ಬ್ಯಾಂಕ್ನಲ್ಲಿ ರೌಡಿ ಬಬ್ಲಿ ಹತ್ಯೆ ಮಾಡಿದ್ದ ಹಂತಕರ ಕಾಲಿಗೆ ಗುಂಡೇಟು
ಬೆಂಗಳೂರು, ಜು. 21: ಬ್ಯಾಂಕ್ನೊಳಗೆ ನುಗ್ಗಿ ರೌಡಿ ಶೀಟರ್ ಬಬ್ಲಿಯನ್ನು ಕೊಲೆ ಮಾಡಿದ್ದ ಹಂತಕ ಆರೋಪಿಗಳ ಕಾಲಿಗೆ ಕೋರಮಂಗಲ ಪೊಲೀಸರು ಬುಲೆಟ್ ಇಳಿಸಿದ್ದಾರೆ. ಬೇಗೂರು ಕೆರೆ ಸಮೀಪ ಇಬ್ಬರು ಆರೋಪಿಗಳು ಇರುವ ಖಚಿತ ಮಾಹಿತಿ ಆಧರಿಸಿ ತೆರಳಿದ್ದ ಪೊಲೀಸರ ಮೇಲೆ ಹಂತಕ ಆರೋಪಿಗಳು ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪಿಎಸ್ಐ ಗೆ ಸಣ್ಣ ಗಾಯವಾಗಿದೆ. ಆತ್ಮರಕ್ಷಣೆಗಾಗಿ ಶೂಟ್ ಮಾಡಿದ್ದು, ಇಬ್ಬರ ಕಾಲುಗಳಿಗೆ ಪೆಟ್ಟಾಗಿ ಕುಸಿದು ಬಿದ್ದಿದ್ದಾರೆ.
ರವಿ ಹಾಗೂ ಪ್ರದೀಪ್ ಅಲಿಯಾಸ್ ಚೊಟ್ಟೆ ಗುಂಡೇಟು ತಿಂದು ಆಸ್ಪತ್ರಗೆ ದಾಖಲಾಗಿರುವ ಆರೋಪಿಗಳು. ಹಳೇ ದ್ವೇಷದ ಹಿನ್ನೆಲೆಯಲ್ಲಿ ಆಡುಗೋಡಿ ರೌಡಿ ಶೀಟರ್ ಬಬ್ಲಿಯನ್ನು ಕೋರಮಂಗಲದ ಎಂಟನೇ ಬ್ಲಾಕ್ ನಲ್ಲಿರುವ ಬ್ಯಾಂಕ್ನೊಳಗೆ ನುಗ್ಗಿ ಹತ್ಯೆ ಮಾಡಿದ್ದರು. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ಕೃತ್ಯ ನೋಡಿ ಬ್ಯಾಂಕ್ ಸಿಬ್ಬಂದಿ ಬೆಚ್ಚಿಬಿದ್ದಿದ್ದರು. ಬ್ಯಾಂಕ್ನಲ್ಲಿ ನಡೆದ ಹತ್ಯೆ ಬೆಂಗಳೂರು ಪೊಲೀಸರ ನಿದ್ದೆ ಗೆಡಿಸಿತ್ತು. ಎರಡು ಪ್ರತ್ಯೇಕ ತಂಡಗಳನ್ನು ರಚಿಸಿ ಆರೋಪಿಗಳ ಶೋಧ ಕಾರ್ಯ ಮಾಡಲಾಗುತ್ತಿತ್ತು.

Recommended Video
ಬೇಗೂರು ಲೇಕ್ ಸಮೀಪ ಬಬ್ಲಿ ಕೊಲೆ ಆರೋಪಿಗಳು ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕೋರಮಂಗಲ ಠಾಣೆ ಪಿಎಸ್ಐ ಸಿದ್ದಪ್ಪ ಹಾಗೂ ಸಿಬ್ಬಂದಿ ತೆರಳಿದ್ದರು. ಪ್ರದೀಪ್ ಮತ್ತು ರವಿ ಅವರನ್ನು ವಶಕ್ಕೆ ಪಡೆಯಲು ಯತ್ನಿಸಿದ ವೇಳೆ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ರವಿ ಮತ್ತು ಪ್ರದೀಪ್ ಕಾಲಿಗೆ ಗುಂಡು ಬಿದ್ದು ಕುಸಿದು ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳು ಪಿಎಸ್ಐ ಹಾಗೂ ಎಎಸ್ಐ ಸಹ ಚಿಕಿತ್ಸೆ ಪಡೆದಿದ್ದಾರೆ. ತಲೆ ಮರೆಸಿಕೊಂಡಿರುವ ಇತರೆ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications