ಇಂದಿರಾನಗರದಲ್ಲಿ ಕಂಡ ಕಂಡವರ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ಯಾರು?
ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಷ್ಠಿತ ಏರಿಯಾಗಳಲ್ಲಿ ಒಂದಾದ ಇಂದಿರಾನಗರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಇಲ್ಲಿನ ನಿವಾಸಿಗಳು ಭಯಭೀತರಾಗಿದ್ದಾರೆ. ಕಳೆದ ಶನಿವಾರ ಇಂದಿರಾನಗರದಲ್ಲಿ ಮೂರು ಜನರಿಗೆ ಚೂರಿ ಇರಿತದ ಘಟನೆಗಳು ವರದಿಯಾಗಿವೆ. ಈ ಘಟನೆ ಬಳಿಕ ನಿವಾಸಿಗಳು ಮತ್ತು ಅಂಗಡಿಮುಂಗಟ್ಟಿನವರು ಭಯದಲ್ಲೇ ಮುಳುಗಿದ್ದಾರೆ.
ಸುಮಾರು 20 ವರ್ಷದ ಯುವಕನೊಬ್ಬ ಈ ಕೃತ್ಯ ಎಸಗಿರುವ ಶಂಕೆ ಇದೆ. ದಾಳಿಯ ವೇಳೆ ಕಪ್ಪು ಟೋಪಿ, ಕೆಂಪು ಟಿ-ಶರ್ಟ್ ಮತ್ತು ಬಿಳಿ ಪ್ಯಾಂಟ್ ಧರಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಫೆಬ್ರವರಿ 8ರಂದು ಇಲ್ಲಿನ 100 ಅಡಿ ರಸ್ತೆಯ ಬಳಿ ಸುಮಾರು ರಾತ್ರಿ 9.30ರಿಂದ 10 ಗಂಟೆಯ ನಡುವೆ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇಬ್ಬರು ಪಾನಿಪುರಿ ಮಾರಾಟಗಾರರು ಹಾಗೂ ಬೈಕ್ ಸವಾರ ಸೇರಿ ಮೂವರಿಗೆ ಚೂರಿಯಿಂದ ಇರಿಯಲಾಗಿದೆ.

ಆತ ಡ್ರಾಪ್ ಕೇಳಿದ ನಂತರ ತನ್ನ ಮೇಲೆ ದಾಳಿ ಮಾಡಿದ ಎಂದು ಬೈಕ್ ಸವಾರ ತಿಳಿಸಿದ್ದಾನೆ. ಊಟ ಸಿಗದಿದ್ದಕ್ಕೆ ಅಥವಾ ಹಣ ಪಾವತಿ ವಿಚಾರವಾಗಿ ತಪ್ಪು ತಿಳುವಳಿಕೆಯಿಂದ ಆತ ಚೂರಿಯಿಂದ ಇರಿದು ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ನಿವಾಸಿಗಳು ಭಯಪಡಬೇಡಿ ಎಂದು ಮನವಿ ಮಾಡಿದ್ದಾರೆ. ಅಲ್ಲದೆ ಶಂಕಿತನನ್ನು ಗುರುತಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ಹೇಳಿದ್ದಾರೆ.
ಆದರೆ ಈ ಘಟನೆ ನಡೆದ ಬಳಿಕವೂ ಇಲ್ಲಿನ ನಿವಾಸಿಗಳು ಭಯದಲ್ಲೇ ಇದ್ದಾರೆ ಎಂದು ಹೇಳಲಾಗುತ್ತಿದೆ. ಇಲ್ಲಿನ 100 ಫೀಟ್ ರಸ್ತೆಯಲ್ಲಿರುವ ಕುಂಡ್ ಇಂಡಿಯನ್ ಬಾರ್ಬೆಕ್ಯು ಹೋಟೆಲ್ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ತನ್ನ 28 ವರ್ಷಗಳಲ್ಲೇ ಕಂಡ ಅತ್ಯಂತ ಭಯಾನಕ ಘಟನೆ ಎಂದು ಸ್ಥಳೀಯರು ವಿವರಿಸಿದ್ದಾರೆ.

ಒಬ್ಬ ಬಡ ಪಾನಿ ಪುರಿ ಮಾರಾಟಗಾರನ ಮೇಲೆ ಯಾವುದೇ ಕಾರಣವಿಲ್ಲದೆ ಚೂರಿ ಇರಿಯಲಾಗಿದೆ. ಅದನ್ನು ನಾನು ನೋಡಿದೆ. ಅಲ್ಲಿ ಯಾವುದೇ ವಾದವಿಲ್ಲ, ಯಾವುದೇ ಪ್ರಚೋದನೆಯೂ ಇರಲಿಲ್ಲ. ಎಲ್ಲವೂ ಸರಿಯಾಗಿತ್ತು, ಆದರೆ ನಂತರ ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಹೇಳಿದ್ದಾರೆ. ಅಂದು ರಾತ್ರಿ 9.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಆ ಘಟನೆ ನಡೆದ ನಂತರ ಇಲ್ಲಿನ ಪಾನಿ ಪುರಿ ಸ್ಟಾಲ್ ಮತ್ತು ಚಿಕನ್ ಮತ್ತು ಮೊಮೊಸ್ ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಲಾಗಿದೆ.
ಶನಿವಾರ ರಾತ್ರಿ ವಿನಾಕಾರಣ ಮೂರು ಮಂದಿ ಮೇಲೆ ಹಲ್ಲೆಯಾಗಿದೆ. ಹಲ್ಲೆಗೊಳಗಾದ ನಾಲ್ವರ ಪೈಕಿ ಇಬ್ಬರು ಪಾನಿ ಪುರಿ ಮಾರಾಟಗಾರರು ಹಾಗೂ ಇಬ್ಬರು ಲಿಫ್ಟ್ ನೀಡಲು ನಿರಾಕರಿಸಿದವರು. ಇವರ ಮೇಲೆ ರೌಡಿಶೀಟರ್ವೊಬ್ಬ ದಾಳಿ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ. ಹಲ್ಲೆಗೆ ಒಳಗಾದವರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಮೂರು ಕೊಲೆ ಯತ್ನ ಹಾಗೂ ದರೋಡೆ ಕೇಸ್ ದಾಖಲಿಸಿದ್ದಾರೆ.
ಸದ್ಯ ದಾಳಿ ನಡೆಸಿರುವ ಆರೋಪಿಯನ್ನು ಭಿನ್ನಮಂಗಲ ನಿವಾಸಿ ಕದಂಬ ಎಂದು ಗುರುತಿಸಲಾಗಿದೆ. ಈತ ಹಲ್ಲೆ, ಸುಲಿಗೆ ಕೃತ್ಯಗಳಲ್ಲಿ ಕುಖ್ಯಾತಿ ಗಳಿಸಿದ್ದು, 2024ರಲ್ಲಿ ಇಂದಿರಾನಗರ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿತ್ತು. ಜೈಲು ಸೇರಿ ಹೊರಬಂದಿರುವ ಈತ ಮತ್ತೆ ಸರಣಿ ಅಪರಾಧಗಳಲ್ಲಿ ತೊಡಗಿ ಆತಂಕ ಸೃಷ್ಟಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಇಂದಿರಾನಗರದಲ್ಲಿ ತನ್ನ ಹವಾ ತೋರಿಸಲು ಸ್ಥಳೀಯರು ಮತ್ತು ಅಂಗಡಿ ಮಾರಾಟಗಾರರನ್ನು ಬೆದರಿಸುತ್ತಿದ್ದ ಎನ್ನಲಾಗಿದೆ.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications