ಸ್ಲಂ ಭರತ್ ಶಿಷ್ಯನ ಮುಂಗೈ ಕತ್ತರಿಸಿದ ಕಿರಾತಕರು ಎಸ್ಕೇಪ್
ಬೆಂಗಳೂರು, ಜೂ. 01: ಬೆಂಗಳೂರಿನಲ್ಲಿ ಗ್ಯಾಂಗ್ ವಾರ್ ಮತ್ತೆ ಶುರುವಾಗಿದೆ. ಡಿಯೋ ಬೈಕ್ ಸರ್ವೀಸ್ ನೀಡುವ ವಿಚಾರವಾಗಿ ಬೆಂಗಳೂರಿನ ಹಳೇ ರೌಡಿಗಳ ಶಿಷ್ಯಂದಿರು ಕೈ ಕತ್ತರಿಸಿಕೊಂಡಿದ್ದಾರೆ. ಸ್ಲಂ ಬರತ್ ಮತ್ತು ಟಿಂಬರ್ ಕಿಟ್ಟಿ ಎಂಬ ಪಾತಕಿಗಳ ಸಹಚರರ ನಡುವೆ ಮಾರಾಮಾರಿ ನಡೆದು ಲಾಂಗ್ ಗಳಿಂದ ಹೊಡೆದಾಡಿಕೊಂಡಿದ್ದಾರೆ. ಸ್ಲಂ ಭರತ್ ನ ಆಪ್ತ ಚಂದನ್ ಅಲಿಯಾಸ್ ಪಿನ್ಲೆ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.
ಬ್ಯಾಟರಾಯನಪುರ ಪೊಲೀಸ್ ಠಾಣೆ ರೌಡಿ ಶೀಟರ್ ಆಗಿರುವ ಚಂದನ್ ಪಾತಕಿ ಸ್ಲಂ ಭರತ್ ನ ಗ್ಯಾಂಗ್ ನಲ್ಲಿ ಗುರುತಿಸಿಕೊಂಡಿದ್ದ. ಸ್ಲಂ ಭರತ್ ಎನ್ ಕೌಂಟರ್ ಬಳಿಕ ಆತನ ಶಿಷ್ಯ ಚಂದನ್ ಪಾತಕ ಲೋಕ ಬಿಟ್ಟು ಗಣಪತಿ ನಗರದಲ್ಲಿ ಬೈಕ್ ಶೋ ರೂಂ ತೆರೆದಿದ್ದ. ಸ್ಲಂ ಭರತ್ ಎದುರಾಳಿ ಗ್ಯಾಂಗ್ ಟಿಂಬರ್ ಕಿಟ್ಟಿ ಸಹಚರರು ಗುರುವಾರ ಬೆಳಗ್ಗೆ ಗಣಪತಿ ನಗರದಲ್ಲಿರುವ ಚಂದನ್ ಬೈಕ್ ಶೋ ರೂಂಗೆ ಹೋಗಿದ್ದಾರೆ. ಸರ್ವೀಸ್ ವಿಚಾರವಾಗಿ ಜಗಳ ನಡೆದಿದೆ. ಈ ವೇಳೆ ಟಿಂಬರ್ ಕಿಟ್ಟಿ ಕಡೆಯವರು ಎನ್ನಲಾದ ಯುವಕರು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತಪ್ಪಿಸಿಕೊಳ್ಳಲು ಕೈ ಅಡ್ಡ ಇಟ್ಟ ಚಂದನ್ ಮುಂಗೈ ಅರ್ಧ ಕಟ್ಟಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಬ್ಯಾಟರಾಯನಪುರ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Recommended Video
ಕೊರೊನಾ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪರಾಧ ಲೋಕ ತಣ್ಣಗೆ ಮಲಗಿತ್ತು. ಇದೀಗ ಲಾಕ್ ಡೌನ್ ಸಡಿಲ ಆಗುತ್ತಿದ್ದಂತೆ ಪಾತಕ ಲೋಕ ಪುಟಿದೆದ್ದಿದೆ. ಹಾಡ ಹಗಲೇ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ರನ್ನು ಹತ್ಯೆ ಮಾಡಿದ್ದರು. ರೇಖಾ ಸಂಬಂಧಿಕರಿಂದ ಸುಪಾರಿ ಪಡೆದು ಹತ್ಯೆ ಮಾಡಿದ ಏಳು ಮಂದಿ ಪಾತಕಿಗಳು ಜೈಲಿಗೆ ಹೋಗಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಎರಡು ರೌಡಿ ಪಡೆಗಳ ನಡುವಿನ ಕಾಳಗ ಬೆಂಗಳೂರು ಪಾತಕ ಲೋಕವನ್ನು ಅನಾವರಣಗೊಳಿಸಿದೆ.
-
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ












Click it and Unblock the Notifications