ಜೈಲಿನಿಂದ ಬಂದ ಒಂದೇ ವಾರಕ್ಕೆ ಡ್ರ್ಯಾಗರ್ ನಿಂದ ಹಲ್ಲೆ

ಬೆಂಗಳೂರು, ಜನವರಿ 18: ಜೈಲಿನಿಂದ ಬಿಡುಗಡೆಯಾಗಿ ಒಂದು ವಾರ ಕಳೆಯುವ ಡ್ರಾಗರ್ ನಿಂದ ಚುಚ್ಚಿ ವ್ಯಕ್ತಿಯ ಹತ್ಯೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಗಿರಿನಗರ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಗೊಣ್ಣೆವಿಜಿ ಎಂಬ ಕಿರಾತಕ ರೌಡಿ ಗುಂಡೇಟು ತಿಂದ ರೌಡಿ ಶೀಟರ್. ಸುಮಾರು ಹದಿನೆಂಟು ಕೊಲೆ, ಕೊಲೆ ಯತ್ನ, ಬೆದರಿಕೆ ಪ್ರಕರಣ ಎದುರಿಸುತ್ತಿರುವ ವಿಜಯ್ ಕುಮಾರ್ ಅಲಿಯಾಸ್ ಗೊಣ್ಣೆ ವಿಜಿ ಜೈಲಿಗೆ ಹೋಗಿದ್ದ. ಒಂದು ವಾರದ ಹಿಂದಷ್ಟೇ ಜಾಮೀನು ಮೇಲೆ ಬಿಡುಗಡೆಯಾಗಿ ಹೊರಗೆ ಬಂದಿದ್ದ. ಒಂದು ವಾರ ಕಳೆಯುವಷ್ಟರಲ್ಲಿ ವ್ಯಕ್ತಿಯೊಬ್ಬರಿಗೆ ಡ್ರ್ಯಾಗರ್ ನಿಂದ ಚುಚ್ಚಿ ಮಾರಣಾಂತಿಕ ಹಲ್ಲೆ ನಡೆಸಿದ್ದ. ಈ ಕುರಿತು ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Bengaluru; Rowdy sheeter shot in leg during police chase

ರೋಡ್‌ನಲ್ಲಿ ವ್ಹೀಲಿಂಗ್ ಮಾಡುವ ಜತೆಗೆ ಸಾರ್ವಜನಿಕರನ್ನು ಅಡ್ಡಗಟ್ಟಿ ಚಾಕುವಿನಿಂದ ಹೆದರಿಸಿ ಸುಲಿಗೆ ಮಾಡುತ್ತಿದ್ದ. ಜೈಲಿನಿಂದ ಬಿಡುಗಡೆಯಾಗಿದ್ದ ಗೊಣ್ಣೆ ವಿಜಿ ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Bengaluru; Rowdy sheeter shot in leg during police chase

Recommended Video

      karkala , nippani , ಬೆಳಗಾವಿ ಮಹಾರಾಷ್ಟ್ರ ಗೆ ಸೇರಬೇಕಂತೆ !! | Oneindia Kannada

      ಭಾನುವಾರ ರಾತ್ರಿ ಆರೋಪಿ ವೀರಭದ್ರನಗರ ಬಳಿ ಇರುವ ಖಚಿತ ಮಾಹಿತಿ ದೊರೆತಿತ್ತು. ಗಿರಿನಗರ ಸಬ್‌ ಇನ್‌ಸ್ಪೆಕ್ಟರ್ ವಿನಯ್ ಹಾಗೂ ಸಿಬ್ಬಂದಿ ಬಂಧನಕ್ಕೆ ತೆರಳಿದಾಗ, ಗೊಣ್ಣೆ ವಿಜಿ ಡ್ರ್ಯಾಗರ್ ನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಪಿಎಸ್ಐ ಆತ್ಮ ರಕ್ಷಣೆಗಾಗಿ ಪಿಎಸ್ಐ ವಿನಯ್ ಗುಂಡು ಹಾರಿಸಿದ್ದಾರೆ. ಕಾಲಿಗೆ ಗುಂಡು ಬಿದ್ದು ಕುಸಿದು ಬಿದ್ದ ರೌಡಿ ಶೀಟರ್ ಗೊಣ್ಣೆ ವಿಜಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ಪೊಲೀಸ್ ಕಾನ್‌ಸ್ಟೇಬಲ್ ಕೂಡ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+