದೆ.
ನೀವು ಹಲವಾರು ವರ್ಷಗಳಿಂದ ಜನರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದಕ್ಕಾಗಿ ನಿಮ್ಮನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ನಿಮ್ಮ ಫೌಂಡೇಷನ್ನ ಇಂಥ ಸಾರ್ವಜನಿಕ ಕೇಂದ್ರಿತ ಮತ್ತು ಸಾಮಾಜಿಕ ಕಳಕಳಿಯ ಕೆಲಸಕ್ಕೆ ನನ್ನ ಸಹಕಾರ ಮತ್ತು ಬೆಂಬಲ ಯಾವತ್ತಿಗೂ ಇದ್ದೇ ಇರುತ್ತದೆ. ಆದರೆ, ಪ್ರಶಸ್ತಿ ಸ್ವೀಕರಿಸದಿರುವುದಕ್ಕೆ ದಯವಿಟ್ಟು ಕ್ಷಮಿಸಿರಿ.
ಇಂತಿ ನಿಮ್ಮ ವಿಶ್ವಾಸಿ
ರೂಪಾ ಮೌದ್ಗೀಲ್
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications