ಮಾಜಿ ಪತ್ನಿಗೆ ಮಧ್ಯರಾತ್ರಿ ಕರೆ ಮಾಡಿದವನಿಗೆ ನಮ್ಮೂರ ತಿಂಡಿ ಹೋಟೆಲ್ ಬಳಿ ಆಗಿದ್ದೇ ಬೇರೆ !
ಬೆಂಗಳೂರು, ಮಾ. 26: ಅವನೊಬ್ಬ ರೌಡಿ ಶೀಟರ್. ಮಧ್ಯ ರಾತ್ರಿಯಲ್ಲಿ ತನ್ನ ಪತ್ನಿ ಜತೆ ಎಕಾಂತದಲ್ಲಿ ಕಾಲ ಕಳೆಯುತ್ತಿದ್ದ. ಈ ವೇಳೆ ಆಕೆಯ ಮೊಬೈಲ್ ಗೆ ಕರೆ ಬಂದಿತ್ತು. ಆತ ಬೇರೆ ಯಾರೂ ಅಲ್ಲ. ಈ ಹಿಂದೆ ಆತನ ಜತೆ ಈಕೆ ಲಿವಿಂಗ್ ಟುಗೆದರ್ ಇದ್ದಳು. ಅಮೇಲೆ ನಡೆದಿದ್ದೇ ಬೇರೆ..!
ಮಧ್ಯ ರಾತ್ರಿಯಲ್ಲಿ ತನ್ನ ಪತ್ನಿಗೆ ಕರೆ ಮಾಡಿದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಸಂಚು ಹಾಕಿದ್ದ ರೌಡಿ ಶೀಟರ್ ಮತ್ತು ಅತನ ನಾಲ್ವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಮಾರ್ ನಾಯ್ಡು, ಯಶವಂತ್, ಕಾರ್ತಿಕ್ , ವಿಶಾಲ್ ಹಾಗೂ ಸಂಜಯ್ ಬಂಧಿತ ಆರೋಪಿಗಳು. ಶ್ರೀಕಾಂತ್ ನನ್ನು ನಾಗರಬಾವಿ ವೃತ್ತದ ಕಾರ್ ಶೆಡ್ ನಲ್ಲಿ ಕೂಡಿ ಹಾಕಿ ಹಲ್ಲೆ ಮಾಡುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಆಕೆ ಹೆಸರು ಮಂಜುಶ್ರೀ ಹತ್ತು ವರ್ಷದ ಹಿಂದೆ ಮದುವೆಯಾಗಿದ್ದ ತನ್ನ ಗಂಡನಿಗೆ ವಿಚ್ಛೇದನ ನೀಡಿದ್ದಳು. ಆ ಬಳಿಕ ಪರಿಚಯವಾಗಿದ್ದ ಶ್ರೀಕಾಂತ್ ಎಂಬಾತನ ಜತೆ ಮಂಜುಶ್ರೀ ವಾಸವಾಗಿದ್ದಳು. ಹಲವು ವರ್ಷದಿಂದ ಇಬ್ಬರೂ ಗಂಡ ಹೆಂಡತಿ ತರನೇ ಸಹ ಜೀವನ ನಡೆಸುತ್ತಿದ್ದರು. ಇತ್ತೀಚೆಗೆ ಶ್ರೀಕಾಂತ್ ನನ್ನು ಬಿಟ್ಟು ಮಂಜುಶ್ರೀ ರಾಜಾಜಿನಗರ ಮಾಜಿ ರೌಡಿ ಶೀಟರ್ ಅರುಣ್ ನಾಯ್ಡು ಜತೆ ಗುರುತಿಸಿಕೊಂಡಿದ್ದಳು. ಆತನೊಂದಿಗೆ ಜೀವನ ಸಾಗಿಸುತ್ತಿದ್ದಳು.

ಇತ್ತೀಚೆಗೆ ಶ್ರೀಕಾಂತ್ ಮಧ್ಯ ರಾತ್ರಿ ಮಂಜುಶ್ರೀಗೆ ಕರೆ ಮಾಡಿದ್ದಾನೆ. ತನ್ನ ಪತ್ನಿಗೆ ಕರೆ ಮಾಡಿದ ಎಂಬ ಕಾರಣದಿಂದ ಅರಣ್ ತನ್ನ ಸ್ನೇಹಿತರ ಜತೆಗೂಡಿ ನಾಗರಬಾವಿಯ ನಮ್ಮೂರ ತಿಂಡಿ ಬಳಿ ಕರೆಸಿಕೊಂಡಿದ್ದಾನೆ. ಅಲ್ಲಿನ ಕಾರ್ ವಾಷಿಂಗ್ ಸೆಂಟರ್ ಗೆ ಕರೆದುಕೊಂಡು ಹೋಗಿ ಶ್ರೀಕಾಂತ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುವ ವಿಡಿಯೋ ವೈರಲ್ ಆಗಿದೆ. ಅರುಣ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೂ ಬಿಡದೇ ಹಲ್ಲೆ ಮಾಡಿದ್ದು, ಈ ಕುರಿತು ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದರ ಬೆನ್ನಲ್ಲೇ ಶ್ರೀಕಾಂತ್ ಹತ್ಯೆಗೆ ಅರುಣ್ ಸಂಚು ರೂಪಿಸಿದ್ದು, ಮಾಹಿತಿ ಆಧರಿಸಿ ಅರುಣ್ ಕುಮಾರ್ ಮತ್ತು ಆತನ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಹಿಳೆ ವಿಚಾರವಾಗಿ ನಡೆದ ಜಗಳದ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications