ಬೆಂಗಳೂರಲ್ಲಿ 20ಕ್ಕೂ ಹೆಚ್ಚು ಶೆಡ್ ನಾಶ: ನೂರಾರು ಕುಟುಂಬ ಬೀದಿ ಪಾಲು
ಬೆಂಗಳೂರು, ಫೆಬ್ರವರಿ 14: ಬೆಂಗಳೂರಲ್ಲಿ 20ಕ್ಕೂ ಹೆಚ್ಚು ಶೆಡ್ಗಳನ್ನು ರೌಡಿಗಳು ನಾಶಪಡಿಸಿದ್ದಾರೆ.
ಭೂ ವಿವಾದ ಹಿನ್ನೆಲೆ ಕಿಡಿಗೇಡಿಗಳು ಮಾರಕಾಸ್ತ್ರಗಳೊಂದಿಗೆ ಆಗಮಿಸಿ ಶೆಡ್ಗಳಲ್ಲಿ ವಾಸಿಸುತ್ತಿರುವವರ ಮೇಲೆ ಹಲ್ಲೆ ಮಾಡಿ ಶೆಡ್ಗಳನ್ನು ನೆಲಸಮ ಮಾಡಿದ್ದಾರೆ. ಈ ಘಟನೆ ಮಾರತ್ತಹಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಕೊಳ್ಳಲ ಗ್ರಾಮ ಸಮೀಪ ನಡೆದಿದೆ.
ಮುನೇಕೊಳ್ಳಲ ಗ್ರಾಮದ ಹೊರಭಾಗದಲ್ಲಿ ಜಯಮ್ಮ ಎಂಬುವವರ ಪುತ್ರ ನವೀನ್ ರೆಡ್ಡಿ ಅವರಿಗೆ ಪಿತ್ರಾರ್ಜಿತ ಜಮೀನಿದೆ. ಇಲ್ಲಿ ಶೆಡ್ಗಳನ್ನು ನಿರ್ಮಿಸಿ ಪಶ್ಚಿಮ ಬಂಗಾಳದ ಜನರಿಗೆ 13 ವರ್ಷಗಳಿಂದ ಬಾಡಿಗೆ ನೀಡಿದ್ದರು. ಆ ಸ್ಥಳದಲ್ಲಿ 20ಕ್ಕೂ ಹೆಚ್ಚು ಶೆಡ್ ಗಳಲ್ಲಿ ನೂರಾರು ಚಿಂದಿ ಆಯುವ ಕೆಲಸ ಮಾಡುವವರು ವಾಸವಿದ್ದರು.

ನಾರಾಯಣರೆಡ್ಡಿ ಹೆಸರಿನಲ್ಲಿ 50ಕ್ಕೂ ಹೆಚ್ಚು ರೌಡಿಗಳ ತಂಡ ಏಕಾಏಕಿ ಆಗಮಿಸಿ ಶೆಡ್ಗಳನ್ನು ನಾಶಪಡಿಸಿದ್ದಾರೆ. ಇದರಿಂದ 20 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ.
ಗುರುವಾರ ಬೆಳಗ್ಗೆ 50ಕ್ಕೂ ಹೆಚ್ಚು ಗೂಂಡಾಗಳು ಮೂರು ಜೆಸಿಬಿ ಹಾಗೂ ದ್ವಿಚಕ್ರ ವಾಹನಗಳಲ್ಲಿ ಬಂದು ಶೆಡ್ಗಳನ್ನು ಜಮೀನು ಮಾಲಿಕರು ಹಾಗೂ ಸ್ಥಳೀಯ ಪೊಲೀಸರಿಗೆ ತಿಳಿಸದೆ ತೆರವುಗೊಳಿಸಿದ್ದಾರೆ.
ಅಲ್ಲದೆ ಶೆಡ್ಗಳನ್ನು ತೆರವುಗೊಳಿಸುವ ವೇಳೆ ಮಹಿಳೆಯರು ಹಾಗೂ ಪುಟ್ಟ ಮಕ್ಕಳ ಮೇಲೂ ಹಲ್ಲೆ ನಡೆಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ರೌಡಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ











Click it and Unblock the Notifications