Get Updates
Get notified of breaking news, exclusive insights, and must-see stories!

ಐಎಂಎ ಹಗರಣಕ್ಕೆ ಸ್ಫೋಟಕ ತಿರುವು ನೀಡಿದ ಸಚಿವರ ಹೇಳಿಕೆ

Recommended Video

      ಆರ್.ವಿ.ದೇಶಪಾಂಡೆ ನೀಡಿದ ಹೇಳಿಕೆ ನಿಜಾನಾ? | Oneindia Kannada

      ಬೆಂಗಳೂರು, ಜೂನ್ 17: ಬಹುಕೋಟಿ ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಸತ್ಯಗಳು ಒಂದೊಂದಾಗಿ ಹೊರಬರುತ್ತಿದ್ದು, ಸಚಿವ ಆರ್ ವಿ ದೇಶಪಾಂಡೆ ನೀಡಿದ ಹೇಳಿಕೆ, ಪ್ರಕರಣಕ್ಕೆ ಭಾರೀ ತಿರುವು ನೀಡುವ ಸಾಧ್ಯತೆಯಿದೆ.

      ಕಾಂಗ್ರೆಸ್ಸಿನ ಹಿರಿಯ ಮುಖಂಡರ ಜೊತೆ ಮುನಿಸಿಕೊಂಡು, ಬಹಿರಂಗ ಹೇಳಿಕೆ ನೀಡಿದ್ದ ಶಿವಾಜಿನಗರ ಶಾಸಕ ರೋಶನ್ ಬೇಗ್ ರನ್ನು ಗುರಿಯಾಗಿಸಿಕೊಂಡು ದೇಶಪಾಂಡೆ ಹೇಳಿಕೆ ನೀಡಿದ್ದಾರೆ.

      ಅಂದು, ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ಜೊತೆ ರೋಶನ್ ಬೇಗ್ ನನ್ನನ್ನು ಭೇಟಿಯಾಗಿದ್ದರು. ಅವರ ಕಂಪೆನಿಗೆ ಎನ್ಒಸಿ (no objection certificate) ನೀಡುವಂತೆ ಶಿಫಾರಸು ಮಾಡಿದ್ದರು ಎಂದು ದೇಶಪಾಂಡೆ ಹೇಳಿದ್ದಾರೆ.

      Roshan Baig met me alongwith Mansoor Khan, Minister RV Deshpande statement

      ಇಂಗ್ಲಿಷ್ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಉಲ್ಲೇಖಿಸಿರುವ ದೇಶಪಾಂಡೆ, ಸರಕಾರ ಮನ್ಸೂರ್ ಖಾನ್ ಗೆ ಎನ್ಒಸಿ ನೀಡಿದರೆ, ಬ್ಯಾಂಕ್ ನಿಂದ ಸುಮಾರು ಆರುನೂರು ಕೋಟಿ ಸಾಲ ಅವರಿಗೆ ದೊರೆಯುತ್ತಿತ್ತು ಎಂದು ದೇಶಪಾಂಡೆ ಹೇಳಿದ್ದಾರೆ.

      ಮನ್ಸೂರ್ ಖಾನ್ ಬಗ್ಗೆ ಒಳ್ಳೆಯ ಅಭಿಪ್ರಾಯ ರೋಶನ್ ಬೇಗ್ ವ್ಯಕ್ತಪಡಿಸಿದ್ದರು. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಅವರು ವ್ಯವಹಾರ ನಡೆಸುತ್ತಿದ್ದಾರೆ. ಆತ ಒಳ್ಳೆಯ ಮನುಷ್ಯ ಎಂದು ಮನ್ಸೂರ್ ಅವರನ್ನು ಬೇಗ್ ಹೊಗಳಿದ್ದರು ಎಂದು ದೇಶಪಾಂಡೆ ಹೇಳಿದ್ದಾರೆ.

      ಕಾನೂನೂ ರೀತಿಯಲ್ಲಿ ಏನು ಮಾಡಲು ಸಾಧ್ಯವೋ ಅದನ್ನು ಮಾತ್ರ ನನ್ನಿಂದ ಮಾಡಲು ಸಾಧ್ಯ ಎಂದು ರೋಶನ್ ಬೇಗ್ ಅವರಿಗೆ ನಾನು ಹೇಳಿದ್ದೆ ಎಂದು ಸಚಿವ ದೇಶಪಾಂಡೆ ಹೇಳಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+